Tuesday, 22nd October 2024

ಜನಹಿತ ಬಜೆಟ್: ಇಕ್ಬಾಲ್ ನದಾಫ

ಕೊಲ್ಹಾರ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕುವ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಇಕ್ಬಾಲ್ ನದಾಫ ಹೇಳಿದ್ದಾರೆ.

ಬಜೆಟ್ ಮಂಡನೆಯಲ್ಲಿ ಎಲ್ಲಾ ರಂಗಕ್ಕೂ ವಿಶೇಷ ಒತ್ತು ನೀಡಲಾಗಿದೆ. ಪ್ರಸ್ತುತ ಬಜೆಟ್ ನಿಂದ ರಾಜ್ಯದ ಆರ್ಥಿಕಾಭಿವೃದ್ಧಿ ಏರುಗತಿಯಲ್ಲಿ ಸಾಗಲಿದೆ. ಒಟ್ಟಾರೆ ಇದು ಜನಪ್ರಿಯ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.