Friday, 20th September 2024

ಸ್ಮಶಾನದ ಗೇಟ್‌ ನಿರ್ಮಾಣ ವಿಚಾರಕ್ಕೆ ಮಾರಾಮಾರಿ

ಜೋಧ್‌ಪುರ: ಸ್ಮಶಾನದ ಗೇಟ್‌ ನಿರ್ಮಾಣ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ರಾಜಸ್ಥಾನದ ಜೋಧ್‌ಪುರ ದಲ್ಲಿ ನಡೆದಿದೆ.

ಸೂರ್‌ ಸಾಗರ್‌ ಪ್ರದೇಶದಲ್ಲಿರುವ ರಾಜಗ್ರಾಮ್‌ ಸರ್ಕಲ್‌ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಈದ್ಗಾ ಮಸೀದಿಯ ಹಿಂದೆ ನಿರ್ಮಾಣ ಹಂತದಲ್ಲಿರುವ ಗೋಡೆ ಮತ್ತು ಗೇಟ್‌ ವಿಚಾರವಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಗಲಾಟೆ ನಡೆದಿತ್ತು. ಘಟನೆಯಲ್ಲಿ ಪೊಲೀಸರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.