Thursday, 19th September 2024

Mangalore News: ಮಸೀದಿ ಮೇಲೆ ಕಲ್ಲು ತೂರಾಟ, ಸುರತ್ಕಲ್‌ನಲ್ಲಿ ಆತಂಕ

mangalore news

ಮಂಗಳೂರು: ಮಂಗಳೂರಿನ ಹೊರವಲಯದ (Mangalore news) ಸುರತ್ಕಲ್​​ (Suratkal) ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ (Masjid) ಮೇಲೆ ಕಲ್ಲು ತೂರಾಟ (Stone Pelting) ನಡೆದಿದೆ. ಇದು ಕೋಮು ಸೂಕ್ಷ್ಮ ಪ್ರದೇಶ (Communal tensions) ಎಂದು ಗುರುತಿಸಲ್ಪಟ್ಟಿದ್ದು, ಪ್ರಕರಣ ಆತಂಕಕ್ಕೆ ಕಾರಣವಾಗಿದೆ.

ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲ್ಲು ತೂರಾಟದ ಬಳಿಕ ಇಲ್ಲಿ ಜಮ ಜಮಾಯಿಸಿದರು.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಕೋಮು ಗಲಭೆಯ ಕಿಚ್ಚು ಆರುವ ಮುನ್ನವೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಸೀದಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ; ವೇದಿಕೆಗೆ ನುಗ್ಗಿದ ವ್ಯಕ್ತಿ

Leave a Reply

Your email address will not be published. Required fields are marked *