Tuesday, 24th September 2024

Yogi Adityanath : ಬಾಣಸಿಗರಿಗೆ ಮಾಸ್ಕ್‌, ಗ್ಲವ್ಸ್‌ ಕಡ್ಡಾಯಗೊಳಿಸಿದ ಯೋಗಿ

Yogi Adityanath

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ರಾಜ್ಯದಾದ್ಯಂತ ಆಹಾರ ಸಂಸ್ಥೆಗಳಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಈ ಹೊಸ ಕ್ರಮಗಳ ಭಾಗವಾಗಿ ಬಾಣಸಿಗರು ಮತ್ತು ಪರಿಚಾರಕರು ಈಗ ಕರ್ತವ್ಯದಲ್ಲಿರುವಾಗ ಮಾಸ್ಕ್‌ ಮತ್ತು ಗ್ಲವ್ಸ್‌ಗಳನ್ನು ಧರಿಸಬೇಕಾಗುತ್ತದೆ ಮತ್ತು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯ. ಹೆಚ್ಚುವರಿಯಾಗಿ ಮಾಲೀಕರು ಮತ್ತು ವ್ಯವಸ್ಥಾಪಕರು ತಮ್ಮ ಹೆಸರುಗಳು ಮತ್ತು ವಿಳಾಸಗಳನ್ನು ಎಲ್ಲಾ ಆಹಾರ ಮತ್ತು ಪಾನೀಯ ಅಂಗಡಿಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ಹೇಳಿದೆ.

ತಿರುಪತಿಯಲ್ಲಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಮತ್ತು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಬಳಿಕ ಉಂಟಾದ ವಿವಾದದ ನಡುವೆ ಈ ಆದೇಶ ಜಾರಿಗೊಳಿಸಿದೆ.

ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಘೋಷಿಸಲಾದ ಈ ಹೊಸ ನಿಯಮಗಳು ದೇಶದ ವಿವಿಧ ಭಾಗಗಳಲ್ಲಿ ಆಹಾರ ಮಾಲಿನ್ಯದ ಆತಂಕಕಾರಿ ಘಟನೆಗಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ ಎನ್ನಲಾಗಿದೆ.

ಜ್ಯೂಸ್, ಬೇಳೆಕಾಳು ಮತ್ತು ಬ್ರೆಡ್‌ನಂಥ ಆಹಾರ ಪದಾರ್ಥಗಳಿಗೆ ಅನ್ಯ ವಸ್ತುಗಳನ್ನು ಸೇರಿಸುವುದು ಅಸಹ್ಯಕರ ಮತ್ತು ಸ್ವೀಕಾರಾರ್ಹವಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಒತ್ತಿ ಹೇಳಿದರು.

ಈ ಕಾನೂನಿನ ಭಾಗವಾಗಿ ತಪಾಸಣೆ ಅಭಿಯಾನ ನಡೆಯಲಿದೆ. ಪ್ರತಿ ಸಿಬ್ಬಂದಿಯ ಪೊಲೀಸ್ ಪರಿಶೀಲನೆಗೆ ಒಳಪಡಿಸಲಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಪೊಲೀಸ್ ಮತ್ತು ಸ್ಥಳೀಯ ಅಧಿಕಾರಿಗಳ ಜಂಟಿ ತಂಡಗಳು ತಪಾಸಣೆ ನಡೆಸಲಿವೆ ಎಂದು ಹೇಳಿದರು.

ಇದನ್ನೂ ಓದಿ: Tirupati Laddu Row: ತಿರುಪತಿ ಲಡ್ಡು ಬಗ್ಗೆ ವಿವಾದಾತ್ಮಕ ಹೇಳಿಕೆ; ಪವನ್‌ ಕಲ್ಯಾಣ್‌ ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ನಟ ಕಾರ್ತಿ

ಆಹಾರ ಸುರಕ್ಷತೆಯನ್ನು ಹೆಚ್ಚಿಸಲು, ರಾಜ್ಯ ಸರ್ಕಾರವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಗೆ ತಿದ್ದುಪಡಿಗಳನ್ನು ಪರಿಗಣಿಸುತ್ತಿದೆ, ಇದು ತಿನಿಸುಗಳು ತಮ್ಮ ನಿರ್ವಾಹಕರ ಬಗ್ಗೆ ಪ್ರಮುಖ ಮಾಹಿತಿಯನ್ನು ಪ್ರಮುಖವಾಗಿ ಪ್ರದರ್ಶಿಸುವುದನ್ನು ಮತ್ತು ಕಠಿಣ ನೈರ್ಮಲ್ಯ ಅಭ್ಯಾಸಗಳನ್ನು ನಿರ್ವಹಿಸುವುದನ್ನು ಕಡ್ಡಾಯಗೊಳಿಸುತ್ತದೆ.

ಆಹಾರ ಸಂಸ್ಥೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಗ್ರಾಹಕರ ಸುರಕ್ಷತೆಗಾಗಿ ಮಾತ್ರವಲ್ಲದೆ ಆಹಾರ ತಯಾರಿಸುವ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡುವ ಉದ್ದೇಶ ಹೊಂದಿದೆ. ಈ ಕ್ಯಾಮೆರಾಗಳ ತುಣುಕನ್ನು ಸುರಕ್ಷಿತವಾಗಿ ಸಂಗ್ರಹಿಸಲಾಗುವುದು. ಅಗತ್ಯವಿದ್ದಾಗ ಅಧಿಕಾರಿಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಮತ್ತು ದುಷ್ಕೃತ್ಯಗಳನ್ನು ತಡೆಯಲಾಗುವುದು ಎಂದು ಹೇಳಿದರು.