Friday, 25th October 2024

Drowns in River: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರು ಪಾಲು!

ಕಲಬುರಗಿ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆಯು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ಜರುಗಿದೆ. ಭೂಮಿಕಾ ದೊಡ್ಡಮನಿ (8) ಮತ್ತು ಶ್ರಾವಣಿ ನಾಟಿಕಾರ್ (11) ನೀರು ಪಾಲಾದ (Drowns in River) ಬಾಲಕಿಯರು. ಭೀಮಾ ನದಿಯಲ್ಲಿ (Bhima River) ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು, ಬಟ್ಟೆ ತೊಳೆದ ನಂತರ ನದಿಯಲ್ಲಿ ಈಜಾಡಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.

ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಭೂಮಿಕಾ ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ದುರಾದೃಷ್ಟವಶಾತ್ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಸದ್ಯ ಚಿಂಚೋಳಿ ಗ್ರಾಮದ ಶ್ರಾವಣಿ ನಾಟೀಕಾರ್(11) ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಭೂಮಿಕಾ ದೊಡ್ಡಮನಿ ಶವಕ್ಕಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ.

ಈ ಸುದ್ದಿಯನ್ನೂ ಓದಿ | Renuka swamy Murder Case: ರೇಣುಕಾಸ್ವಾಮಿ ಕೊಲೆ ಆರೋಪಿ ಮತ್ತೆ ಬೆಂಗಳೂರು ಜೈಲಿಗೆ ಶಿಫ್ಟ್‌; ದರ್ಶನ್‌ಗೆ ಬಳ್ಳಾರಿಯೇ ಗತಿ

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.