Wednesday, 23rd October 2024

Crime News: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ

ಒಬ್ಬನನ್ನು ವಶಕ್ಕೆ ಪಡೆದು ಬಂಧಿಸಿದ ಪೊಲೀಸರು

ಚಿಂತಾಮಣಿ ನಗರ ಪೊಲೀಸ್ ಠಾಣೆಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

ಚಿಕ್ಕಬಳ್ಳಾಪುರ ರಕ್ಷಣಾಧಿಕಾರಿಗಳಾದ  ಕುಶಲ್ ಚೌಕ್ಸೆ,ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜಾ ಇಮಾಮ್ ಖಾಸಿಂ ರವರ ಮಾರ್ಗದರ್ಶನದಲ್ಲಿ ಚಿಂತಾಮಣಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ  ಮುರುಳಿಧರ ನೇತೃತ್ವದ ತಂಡ ಚಿಂತಾಮಣಿ ನಗರ ಭಾಗದ ಎನ್ ಆರ್ ಬಡಾವಣೆಯ ಮನೆಯ ಮೇಲೆ ದಾಳಿ ಮಾಡಿ ವೇಶ್ಯಾ ವಾಟಿಕೆ ದಂಧೆ ನಡೆಸುತ್ತಿದ್ದ ವಿನೋದ್ ಕುಮಾರ್ ಬಿನ್ ಲೇಟ್ ನಾರಾಯಣಸ್ವಾಮಿ, 32 ವರ್ಷ ಗೋಪಲ್ಲಿ ಗ್ರಾಮ ಚಿಂತಾಮಣಿ ತಾಲ್ಲೂಕು ವಶಕ್ಕೆ ಪಡೆದುಕೊಂಡು ವೇಶ್ಯವಾಟಿಕೆ ದಂಧೆಯಲ್ಲಿ ಗಳಿಸಿದ್ದ 1100/- ರೂ ನಗದು ಹಣ,ದ್ವಿಚಕ್ರ ವಾಹನ ಒಂದು ವಶಕ್ಕೆ ಪಡೆದು ಮನೆಯ ಮಾಲೀಕರ ವಿರುದ್ಧ ಪ್ರಕರಣ  ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ದಾಳಿಯಲ್ಲಿ ಚಿಂತಾಮಣಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮುರಳಿಧರ, ಚಿಂತಾಮಣಿ ನಗರ ಠಾಣೆಯ ಪಿ.ಎಸ್.ಐ.ನಾರಾಯಣಸ್ವಾಮಿ, ಸಿಬ್ಬಂದಿಯ ಅಂಜನಾರೆಡ್ಡಿ ಗಂಗರಾಜು ಸುನೀತಾ ಪಾಲ್ಗೊಂಡಿದ್ದು ಇವರ ಉತ್ತಮ ಕಾರ್ಯವನ್ನು ಜಿಲ್ಲಾ ವರಿಷ್ಠಾಧಿಕಾರಿಗಳು ಶ್ಲಾಘನೆ ಮಾಡಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: Crime News: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಆರೆಸ್ಟ್