Wednesday, 23rd October 2024

Chandrababu Naidu : ಹೆಚ್ಚು ಮಕ್ಕಳನ್ನು ಹೆರಲು ಪ್ರೋತ್ಸಾಹಕ್ಕೆ ಕಾನೂನು ತರಲಿದ್ದಾರೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು!

Chandrababu Naidu

ಹೈದರಾಬಾದ್‌: ದಕ್ಷಿಣದ ರಾಜ್ಯಗಳಲ್ಲಿ ಹಿರಿಯನಾಗರಿಕರ ಸಂಖ್ಯೆಯೇ ಹೆಚ್ಚಾಗುತ್ತಿದ್ದು 2047ರ ವೇಳೆಗೆ ಸಮಸ್ಯೆ ಗಂಭೀರ ಸ್ವರೂಪ ಪಡೆಯಲಿದೆ. ಹೀಗಾಗಿ ಹೆಚ್ಚು ಮಕ್ಕಳನ್ನು ಹೊಂದುವ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬಹುದು. ಹೀಗಾಗಿ ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ನೆರವು ಪ್ರೋತ್ಸಾಹ ನೀಡಲು ಕಾನೂನು ಜಾರಿಗೊಳಿಸಲಾಗುವುದು ಎಂದು ಆಂಧ್ರಪ್ರದೇಶ ((Andhra Pradesh)) ಸಿಎಂ ಎನ್‌. ಚಂದ್ರಬಾಬು ನಾಯ್ಡು (( N Chandrababu Naidu) ) ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನು ಜಾರಿಗೊಳಿಸುವುದು ಸೇರಿದಂತೆ ʼಜನಸಂಖ್ಯೆ( population) ನಿರ್ವಹಣೆʼಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಅವರು ಶನಿವಾರ ಹೇಳಿದರು.

“ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ(Local self government) ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕುರಿತು ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಹಿಂದೆ ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸದಂತೆ ಕಾನೂನು ಇತ್ತು. ಆದರೆ ಈಗ ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ ಮತ್ತು ಈಗ ಅದನ್ನು ಹಿಂತೆಗೆದುಕೊಳ್ಳಲು ನಮ್ಮ ಸರ್ಕಾರ ಯೋಜನೆ ನಡೆಸುತ್ತಿದೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಬಹುದು,” ಎಂದು ಅವರು ಹೇಳಿದರು.

ಇದನ್ನೂ ಓದಿ: Yahya Sinwar: ಇಸ್ರೇಲಿ ಸೇನೆಯಿಂದ ಹತನಾದ ಯಹ್ಯಾ ಸಿಹ್ವಾರ್‌ನ ಮತ್ತೊಂದು ವಿಡಿಯೋ ವೈರಲ್‌

ನಮ್ಮಲ್ಲಿ ಜನಸಂಖ್ಯೆ ಇದ್ದರೂ 2047 ರ ಸರಿ ಸುಮಾರಿಗೆ ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ಹಿರಿಯ ನಾಗರಿಕರೇ ಜಾಸ್ತಿ ಕಾಣಿಸಿಕೊಳ್ಳುತ್ತಾರೆ. ಜಪಾನ್, ಚೀನಾ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ, ಹೆಚ್ಚಿನ ವಯಸ್ಸಾದ ಜನಸಂಖ್ಯೆ ಹೊಂದಿವೆ. ದಕ್ಷಿಣದಲ್ಲಿ ಭಾರತ, ಯುವಜನರು ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಈ ಸಮಸ್ಯೆ ಉಲ್ಬಣಗೊಂಡಿದೆ, ”ಎಂದು ಸಿಎಂ ಹೇಳಿದರು.

”ದಕ್ಷಿಣದ ರಾಜ್ಯಗಳಲ್ಲಿ ಫಲವತ್ತತೆ ದರವು ಈಗಾಗಲೇ 1.6 ಕ್ಕೆ ಇಳಿದಿದೆ. ಇದು ರಾಷ್ಟ್ರೀಯ ಸರಾಸರಿ 2.1 ಕ್ಕಿಂತ ಕಡಿಮೆಯಾಗಿದೆ. ಇದು ಇನ್ನೂ ಕಡಿಮೆಯಾದರೆ ನಾವು 2047 ರ ವೇಳೆಗೆ ಹೆಚ್ಚಿನ ಸಂಖ್ಯೆಯ ವೃದ್ಧರನ್ನು ನೋಡುತ್ತೇವೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಆಂಧ್ರ ಮತ್ತು ದೇಶದ ಇತರ ಭಾಗಗಳ ಅನೇಕ ಹಳ್ಳಿಗಳಲ್ಲಿ, ಕೇವಲ ವಯಸ್ಸಾದ ಜನರು ಮಾತ್ರ ಉಳಿದಿದ್ದಾರೆ. ಇಂದಿನ ಯುವ ಜನಸಂಖ್ಯೆಯು ನಗರಗಳಿಗೆ ತೆರಳಿದೆ.” ಎಂದರು

”ಮೊದಲು ಜನಸಂಖ್ಯೆಯ ನಿಯಂತ್ರಿಸಿವುದೇ ಕಷ್ಟವಾಗಿತ್ತು. ಆ ಸಮಯದಲ್ಲಿ, ವಿರಳ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವುದು ಒಂದು ದೊಡ್ಡ ಚಿಂತೆಯಾಗಿತ್ತು. ಬೆಳೆಯುತ್ತಿರುವ ಜನಸಂಖ್ಯೆಯು ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂಬ ನಂಬಿಕೆಯಾಗಿತ್ತು. ಈಗ ನಾವು ಜನಸಂಖ್ಯೆಯ ಬೆಳವಣಿಗೆಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಆದರೆ ಅದೇ ಈಗ ಹೊಸ ಸವಾಲುಗಳನ್ನು ತಂದಿದೆ ಎಂದರು.

2011ರ ಜನಗಣತಿಯ ಪ್ರಕಾರ ಆಂಧ್ರಪ್ರದೇಶ ಭಾರತದ 10ನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ರಾಜ್ಯವಾಗಿತ್ತು. ಆದರೆ ತೆಲಂಗಾಣ ಹಾಗೂ ಆಂಧ್ರಪ್ರದೇಶ ಬೇರೆಯಾದ ನಂತರ ಆಂಧ್ರ ಈ ಸಮಸ್ಯೆಯನ್ನು ಎದುರಿಸುತ್ತಿದೆ.