Saturday, 21st September 2024

ರಸ್ತೆಯಲ್ಲೇ ಧರಣಿ ಕುಳಿತಿದ್ದ ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಲಖನೌ: ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಭದ್ರತೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆಯಲ್ಲೇ ಧರಣಿ ಕುಳಿತಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಲೇಶ್ ಯಾದವ್ ರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಧರಣಿ ನಡೆಸುವುದನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಕೇಂದ್ರ ಕಚೇರಿ ಸುತ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಆ ಪೊಲೀಸ್ ರಕ್ಷಣೆ ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಅಖಿಲೇಶ್ ಯಾದವ್ ಧರಣಿ ನಡೆಸಲು ಮುಂದಾ ದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕರೆದೊಯ್ದರು.