Thursday, 19th September 2024

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದುವರಿದಿದೆ.

ದೇಶಾದ್ಯಂತ ರೈತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಹೋರಾಟಕ್ಕೆ ಮಹಿಳೆಯರು ಕೂಡ ಸಾಥ್ ನೀಡಲಿದ್ದಾರೆ. ಸೋಮವಾರ 8 ರಿಂದ ಸಂಜೆ 5 ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿಭಟನೆ ತೀವ್ರಗೊಳಿಸುವ ಭಾಗವಾಗಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ. ಕೃಷಿ ಕಾಯ್ದೆ ರದ್ದು ಮಾಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಲಾಗಿದ್ದು, ರೈತರ ಹೋರಾಟಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆಂಬಲ ನೀಡಿದ್ದು ಅವರೂ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ.