Thursday, 19th September 2024

ಮದುವೆ ದಿಬ್ಬಣದ ಖಾಸಗಿ ಬಸ್ ಮಗುಚಿ, ಐದು ಮಂದಿ ಸಾವು

ಕಾಸರಗೋಡು: ಪುತ್ತೂರು ಈಶ್ವರಮಂಗಲದಿಂದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿ ಯಾಗಿದ್ದು, ಐವರು ಮೃತಪಟ್ಟಿದ್ದಾರೆ.

ಕೊಡಗಿನ ಕರಿಕೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ ಪಾನತ್ತೂರು ಮೂಲಕ ಈ ಬಸ್ ಹೋಗುತ್ತಿತ್ತು. ಪಾನತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಮನೆಯೊಂದರ ಮೇಲೆ ಬಸ್ ಬಿದ್ದು ದುರಂತ ಸಂಭವಿಸಿದೆ.

ಬಸ್‌ನಲ್ಲಿದ್ದ 6೦ ಮಂದಿ ಯಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದು, ಅವರನ್ನು ಕಾಂಞಂಗಾಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐವರು ಮೃತಪಟ್ಟಿದ್ದಾರೆ.