Thursday, 19th September 2024

ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಪ್ರಧಾನಿ ಚಾಲನೆ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ, ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು,  ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ನೀಡಲಿದ್ದಾರೆ.

ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‌’ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ಸ್‌’ಪ್ರೆಸ್  (ದೈನಂದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌’ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ಸ್‌’ಪ್ರೆಸ್  (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ಸ್‌’ಪ್ರೆಸ್  (ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ ಎಕ್ಸ್‌’ಪ್ರೆಸ್  (ವಾರದಲ್ಲಿ ಒಂದು ದಿನ), ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ದೈನಂದಿನ) ಮತ್ತು ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ದೈನಂದಿನ) ಗಳಿಗೆ ಚಾಲನೆ ನೀಡಲಿದ್ದಾರೆ.