Thursday, 19th September 2024

8 ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.

ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ನೀಡಿದರು.

ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‌’ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ಸ್‌’ಪ್ರೆಸ್ (ದೈನಂದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌’ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ಸ್‌’ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ಸ್‌’ಪ್ರೆಸ್(ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ ಎಕ್ಸ್‌’ಪ್ರೆಸ್ (ವಾರದಲ್ಲಿ ಒಂದು ದಿನ), ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ದೈನಂದಿನ) ಮತ್ತು ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ದೈನಂದಿನ) ಗಳಿಗೆ ಮೋದಿ ಚಾಲನೆ ನೀಡಿದ್ದಾರೆ.