Thursday, 19th September 2024

ರಾಜಸ್ಥಾನದ ಕಾಂಗ್ರೆಸ್ ಶಾಸಕ ಶಕ್ತಾವತ್‌ ನಿಧನ

ಜೈಪುರ: ಲಿವರ್ ಗೆ ಸೋಂಕು ತಗುಲಿದ್ದರಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ಉದಯಪುರದ ವಲ್ಲಭನಗರ ಕ್ಷೇತ್ರದಿಂದ ಗೆದ್ದಿದ್ದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಲಿವರ್ ಗೂ ಸೋಂಕು ತಗುಲಿತ್ತು. ಹೀಗಾಗಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂತಹ ರಾಜಸ್ಥಾನದ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *