Friday, 20th September 2024

ಆಗ್ರಾ ಹೆದ್ದಾರಿ ಬಳಿ ಭೀಕರ ರಸ್ತೆ ಅಪಘಾತ: ಹತ್ತು ಮಂದಿ ಸಾವು

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡರು.

ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್-ಆಗ್ರಾ ಹೆದ್ದಾರಿ ಬಳಿ ಮಿನಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸೆಗಾಗಿ 50 ಸಾವಿರ ರೂ ನೀಡುವುದಾಗಿ ತಿಳಿಸಿದ್ದಾರೆ.