Friday, 20th September 2024

ಕುನ್ನಥೂರಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿಗಳ ದೇವಾಲಯ ಉದ್ಘಾಟನೆ

ಮಧುರೈ: ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಂ.ಜಿ.ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಸ್ಮರಣಾರ್ಥ ಕುನ್ನಥೂರಿನಲ್ಲಿ ನಿರ್ಮಿಸಲಾದ ದೇವಾಲಯವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಜಂಟಿಯಾಗಿ ಶನಿವಾರ ಉದ್ಘಾಟಿಸಿದರು.

ಎಂ.ಜಿ.ಆರ್ ಮತ್ತು ಜಯಲಲಿತಾ ಅವರ 400 ಕೆಜಿ ತೂಕದ ಪ್ರತಿಮೆಗಳನ್ನು ದೇವಾಲಯದಲ್ಲಿ ಸ್ಥಾಪಿಸಲಾಗಿದ್ದು, ಆಡಳಿತಾ ರೂಢ ಎಐಎಡಿಎಂಕೆ ಪಕ್ಷದ ಅಮ್ಮ ಪರವೈ ಅವರ ಪರವಾಗಿ ಕಂದಾಯ ಸಚಿವ ಆರ್.ಬಿ.ಉದಯಕುಮಾರ್ ನಿರ್ಮಿಸಿ ಕೊಟ್ಟಿದ್ದಾರೆ.

ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪಳನಿಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೆ ‘ಅಮ್ಮ’ (ಜಯಲಲಿತಾ) ಸರ್ಕಾರವನ್ನು ರಚಿಸುವುದಾಗಿ ಪ್ರತಿಜ್ಞೆ ಮಾಡಿದರು.