Thursday, 19th September 2024

ದೆಹಲಿ ಹಿಂಸಾಚಾರ: ಆರೋಪಿ ದೀಪ್ ಸಿಧು ಬಂಧನ

ನವದೆಹಲಿ: ನವದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ಪ್ರಮುಖ ಆರೋಪಿ ದೀಪ್ ಸಿಧು ಅನ್ನು ದೆಹಲಿ ಪೊಲೀಸರ ವಿಶೇಷ ತಂಡ ಮಂಗಳವಾರ ಬಂಧಿಸಿದೆ.

ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾ ಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡ ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು.

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರ ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

 

Leave a Reply

Your email address will not be published. Required fields are marked *