Thursday, 19th September 2024

ಉದ್ಯಮಿ ನವನೀತ್ ಕಾಲ್ರಾಗೆ ’ಇಡಿ’ ಬಿಸಿ

ನವದೆಹಲಿ: ಜಾರಿ ನಿರ್ದೇಶನಾಲಯವು ಶುಕ್ರವಾರ ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ   ಶೋಧ ನಡೆಸಿದೆ.

‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ದೆಹಲಿಯ ಹಲವೆಡೆ ಇಡಿ ಶೋಧ ನಡೆಸಿದೆ.

ಮೇ 5ರಂದು ದೆಹಲಿ ಪೊಲೀಸರು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣದಡಿ ಕಾಲ್ರಾ ವಿರುದ್ಧ ‍ಎಫ್‌ಐಆರ್‌ ದಾಖಲಿಸಿದ್ದರು. ಕಾಲ್ರಾಗೆ ಸಂಬಂಧಿಸಿದ ರೆಸ್ಟೊರೆಂಟ್‌ ಮತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 500 ಕ್ಕೂ ಹೆಚ್ಚು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದರ ಬೆನ್ನಲ್ಲೇ ಇಡಿಯು ಪಿಎಂಎಲ್‌ಎ ಕಾಯ್ದೆಯಡಿ ಕಾಲ್ರಾ ಮತ್ತು ಇತರರ ವಿರುದ್ಧ ದೂರ ದಾಖಲಿಸಿದೆ.

Leave a Reply

Your email address will not be published. Required fields are marked *