Friday, 20th September 2024

ರಾಜ್ಯಸಭೆ ಉಪನಾಯಕರಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇಮಕ

ನವದೆಹಲಿ: ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಹೆಸರಿಸಲಾಗಿದೆ.

ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ.