Friday, 20th September 2024

ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್’ಗೆ ನೋಟಿಸ್ ಜಾರಿ

ಮುಂಬೈ: ಜಾರಿ ನಿರ್ದೇಶನಾಲಯ ಆ.31ರಂದು ವಿಚಾರಣೆಗೆ ಹಾಜರಾಗುವಂತೆ, ಮಹಾರಾಷ್ಟ್ರ ಸಾರಿಗೆ ಸಚಿವ, ಶಿವಸೇನೆ ನಾಯಕ ಅನಿಲ್ ಪರಬ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳಮೋಕ್ಷಗೈಯ್ಯುವ ಬೆದರಿಕೆಯೊಡ್ಡಿದ್ದ ಸಚಿವ ರಾಣೆ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಅನಿಲ್ ಪರಬ್ ಸೂಚಿಸುತ್ತಿರುವ ವೀಡಿಯೋ ಕ್ಲಿಪ್ ಹರಿದಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ರಾಣೆ ಅವರನ್ನು ಗಸ್ಟ್ 24ರಂದೇ ಬಂಧಿಸಿದ್ದರೂ ಕೆಲವೇ ಗಂಟೆ ಗಳಲ್ಲಿ ಅವರಿಗೆ ಜಾಮೀನು ದೊರಕಿತ್ತು.

ಜಾರಿ ನಿರ್ದೇಶನಾಲಯದ ನೋಟಿಸ್‍ನಲ್ಲಿ ಯಾವುದೇ ನಿರ್ದಿಷ್ಟ ಪ್ರಕರಣದ ಉಲ್ಲೇಖವಿಲ್ಲ, ಆದರೆ ಆ.31ರಂದು 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅನಿಲ್ ಪರಬ್ ಹೇಳಿದ್ದಾರೆ. ಇಂತಹ ಬೆಳವಣಿಗೆ ನಡೆಯಬಹುದೆಂದು ನಿರೀಕ್ಷಿಸಿದ್ದೆವು. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ.