Thursday, 19th September 2024

ಕಾಯ್ದೆ ವಾಪಸ್ ಪಡೆಯದಿದ್ದರೆ, ನವೆಂಬರ್’ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ರೈತ ಸಂಘಟನೆಗಳ ಪ್ರತಿಭಟನೆ ಮುಕ್ತಾಯಗೊಂಡಿದೆ. ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಬಳಿಕ ಸಭೆ ನಡೆಸಿದ ಕೋಡಿಹಳ್ಳಿ ಚಂದ್ರ ಶೇಖರ್, ಬೆಂಗಳೂರಿನ ನಾಲ್ಕು ಭಾಗದಿಂದ ಪ್ರತಿಭಟನೆ ಆರಂಭಿಸಿ ಇದೀಗ ಪ್ರತಿಭಟನೆ ಅಂತ್ಯಗೊಳಿಸಲಾಗಿದೆ. ಅನ್ನದಾತರು ಪ್ರತಿಭಟನೆ ನಡೆಸಿ ಕೇಂದ್ರ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ನೀತಿ ಖಂಡಿಸಿದ್ದಾರೆ. ಹೆದ್ದಾರಿಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಕಳೆದ ಹತ್ತು ತಿಂಗಳಿಂದ ರೈತರು ದೇಶಾದ್ಯಂತ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೋವಿಡ್ ಸಂಕಷ್ಟದ ನಡುವೆ ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇಂದು ಪ್ರತಿಭಟನೆ ಅಂತ್ಯವಾಗಲಿದೆ. ಆದರೆ ಇನ್ನು ಕೂಡ ಕೃಷಿ ಕಾಯ್ದೆ ವಾಪಸ್ ಪಡೆಯದಿದ್ದರೆ ನವೆಂಬರ್ ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗುತ್ತದೆ.

ದೆಹಲಿಯಲ್ಲಿ ಮುಂದಿನ ಹೋರಾಟದ ಬಗ್ಗೆ ಸಂಯುಕ್ತ ಮೋರ್ಚಾ ತೀರ್ಮಾನಿಸಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *