Thursday, 19th September 2024

ಲಖೀಮ್’ಪುರದ ಖೇರಿ ಹಿಂಸಾಚಾರ: ಮೃತರ ಕುಟುಂಬಸ್ಥರಿಗೆ 45 ಲಕ್ಷ ರೂ. ಪರಿಹಾರ

ಲಖನೌ : ಉತ್ತರ ಪ್ರದೇಶದ ಲಖೀಮ್ ಪುರದ ಖೇರಿಯಲ್ಲಿ ನಡೆದ ಹಿಂಸಾಚಾರ ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ.

ಲಖೀಮ್ ಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 45 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 10 ಲಕ್ಷ ರೂ. ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ.

ಹಿಂಸಾಚಾರದಲ್ಲಿ ಮೃತಪಟ್ಟರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರದ ಜೊತೆಗೆ ಒಬ್ಬ ಕುಟುಂಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗು ವುದು ಎಂದು ರೈತರು ಮತ್ತು ಸರ್ಕಾರದ ಮಧ್ಯೆ ನಡೆದ ರಾಜಿ ಸಂಧಾನದ ವೇಳೆ ನಿರ್ಣಯ ಕೈಗೊಳ್ಳಲಾಗಿದೆ.