ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸಂದೇಶ
ಸುರ್ಜೇವಾಲಾ ಮೂಲಕ ಸಂದೇಶ ರವಾ
ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು
ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದು, ಇಲ್ಲಿಂದಲೇ ಕಾಂಗ್ರೆಸ್ ನ ಗೆಲುವಿನ ಅಭಿಯಾನ ಶುರುವಾಗಬೇಕಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ.
ಹೈಕಮಾಂಡ್ ನಾಯಕರ ಸಂದೇಶವನ್ನು ಹೊತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಈ ಮಾಹಿತಿಯನ್ನು ತಿಳಿಸಿದ್ದು, ಎರಡು ಉಪಚುನಾವಣೆಗಳಲ್ಲಿ ಸರಕಾರಕ್ಕೆ ಆಡಳಿತ ವಿರೋಧಿ ಅಲೆ ಜೋರಾಗಿದೆ. ಹಾನ್ಗಲ್ನಲ್ಲಿ ಗೆಲುವು ಅಷ್ಟು ಸುಲಭವಲ್ಲ ಎಂಬ ಅಂಶವನ್ನು ಸ್ವತಃ ಬಿಜೆಪಿಯ ಆತಂರಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇದರ ಲಾಭ ಪಡೆದು ಗೆಲುವು ಸಾಧಿಸಬೇಕು ಎಂದು ಹೈಕಮಾಂಡ್ ಸೂಚಿಸಿದೆ.
ಸಿಂಧಗಿ ಮತ್ತು ಹಾನ್ಗಲ್ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುವ ಸಾಧ್ಯತೆ ಗಳಿವೆ. ಈ ಹಿನ್ನೆಲೆಯಲ್ಲಿ ಈ ಎಲ್ಲ ಚುನಾವಣೆಗಳಿಗೆ ಇಲ್ಲಿಂದಲೇ ಗೆಲುವಿನ ಅಭಿಯಾನ ಆರಂಭ ವಾಗಬೇಕಿದೆ ಎಂಬುದು ಹೈಕಮಾಂಡ್ನ ಆದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಗೆಲುವು ಪಡೆಯ ಬೇಕು ಎಂದು ತಿಳಿಸಲಾಗಿದೆ.
ಮೀಸಲು-ಗೋಜಲು
ಪಂಚಮಸಾಲಿ ಲಿಂಗಾಯತ ಸಮುದಾಯದ ಮೀಸಲು ಗೋಜಲು ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಬಹುದು. ಮೀಸಲು ಹೋರಾಟದ ಮುಂದಾಳತ್ವ ವಹಿಸಿರುವ ಜಯಮೃತ್ಯುಂಜಯ ಶ್ರೀಗಳು, ಸರಕಾರ ಮೀಸಲು ಸಂಬಂಧ ಶೀಘ್ರವಾಗಿ ವರದಿ ಪಡೆಯದಿದ್ದರೆ, ಈ ಎರಡು ಕ್ಷೇತ್ರಗಳಲ್ಲಿರುವ ಪಂಚಮಸಾಲಿ ಲಿಂಗಾಯತರು, ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಬಹುದು.
ಇದರ ಲಾಭ ಪಡೆಯುವ ನಿಟ್ಟಿನಲ್ಲಿ ಲಿಂಗಾಯತ ಮತದಾರರನ್ನು ಸೆಳೆಯುವ ಕಸರತ್ತು ನಡೆಸಬೇಕು. ಉತ್ತರ ಕರ್ನಾಟಕ ಭಾಗದ ಪ್ರಬಲ ಲಿಂಗಾಯತ ನಾಯಕರನ್ನು ಬಳಸಿಕೊಂಡು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ಕಾಂಗ್ರೆಸ್ ಗೆಲುವಿನ ಓಟಕ್ಕೆ ಇಲ್ಲಿಂದಲೇ ಚಾಲನೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ.
ಸರಕಾರದ ಬೇಜವಾಬ್ದಾರಿ
ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡನೆ ಮಾಡದೇ, ಸಮರ್ಪಕ ಮಾಹಿತಿ ನೀಡದೇ ಅಧಿಕಾರಿಗಳು ಮತ್ತು ಸರಕಾರ ಅಮಾಯಕರ ಜೀವನದ ಜತೆ ಚೆಲ್ಲಾಟ ಆಡಿದ್ದಾರೆ. ಬಿಡಿಎ ಈಗಿನ ಅಧ್ಯಕ್ಷ ಎಸ್.ಆರ್.ವಿಶ್ವ ನಾಥ್ ಅವರೇ ಈ ಜನರ ಪರ ಹೋರಾಟ ಮಾಡಿದ್ದರು. ಈಗ ನೋಡಿದರೆ ಅವರೇ ಮನೆಗಳನ್ನು ನೆಲಸಮ ಮಾಡಿಸುತ್ತಿzರೆ. ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಈ ಮನೆಗಳನ್ನು ಒಡೆಯಲು ಬಿಟ್ಟಿರಲಿಲ್ಲ, ಈ ಸರಕಾರ ನಿಜಕ್ಕೂ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.
ಇವರೇ ಒಂದು ಕಡೆ ದುಡ್ಡು ಹೊಡೆಯೋದು.
ಇನ್ನೊಂದು ಕಡೆ ಇವರೇ ಕಟ್ಟಡ ಒಡೆಸೋದು. ಸಿಎಂಗೆ ಜವಾಬ್ದಾರಿ ಎನ್ನುವುದು ಇದ್ದಿದ್ದರೆ ಕೂತು ಚರ್ಚೆ ಮಾಡಿ ಕಾನೂನು ರೀತಿಯಲ್ಲಿ ಆ ಜನರಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.
ಬೆಲೆ ಏರಿಕೆ, ಗೊಂದಲದ ಲಾಭ ಪಡೆಯಲು ಸಲಹೆ
ಬಿಎಸ್ವೈ ಉಪಚುನಾವಣೆ ಪ್ರಚಾರಕ್ಕೆ ತಡವಾಗಿ ಬಂದಿದ್ದ ಕಾರಣಕ್ಕೆ ಬಿಜೆಪಿಯ ವಲಯದಲ್ಲಿ ಗೊಂದಲಗಳಿವೆ. ಯಡಿಯೂರಪ್ಪ ಸರಕಾರದ ಪರವಾಗಿ ಇದ್ದಾರೆಯೇ ಇಲ್ಲವೋ ಎಂಬ ಒಂದು ಜಿಜ್ಞಾಸೆಯೂ ಬಿಜೆಪಿ ವಲಯದಲ್ಲಿದೆ. ಎರಡು ಕ್ಷೇತ್ರಗಳಲ್ಲಿರುವ ಲಿಂಗಾಯತ ಮತದಾರರು ಬಿಎಸ್ವೈ ಅನುಪಸ್ಥಿತಿಯಲ್ಲಿ ಪಕ್ಷದ ಕೈಬಿಡುತ್ತಾರೆ ಎಂಬ ಅಂಶ ಗೊತ್ತಾದ ಬಳಿಕವೇ ಬಿಜೆಪಿ, ಯಡಿಯೂರಪ್ಪ ಅವರನ್ನು ಪ್ರಚಾರಕ್ಕೆ ಕರೆದೊಯ್ಯಲು ತೀರ್ಮಾನ ಮಾಡಿತ್ತು. ಈ ಎಲ್ಲ ಅಂಶಗಳನ್ನು ಗಮನಿಸಿದ ಮತದಾರರು, ಬಿಜೆಪಿ ಪರವಾಗಿ ಇರಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇದ್ದಾರೆ. ಯಡಿಯೂರಪ್ಪ ಇಲ್ಲದಿ ದ್ದರೆ, ಬಹುತೇಕ ಲಿಂಗಾಯತರು ಬಿಜೆಪಿಯಿಂದ ದೂರವಾಗುತ್ತಾರೆ ಎಂಬ ಮಾತುಗಳಿದ್ದು, ಇದರ ಲಾಭ ಪಡೆಯಲು ಕಾಂಗ್ರೆಸ್ ಚಿಂತನೆ ನಡೆಸಿದೆ.
***
ಎರಡು ಕ್ಷೇತ್ರಗಳಲ್ಲಿ ಮತದಾರರ ಒಲವು ಕಾಂಗ್ರೆಸ್ ಪರವಾಗಿದೆ. ಬಿಜೆಪಿಯ ಬೆಲೆ ಏರಿಕೆ ನೀತಿಗಳು ಮತ್ತು ಆಡಳಿತದ ವೈಫಲ್ಯಕ್ಕೆ ಬೇಸತ್ತ ಜನತೆ ಕಾಂಗ್ರೆಸ್ ಅನ್ನು ಅಪಾರ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಹೀಗಾಗಿ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಗೆಲುವು ಸಾಧಿಸುವ ಅವಕಾಶಗಳಿವೆ. ಇದು ಮುಂದಿನ ದಿನಗಳ ಕಾಂಗ್ರೆಸ್ ಗೆಲುವಿನ ದಿಕ್ಸೂಚಿಯಾಗಲಿದೆ.
– ರಾಮಲಿಂಗಾ ರೆಡ್ಡಿ ಕೆಪಿಸಿಸಿ ಕಾರ್ಯಾಧ್ಯಕ್ಷ