Friday, 20th September 2024

ದೇಶದ ಪರ ಬದ್ಧರಾಗಿದ್ದರೆ ಶ್ರೇಷ್ಠಭಾರತ ನಿರ್ಮಾಣ ಸಾಧ್ಯ: ಓಂ ಬಿರ್ಲಾ

covidನವದೆಹಲಿ: ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಶುಕ್ರವಾರ ಸಂವಿಧಾನ ದಿನವನ್ನು ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರ ಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿ ಯಾಗಿದ್ದರು.

ಲೋಕಸಭಾ ಸ್ಪೀಕರ್ ಮಾತನಾಡಿ ಓಂ ಬಿರ್ಲಾ, ಭಗವದ್ಗೀತೆಯ ಆಧುನಿಕ ಆವೃತ್ತಿ ಯಂತೆ ಭಾರತದ ಸಂವಿಧಾನವು ನಮ್ಮನ್ನು ರಾಷ್ಟ್ರದ ಪರವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ. ನಾವು ಪ್ರತಿಯೊಬ್ಬರೂ ದೇಶದ ಪರವಾಗಿ ಕೆಲಸ ಮಾಡಲು ಬದ್ಧರಾಗಿ ದ್ದರೆ ಒಂದೇ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.

ಇದಕ್ಕೂ ಮುನ್ನ, ಸಂವಿಧಾನದ ಪೀಠಿಕೆ ಓದಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನ ಪೀಠಿಕೆ ಓದಿದರು. ನಂತರ ಅದನ್ನು ಎಲ್ಲರೂ ಪುನರುಚ್ಛರಿಸಿ ದರು.