Monday, 16th September 2024

ನಾಳೆಯಿಂದ ಹೈಸ್ಕೂಲ್‌, ಪ.ಪೂರ್ವ, ಪದವಿ, ಎಂಜಿನಿಯರ್‌ ಕಾಲೇಜುಗಳಿಗೆ 3 ದಿನ ರಜೆ

ಬೆಂಗಳೂರು: ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ನೀಡಲಾಗುವುದು ಎಂದು ಸಚಿವ ಅಶ್ವತ್‌ ನಾರಾಯಣ್‌ ತಿಳಿಸಿದ್ದಾರೆ.

ಹಿಜಾಬ್‌ ವಿವಾದ ರಾಜ್ಯದಲ್ಲಿ ಹೆಚ್ಚಿದ್ದು, ಈ ವಿವಾದ ಹೈ ಸ್ಕೂಲ್‌, ಪ.ಪೂರ್ವ, ಪದವಿ ಎಂಜಿನಿಯರ್‌ ಕಾಲೇಜು ಗಳಿಗೆ ಗಳಿಗೆ ವಿಸ್ತರಣೆಯಾಗಬಾರದು ಎನ್ನುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಚಿವ ಅಶ್ವಥ್‌ ನಾರಾಯಣ್‌ ಅವರ ನೇತೃತ್ವದಲ್ಲಿ ಪದವಿ ಕಾಲೇಜು ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ರಾಜ್ಯದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಸದ್ಯ ಈ ವಿವಾದವು ನ್ಯಾಯಾಪೀಠದ ಮುಂದೆ ಇದ್ದು, ನ್ಯಾಯಾ ಲಯದ ತೀರ್ಪು ಕಾಯುವಂತೆ ಅವರು ಮನವಿ ಮಾಡಿದರು.

ತಮ್ಮ ಸಚಿವ ಸಂಪುಟದ ಸಹೋದ್ಯೋಗಳಿಗೆ ನೀಡುತ್ತಿರುವ ಹೇಳಿಕೆಗೂ ಕೂಡ ಅವರು ವಿರೋಧ ವ್ಯಕ್ತಪಡಿಸಿ ದರು. ಇನ್ನೂ ಗಲಾಟೆಯಾಗಿರುವ ಪ್ರದೇಶದಲ್ಲಿ ರಜೆ ನೀಡುವಂತೆ ಸೂಚನೆ ನೀಡಿರುವೆ. ಇಂದು ಸಂಜೆ ಬೆಂಗಳೂರಿಗೆ ತೆರಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನೂ ಯಾರು ಕೂಡ ಪ್ರಚೋದನೆ ಮಾಡುವ ಕೆಲಸ ಮಾಡಬಾರದು, ಈಗಾಗಲೇ ಹೈಕೋರ್ಟ್‌ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್‌ನಿಂದ ಅಂತಿಮ ಆದೇಶ ಬರುವ ತನಕ ತಾಳ್ಮೆಯಿಂದ ಇರುವಂತೆ ಹೇಳಿದರು.