Friday, 18th October 2024

ಇಂಧನದ ವ್ಯಾಟ್ ಇಳಿಸಿ: ಕೇಜ್ರಿವಾಲ್ ನಿವಾಸದೆದುರು ಪ್ರತಿಭಟನೆ

ನವದೆಹಲಿ: ಬಿಜೆಪಿಯ ದೆಹಲಿ ಘಟಕವು ಶನಿವಾರ ಇಂಧನ ಬೆಲೆ ಏರಿಕೆಯ ನಡುವೆಯೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಇಂಧನ ಮೇಲಿನ ವ್ಯಾಟ್ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.

ಏರುತ್ತಿರುವ ಇಂಧನ ಬೆಲೆಗಳ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ, ಕೆಲವು ರಾಜ್ಯಗಳು ಇಂಧನ ತೆರಿಗೆಯನ್ನು ಕಡಿಮೆ ಮಾಡಿಲ್ಲ ಎಂದು ಹೇಳಿದ್ದರು.

ತಮಿಳುನಾಡು, ಪಶ್ಚಿಮ ಬಂಗಾಳ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ಇಂಧನದ ಮೇಲಿನ ತೆರಿಗೆ ಕಡಿಮೆ ಮಾಡಿಲ್ಲ, ಈಗಲೇ ಮಾಡಬೇಕು ಎಂದು ಹೇಳಿದರು.

ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಜಾರ್ಖಂಡ್ ಮತ್ತು ತಮಿಳುನಾಡು ಈಗ ವ್ಯಾಟ್ ಅನ್ನು ಕಡಿಮೆ ಮಾಡಿ ಮತ್ತು ಪ್ರಯೋಜನಗಳನ್ನು ನೀಡುವಂತೆ ವಿನಂತಿಸುತ್ತೇನೆ ಅವರು ಹೇಳಿದರು.