ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ನಿವಾಸಿ ಎಂ.ಜೆ.ರವಿ (35) ಎಂಬವರೆ ಕೊಲೆ ಯಾದವರು.
ಎಪಿಎಂಸಿಯಲ್ಲಿ ಏಜೆಂಟ್ ಆಗಿದ್ದು, ಉತ್ತನಹಳ್ಳಿಯ ಬಳಿಯ ಹೆಳವರಹುಂಡಿಯಲ್ಲಿ ಕುಟುಂಬದ ಸಮೇತ ವಾಸವಿದ್ದರು. ಮೃತರಿಗೆ ತಂದೆ- ತಾಯಿ, ಪತ್ನಿ, ಮೂವರು ಮಕ್ಕಳು, ಸಹೋದರಿ ಇದ್ದಾರೆ.
ಮಳಿಗೆಯಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದಾಗ ಬಂದ 3-4 ಮಂದಿ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಆರ್. ಶಿವಕುಮಾರ್, ಮೈಸೂರು ದಕ್ಷಿಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಶಿಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.