Sunday, 8th September 2024

ದ್ವಿತೀಯ ಪಿಯು ಪಠ್ಯಪರಿಷ್ಕರಣೆ ಸಮಿತಿಯಿಂದ ರೋಹಿತ್ ಔಟ್‌

ಬೆಂಗಳೂರು: ರೋಹಿತ್ ಚಕ್ರತೀರ್ಥ ವಿರುದ್ಧ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಅವರನ್ನು ಕೈಬಿಟ್ಟಿದೆ.

ಪಿಯು ಪಠ್ಯ ಪುಸ್ತಕ ಪರಿಷ್ಕರಣೆಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಹೊರಗಿಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಅಧ್ಯಾಯ 4.2 ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರ ಣೆಗೆ ಸರ್ಕಾರ ಮುಂದಾಗಿದ್ದು, ಈ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಿತ್ತು. ಇದೀಗ ಪರಿಷ್ಕರಣೆ ವಿವಾದದಲ್ಲಿ ಚಕ್ರತೀರ್ಥ ವಿರುದ್ಧ ವಿವಾದ ಕೇಳಿ ಬರು ತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸಮಿತಿಯಿಂದ ಕೈಬಿಡಲು ಇಲಾಖೆ ತೀರ್ಮಾನಿಸಿದೆ.

ರಾಜ್ಯಾದ್ಯಂತ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿರುವ ನಡುವೆಯೇ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆಗೂ ರಾಜ್ಯ ಸರ್ಕಾರ ಮುಂದಾಗಿದೆ.

 

error: Content is protected !!