Monday, 16th September 2024

ಕಾಲೇಜ್ ಬಸ್-ಕೆಎಸ್ಆರ್’ಟಿಸಿ ಬಸ್ ಡಿಕ್ಕಿ: 20 ಮಂದಿಗೆ ಗಾಯ

ಬೆಳಗಾವಿ : ರಾಜ್ಯದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ವೊಂದು ಕಾಲೇಜ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗುರ್ಲಪೂರ ಗ್ರಾಮದ ಜತ್ತ – ಜಾಂಬೋಟಿ ಹೆದ್ದಾರಿ ಮೇಲೆ ಕೆಎಸ್‌ ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿ ಕೊಳ್ಳಲು ನಿಂತಿದ್ದ ಕಾಲೇಜ್ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾಲೇಜ್ ಬಸ್ ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ 10 ಜನರು ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸ ಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕ ವಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಘಟನೆ ನಡೆದಿದೆ.