Friday, 18th October 2024

ನೌಕಾ ನೆಲೆಗೆ ನುಗ್ಗಲು ಯತ್ನ: ಶಿವಮೊಗ್ಗದ ಯುವಕನ ಬಂಧನ

ನೌಕಾಪಡೆ ಆಫೀಸರ್ ಎಂದು ಕಾರವಾರ ಕದಂಬ 

ಶಿರಸಿ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾ ದಳದ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ಕದಂಬ ನೌಕಾನೆಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್. ನೌಕಾದಳ ಪೊಲೀಸರಿಂದ ಬಂಧನಕ್ಕೊಳಗಾದವನಾಗಿದ್ದು, ನೌಕಾ ಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಪರಿಚಯಿಸಿಕೊಂಡು, ಮಾನವ ಸಂಪನ್ಮೂಲ ಮತ್ತು ಯೋಜನಾ ನಿರ್ದೇಶನಾಲಯದಿಂದ 2021ರ ಡಿ.14ರಂದು ತನ್ನ ನೇಮಕಾತಿಯಾಗಿದೆ ಎಂದು ಹೇಳಿ ಕೊಂಡಿದ್ದನು. ತನ್ನ ಗುರುತಿನ ಚೀಟಿ ಮತ್ತು ಅದಕ್ಕೊಂದು ಸಂಖ್ಯೆಯನ್ನೂ ಸಿದ್ಧಪಡಿಸಿ ಕೊಂಡಿದ್ದ ಈತ ನೌಕಾ ನೆಲೆಯ ಮುಖ್ಯ ಗೇಟ್ ಬಳಿ ತೆರಳುವಾಗ ತಪಾಸಣೆ ವೇಳೆ ನೀಡಿದ್ದನು.

ಆತ ನೀಡಿದ ದಾಖಲೆಗಳು ಮತ್ತು ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ಎಲ್ಲವೂ ನಕಲಿ ಎಂಬುದು ದೃಢವಾಗಿದ್ದು ಬಳಿಕ ನೌಕಾನೆಲೆಯ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಕಾರವಾರ ಗ್ರಾಮೀಣ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.