Friday, 20th September 2024

ಶಿಂಧೆ ಸಿಎಂ ನೇಮಕಕ್ಕೆ ವಿರೋಧ: ಜು.11 ರಂದು ವಿಚಾರಣೆ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ರಜೆ ಪೀಠದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಜೆಕೆ ಮಹೇಶ್ವರಿ ಅವರಿದ್ದ ಪೀಠ ಜು.11 ಕ್ಕೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

ಹಿರಿಯ ಅಡ್ವೊಕೇಟ್ ದೇವದತ್ ಕಾಮತ್ ಶಿವಸೇನೆಯ ನಾಯಕ ಸುಭಾಷ್ ದೇಸಾಯಿ ಅವರ ಪರ ಹಾರಜಾಗಿ, ಈಗಾಗಲೇ ಬಾಕಿ ಇರುವ ಅರ್ಜಿಗಳೊಂದಿಗೆ ಹೊಸ ಅರ್ಜಿ ವಿಚಾರಣೆಯನ್ನೂ ನಡೆಸ ಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

ದೇಸಾಯಿ ಜೂ.30 ರಂದು ಶಿಂಧೆ ಬಣ ಹಾಗೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಹೊಸ ಸ್ಪೀಕರ್ ಆಯ್ಕೆ ಸೇರಿದಂತೆ ಜು.3-4 ರಂದು ನಡೆದ ವಿಧಾನಸಭಾ ಪ್ರಕ್ರಿಯೆಗಳನ್ನೂ ಸಹ ಠಾಕ್ರೆ ಬಣ ಪ್ರಶ್ನಿಸಿದೆ.