Sunday, 8th September 2024

ಆಮ್ ಆದ್ಮಿ ಪಕ್ಷಕ್ಕೆ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಸೇರ್ಪಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (2023) ಸಮೀಪಿಸುತ್ತಿರು ವಾಗಲೇ, ಎಎಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರು ವವರ ಸಂಖ್ಯೆ ಹೆಚ್ಚಾಗು ತ್ತಿದೆ.

ಗುರುವಾರ ಸ್ಯಾಂಡಲ್ ವುಡ್ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಅವರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಾನು ಅಧಿಕಾರಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಜನರ ಸೇವೆ ಮಾಡಲು ನಾನು ಪಕ್ಷಕ್ಕೆ ಸೇರ್ಪಡೆಯಾಗು ತ್ತಿದ್ದೇನೆ. ಸರ್ಕಾರಿ ಕಾಲೇಜುಗಳನ್ನು ಮುಚ್ಚುತ್ತಿರುವುದರ ವಿರುದ್ಧ ಹೋರಾಟ ಮಾಡುತ್ತೇನೆ. ಕೋಲಾರದಲ್ಲಿ ನೀರಿನ ಸಮಸ್ಯೆ ಬಗ್ಗೆ ಹೋರಾಟ ಮಾಡುವೆ. ಬಿಜೆಪಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ, ಕನ್ನಡ ಉಳಿಯಬೇಕು ಎಂದು ಟೆನ್ನಿಸ್ ಕೃಷ್ಣ ಹೇಳಿದ್ದಾರೆ.

error: Content is protected !!