Lokesh Kaayarga Column: ಬೇಡ್ತಿ ಇನ್ನೊಂದು ಎತ್ತಿನಹೊಳೆ ಆಗಬಹುದೇ ?
ಎತ್ತಿನಹೊಳೆಯ ವಿಚಾರದಲ್ಲಿ ನಡೆದಂತೆ ಕರಾವಳಿ ಮತ್ತು ಬಯಲುಸೀಮೆಯ ಜನರು ಮತ್ತೊಮ್ಮೆ ಈ ಯೋಜನೆ ವಿಚಾರದಲ್ಲಿ ಸಂಘರ್ಷಕ್ಕಿಳಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ವರದಾ-ಬೇಡ್ತಿ ಯೋಜನೆ ವಿರುದ್ಧ ಅಭಿಯಾನ ಆರಂಭವಾಗಿದೆ. ಆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಮತ್ತು ಪರಿಸರ ಹೋರಾಟಗಾರರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.