Dr Murli Mohan Chuntaru Column: ಮರಳಿ, ಮರಳಿ ಬರುತ್ತಿದೆ ಕ್ಷಯ ರೋಗ
ವಿಶ್ವದ ಅತ್ಯಂತ ಮಾರಕ ಸಾಂಕ್ರಾಮಿಕ ರೋಗವಾದ ಕ್ಷಯರೋಗ ಈಗ ಗಣನೀಯವಾಗಿ ತಗ್ಗಿದೆ. ಆದರೆ ಕ್ಷಯರೋಗವು ಈಗಲೂ ಜಾಗತಿಕವಾಗಿ ಲಕ್ಷಾಂತರ ಜನರನ್ನು ಧ್ವಂಸ ಗೊಳಿಸುತ್ತಲೇ ಇದೆ. ಪ್ರತಿ ವರ್ಷ ಸುಮಾರು ೯ ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗು ತ್ತಿದ್ದು, ಮೂರು ಮಿಲಿಯನ್ ರೋಗಿಗಳಿಗೆ ಯಾವುದೇ ರೀತಿಯ ಚಿಕಿತ್ಸಾ ಸೌಲಭ್ಯ ದೊರಕುತ್ತಿಲ್ಲ

ಅಂಕಣಕಾರ ಡಾ.ಮುರಲೀ ಮೋಹನ್ ಚೂಂತಾರು

ವಿಶ್ವದಾದ್ಯಂತ ಮಾರ್ಚ್ 24ರ ದಿನವನ್ನು ವಿಶ್ವ ಕ್ಷಯ ರೋಗ ದಿನ ಎಂದು ಆಚರಿಸ ಲಾಗುತ್ತಿದೆ. ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆಚರಣೆ ಯನ್ನು ವಿಶ್ವ ಸಂಸ್ಥೆ 1982ರಿಂದ ಜಾರಿಗೆ ತಂದಿತು. ಪ್ರತಿ ವರ್ಷ ಯಾವುದಾದರೊಂದು ಧ್ಯೇಯ ಇದ್ದುಕೊಂಡು ಈ ಆಚರಣೆ ಮಾಡಲಾಗುತ್ತಿದ್ದು, ಈ ವರ್ಷದ ಧ್ಯೇಯವಾಕ್ಯ, ‘ ಹೌದು! ನಾವು ಕ್ಷಯರೋಗವನ್ನು ಕೊನೆಗೊಳಿಸಬಹುದು: ಬದ್ಧರಾಗಿರಿ, ಹೂಡಿಕೆ ಮಾಡಿ, ತಲುಪಿಸಿ’ ಎಂಬುದು ಭರವಸೆ, ತುರ್ತು ಮತ್ತು ಹೊಣೆಗಾರಿಕೆಗೆ ನೀಡಿದ ದಿಟ್ಟ ಕರೆಯಾಗಿದೆ.
ವಿಶ್ವದ ಅತ್ಯಂತ ಮಾರಕ ಸಾಂಕ್ರಾಮಿಕ ರೋಗವಾದ ಕ್ಷಯರೋಗ ಈಗ ಗಣನೀಯವಾಗಿ ತಗ್ಗಿದೆ. ಆದರೆ ಕ್ಷಯರೋಗವು ಈಗಲೂ ಜಾಗತಿಕವಾಗಿ ಲಕ್ಷಾಂತರ ಜನರನ್ನು ಧ್ವಂಸ ಗೊಳಿಸುತ್ತಲೇ ಇದೆ. ಪ್ರತಿ ವರ್ಷ ಸುಮಾರು 9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು, ಮೂರು ಮಿಲಿಯನ್ ರೋಗಿಗಳಿಗೆ ಯಾವುದೇ ರೀತಿಯ ಚಿಕಿತ್ಸಾ ಸೌಲಭ್ಯ ದೊರಕುತ್ತಿಲ್ಲ.
ಮಾರಣಾಂತಿಕ ಅಂಟು ರೋಗಗಳಲ್ಲಿ ಏಡ್ಸ್ ಬಳಿಕದ ಸ್ಥಾನ ಕ್ಷಯ ರೋಗದ್ದು. 1882ನೇ ಇಸವಿಯಲ್ಲಿ ಮಾರ್ಚ್ 24ರಂದು ಡಾ| ರಾಬರ್ಟ್ ಕ್ಷಯ ರೋಗಕ್ಕೆ ಕಾರಣವಾದ ರೋಗಾ ಣು ಮೈಕೊ ಬ್ಯಾಕ್ಟಿರಿಯಾ ಟ್ಯುಬರ್ ಕ್ಯುಲೋಸಿಸ್ ಎಂಬ ರೋಗಾಣುವನ್ನು ಕಂಡು ಹಿಡಿದರು. ಈ ದಿನದ ನೆನಪಿಗಾಗಿ ಪ್ರತಿ ವರ್ಷ 24 ರಂದು ವಿಶ್ವ ಕ್ಷಯರೋಗ ದಿನ ಎಂದು ಆಚರಿಸಲಾಗುತ್ತಿದೆ. ಈಗಲೂ ಕೂಡ ಕ್ಷಯ ರೋಗ ಬಡ ರಾಷ್ಟ್ರಗಳು ಮತ್ತು ಮುಂದು ವರಿಯುತ್ತಿರುವ ರಾಷ್ಟ್ರಗಳ ಬಹುದೊಡ್ಡ ಮಾರಣಾಂತಿಕ ಖಾಯಿಲೆಯಾಗಿರುವುದು ಬಹಳ ವಿಷಾದನೀಯ ಸಂಗತಿ.
ಇದನ್ನೂ ಓದಿ: Dr Murali Mohan Chuntaru Column: ನಿಷ್ಕಾಮ ಸೇವೆಗೆ ಮತ್ತೊಂದು ಹೆಸರು ಗೃಹರಕ್ಷಕ ದಳ
ಜಾಗತಿಕ ಆರೋಗ್ಯ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಬೆಚ್ಚಿ ಬೀಳಿಸುವಂತಿದೆ. 2023ರ ಅಂಕಿಅಂಶಗಳ ಪ್ರಕಾರ 1.08 ಕೋಟಿ ಜನರು ಕ್ಷಯರೋಗದಿಂದ ಬಳಲುತ್ತಿದ್ದರು. 1.25 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 60 ಲಕ್ಷ ಪುರುಷರು, 36 ಲಕ್ಷ ಹೆಣ್ಣು ಮಕ್ಕಳು ಸೇರಿದ್ದಾರೆ. ಕ್ಷಯ ಭಾದೆ ಯಾವ ದೇಶವನ್ನೂ ಬಿಟ್ಟಿಲ್ಲ. ಆದರೆ ಜಗತ್ತಿನ ಒಟ್ಟು ಕ್ಷಯ ರೋಗಿಗಳಲ್ಲಿ ಮೂರನೇ ಎರಡರಷ್ಟು ರೋಗಿಗಳು ಭಾರತ, ಇಂಡೋನೇಷಿಯಾ, ಚೀನಾ, ಪಿಲಿಪ್ಪೀನ್ಸ್, ಪಾಕಿಸ್ತಾನ, ಬಾಂಗ್ಲಾದೇಶ, ನೈಜೀರಿಯಾದವರು. ಈ ಪೈಕಿ ಹೆಚ್ಚಿನ ಪ್ರಮಾಣದ ಸಾವು ನೋವು ಭಾರತದಲ್ಲಿಯೇ ಆಗಿದೆ ಎನ್ನುವುದು ವಿಷಾದದ ವಿಚಾರ.
ಭಾರತದಲ್ಲಿ ಸಮಸ್ಯೆಯ ಪ್ರಮಾಣ ಕ್ಷಯ ರೋಗದಿಂದ ಸಂಭವಿಸುವ ಶೇ. 95ರಷ್ಟು ಸಾವು ಬಡ ಮತ್ತು ಮಧ್ಯಮ ವರ್ಗದ ಜನರಲ್ಲಿ ಸಂಭವಿಸುತ್ತದೆ. 15 ರಿಂದ 45 ವರ್ಷದ ಮಹಿಳೆ ಯರ ಸಾವಿಗೆ ಮೂರನೇ ಪ್ರಮುಖ ಕಾರಣ ಕ್ಷಯ ರೋಗ. ಅಂದಾಜಿನ ಪ್ರಕಾರ, ಸುಮಾರು 22 ಲಕ್ಷ ರೋಗಿಗಳು ನಮ್ಮಲ್ಲಿದ್ದು ಪ್ರತಿ ದಿನವೂ ಸರಾಸರಿ 960 ಜನರು (ಪ್ರತಿ ಗಂಟೆಗೆ 90 ಜನ) ಈ ಕಾಯಿಲೆಯಿಂದ ಸಾಯುತ್ತಿದ್ದಾರೆ.
ಯಾವ ಔಷಧವೂ ನಾಟದಂಥ ಹೊಸ ಹೊಸ ಕ್ಷಯತಳಿಗಳು ಸೃಷ್ಟಿ ಆಗುತ್ತಿರುವುದರಿಂದ ರೋಗ ನಿಯಂತ್ರಣ ವರ್ಷ ವರ್ಷಕ್ಕೆ ಕಠಿಣವಾಗುತ್ತ ಹೋಗುತ್ತಿದೆ. ಎಚ್ಐವಿ ಸೋಂಕಿತ ರಲ್ಲಿ ಕ್ಷಯ ರೋಗದ ಪ್ರಕರಣಗಳು ಸುಮಾರು 63000ದಷ್ಟು ಕಂಡು ಬಂದಿವೆ. ಇದರಲ್ಲಿ ಸಾಯುವವರ ಪ್ರಮಾಣ 11000. ಸಂಪೂರ್ಣ ಚಿಕಿತ್ಸೆ ಪಡೆಯದ ವ್ಯಕ್ತಿ ವರ್ಷಕ್ಕೆ 10 ರಿಂದ 15 ಜನರಿಗೆ ಕ್ಷಯರೋಗವನ್ನು ಉಡುಗೊರೆ ನೀಡಬಲ್ಲ.
ಔಷಧಿಗಳನ್ನು ಸರಿಯಾಗಿ ದೊರಕದ ಕಾರಣ ಅಥವಾ ಸರಿಯಾಗಿ ಸೇವಿಸದ ಕಾರಣ ರೋಗ ಉಲ್ಭಣವಾಗುತ್ತದೆ. ಅನಕ್ಷರತೆ, ಅಜ್ಞಾನ, ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಈ ರೋಗದ ಪರಿಣಾಮಕಾರಿ ಚಿಕಿತ್ಸೆಗೆ ತೊಡಕಾಗಿರುವುದಂತೂ ಸತ್ಯವಾದ ಸಂಗತಿ.
ನರೇಂದ್ರ ಮೋದಿ ಸರಕಾರ ಐದು ವರ್ಷಗಳ ಹಿಂದೆ 2025 ಕ್ಷಯ ಮುಕ್ತ ಭಾರತಕ್ಕೆ ಸಂಕಲ್ಪ ತೊಟ್ಟರೂ ಗುರಿಯನ್ನು ಸಾಧಿಸಲು ನಾವು ತುಂಬಾ ದೂರ ಕ್ರಮಿಸಬೇಕಾಗಿದೆ. ಕ್ಷಯ ರೋಗ ಸಾಂಕ್ರಾಮಿಕವಾಗಿ ಹರಡುವ ಅಂಟುರೋಗವಾಗಿದ್ದು ರೋಗಾಣುಗಳು ಗಾಳಿ ಯಿಂದ ಹರಡುತ್ತದೆ. ಎಂದರಲ್ಲಿ ಉಗುಳುವುದು. ಪರಿಸರ ಮಾಲಿನ್ಯ, ಔದ್ಯೋಗಿಕರಣ, ಬಡತನ, ಅನಕ್ಷರತೆ, ಜನದಟ್ಟಣೆ, ಕೊಳಗೇರಿ ಪ್ರದೇಶ, ಪ್ರಾಥಾಮಿಕ ಸೌಲಭ್ಯಗಳ ಕೊರತೆ, ರೊಗದ ಬಗೆಗಿನ ಮಾಹಿತಿಯ ಕೊರತೆ ಇತ್ಯಾದಿಗಳು ರೋಗವನ್ನು ಹರಡುವಂತೆ ಮಾಡು ತ್ತದೆ.
ಜೋರಾಗಿ ಕೆಮ್ಮುವುದು, ಸೀನುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮುಂತಾ ದವುಗಳಿಂದ ರೋಗಾಣು ಗಾಳಿಯಲ್ಲಿ ಹರಡಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ.
ರೋಗದ ಲಕ್ಷಣಗಳು
ನಿರಂತರವಾದ ಕೆಮ್ಮು ಮತ್ತು ಕಫ, ಮೂರು ನಾಲ್ಕು ವಾರಗಳಿಗೂ ಅಧಿಕವಾದ ನಿರಂತರ ಕೆಮ್ಮು, ಎದೆನೋವು, ಉಸಿರಾದಲ್ಲಿ ಏರುಪೇರು, ಕಫದೊಡನೆ ರಕ್ತ ಮಿಶ್ರಿತವಾಗುವುದು, ಸಣ್ಣ ಜ್ವರ, ಸಾಯಂಕಾಲದಲ್ಲಿ ಸಮಯದಲ್ಲಿ ಜ್ವರ ಮತ್ತು ಮೈ ಬೆವರುವುದು, ಅನಾಸಕ್ತಿ ಹಸಿವಿಲ್ಲದಿರುವುದು, ರುಚಿ ಇಲ್ಲದಿರುವುದು, ವಾಂತಿ, ಸುಸ್ತು ದೇಹದ ತೂಕ ಕಡಿಮೆ ಯಾಗುವುದು ಇತ್ಯಾದಿ. ಈ ಮೇಲೆ ತಿಳಿಸಿದ ಯಾವುದಾದರೂ ಲಕ್ಷಣಗಳಿದ್ದಲ್ಲಿ ತಕ್ಷಣ ವೈದ್ಯರಿಗೆ ತೋರಿಸತಕ್ಕದ್ದು.
ಕ್ಷಯರೋಗದ ಬಗೆಗಿನ ಮಿಥ್ಯಗಳು
ಕ್ಷಯರೋಗ ಅನುವಂಶಿಕ ಕಾಯಿಲೆ ಎಂದು ಕೆಲವರು ಇನ್ನೂ ನಂಬಿದ್ದಾರೆ. ಕ್ಷಯ ರೋಗ ಅನುವಂಶಿಕ ಕಾಯಿಲೆಯಲ್ಲ. ಕುಟುಂಬದಲ್ಲಿ ಯಾರಿಗಾದರೂ ಕಾಯಿಲೆ ಇದ್ದಲ್ಲಿ ರೋಗಾ ಣುಗಳು ಗಾಳಿಯ ಮೂಲಕವೇ ಹರಡ ಬಹುದೇ ಹೊರತು ರಕ್ತ ಸಂಬಂಧಿಗಳಲ್ಲಿ ಅನು ವಂಶಿಕವಾಗಿ ಹರಡುವುದಿಲ್ಲ. ಒಟ್ಟಿಗೆ ಊಟ ಮಾಡುವುದರಿಂದ ಒಂದೇ ತಟ್ಟೆ, ಲೋಟ ಗಳನ್ನು ಬಳಸುವುದಿಂದ ಕ್ಷಯ ರೋಗ ಹರಡುವುದಿಲ್ಲ. ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಪರಿಣಾಮಕಾರಿಯಾಗಿ ಗುಣಪಡಿಸಬಹುದು. ನಿರ್ಲಕ್ಷ ಮಾಡಿದಲ್ಲಿ ರೋಗ ಉಲ್ಭಣವಾಗಬಹುದು.
ಹಿಂದಿನ ಕಾಲದಲ್ಲಿ ಒಂದೆರಡು ಬಗೆಯ ಮಾತ್ರೆಗಳನ್ನು ಮಾತ್ರ ಬಳಸಲಾಗುತ್ತಿತ್ತು. ಆದರೆ ಈಗ ಬಹು ಔಷಧಿ ಪ್ರತಿರೋಧ ಕ್ಷಯ ರೋಗ (JBSU) ಬಂದಿರುವುದಿಂದ ಕನಿಷ್ಠ 4 ರಿಂದ 5 ಔಷಧಿಗಳನ್ನು ಬಳಸಬೇಕಾಗುತ್ತದೆ. ಈ ರೀತಿಯ ಕ್ಷಯ ರೋಗಕ್ಕೆ ಕನಿಷ್ಠ 2 ರಿಂದ 3 ವರ್ಷ ಔಷಧಿ ಸೇವಿಸಬೇಕಾಗಬಹುದು. ಯಾರು ನಿಯಮಿತ ಮತ್ತು ಪೂರ್ಣ ಕಾಲಿಕ ಚಿಕಿತ್ಸೆ ಪಡೆಯುವುದಿಲ್ಲವೋ ಅವರ ಕ್ಷಯ ರೋಗ ಖಂಡಿತವಾಗಿಯೂ ವಾಸಿಯಾಗದು ಮತ್ತು ರೋಗ ಲಕ್ಷಣಗಳು ಮರುಕಳಿಸುತ್ತವೆ. ವೈದ್ಯರ ಸೂಚನೆಯಂತೆ ಅವರು ನೀಡಿದ ಔಷಧಿ ಯನ್ನು ನಿಗದಿ ಪಡಿಸಿದ ಅವಧಿ ಪೂರ್ತಿ ತೆಗೆದುಕೊಳ್ಳಲೇಬೇಕು. ಚಿಕಿತ್ಸೆ ಹೇಗೆ? ಮೇಲೆ ತಿಳಿಸಿದ ರೋಗದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಅಲಕ್ಷ್ಯ ಮಾಡದೇ ತಜ್ಞ ವೈದ್ಯರ ಸಲಹೆ ಪಡೆಯತಕ್ಕದ್ದು. ರೋಗದ ಪತ್ತೆಗಾಗಿ ಕೆಲವೊಂದು ನಿಗದಿತ ಪರೀಕ್ಷೆ ಗಳಿದ್ದು ವೈದ್ಯರು ಈ ಪರೀಕ್ಷೆ ನಡೆಸಿದ ಬಳಿಕವೇ ತೀರ್ಮಾನಕ್ಕೆ ಬರುತ್ತಾರೆ. ಕ್ಷಯ ರೋಗ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಪ್ರತೀ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾದ ಸೌಲಭ್ಯವಿದೆ.
ಪ್ರತೀ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡಾಟ್ಸ್ ( BLUS) ಸೆಂಟರ್ ಬಳಿ ಇದ್ದು ಉಚಿತ ವಾಗಿ ಔಷಧಿ ನೀಡಲಾಗುತ್ತದೆ. ಇಂತಹ ರೋಗಿಗಳನ್ನು ಒಳ ರೋಗಿಯಾಗಿ ವೈದ್ಯರು ಮತ್ತು ದಾದಿಯರ ತಜ್ಞರ ಮಾರ್ಗದರ್ಶನದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆ ಆರಂಭಿ ಸಿದ ವಾರದ ಒಳಗೆ ರೋಗ ಹರಡುವಿಕೆ ನಿಂತುಹೋಗುತ್ತದೆ. ಆದರೆ ಸಂಪೂರ್ಣ ಗುಣ ಮುಖವಾಗಲು ವೈದ್ಯರ ಸಲಹೆಯಂತೆ ಸಂಪೂರ್ಣವಾದ ಅವಧಿಗೆ ಸರಿಯಾದ ರೀತಿಯಲ್ಲಿ ಔಷಧಿ ಸೇವಿಸಲೇಬೇಕು. ಇಲ್ಲವಾದಲ್ಲಿ ಕ್ಷಯ ರೋಗ ಮರುಕಳಿಸಬಹುದು.
ಕೊನೆ ಮಾತು
ಕ್ಷಯ ರೋಗ ಮನುಕುಲದ ಬಹುದೊಡ್ಡ ವೈರಿ. ಬಡ ಮತ್ತು ಮಧ್ಯಮ ವರ್ಗದ ನಡು ವಯಸ್ಸಿನ ದುಡಿಯುವ ಮಂದಿಯನ್ನು ಕಾಡುವ ಕ್ಷಯ ರೋಗ ದೇಶದ ಪ್ರಗತಿಗೆ ಬಹಳ ಮಾರಕವಾದ ರೋಗ. ದಿನ ಬೆಳಗಾಗುವುದರೊಳಗೆ ಸಾಯದಿದ್ದರೂ ಕ್ಷಣ ಕ್ಷಣಕ್ಕೂ ವ್ಯಕ್ತಿ ಯನ್ನು ಕ್ಷೀಣ ಗೊಳಿಸಿ ದೇಶದ ಆರ್ಥಿಕತೆಗೆ ಹೊಡೆತ ನೀಡುತ್ತದೆ. ದುಡಿಯುವ ಕೈಗಳನ್ನು ರೋಗ ಬಾಧಿಸಿ ಕುಟುಂಬದ ಆಧಾರ ಸ್ತಂಭವಾದ ಯಜಮಾನನನ್ನು ಹಿಂಡಿ ಹಿಪ್ಪೆಮಾಡಿ ಇಡೀ ಕುಟುಂಬವನ್ನು ದುರ್ಗತಿಗೆ ತಳ್ಳುತ್ತದೆ.
ಜಗತ್ತಿನಾದ್ಯಂತ ಎಲ್ಲಾ ಆರೋಗ್ಯ ಸಂಸ್ಥೆಗಳು ಸಾರ್ವಜನಿಕ ಸಂಸ್ಥೆಗಳು ಸರಕಾರಿ ಸಾಮ್ಯದ ಆರೋಗ್ಯ ಕೇಂದ್ರಗಳು ಮತ್ತು ಇನ್ನೂ ಹತ್ತು ಹಲವಾರು ಸರಕಾರೇತರ ಸಂಸ್ಥೆ ಗಳಾದ ರೋಟರಿ ಲಯನ್ಸ ಲೆಡ್ಕ್ರಾಸ್ ಮುಂತಾದ ಸಂಸ್ಥೆಗಳ ಜೊತೆಗೂಡಿ ಕ್ಷಯರೋಗದ ಸಂಪೂರ್ಣ ನಿರ್ಣಾಮಗೊಳಿಸಲು ಟೊಂಕ ಕಟ್ಟಿ ನಿಂತಿದೆ. ಕ್ಷಯ ರೋಗ ಗುಣಪಡಿಸ ಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಪ್ರಾಣ ಹಾನಿಯನ್ನು ತಡೆಗಟ್ಟಬಹುದು.
ಆದರೆ ಜಗತ್ತಿನ 25 ರಿಂದ 30 ಲಕ್ಷ ಮಂದಿಗೆ ಅನಕ್ಷರತೆ, ಬಡತನ, ಮೂಢನಂಬಿಕೆ, ಅeನ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಚಿಕಿತ್ಸೆ ದೊರಕದಿರುವುದೇ ಬಹಳ ದೌರ್ಭಾಗ್ಯದ ಸಂಗತಿ. ಇತ್ತೀಚಿನ ದಿನಗಳಲ್ಲಿ ಏಡ್ಸ್ , ಹೆಪಟೈಟೀಸ್ ಮುಂತಾದ ಮಾರ ಣಾಂತಿಕ ರೋಗಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದ್ದು ಮನುಷ್ಯನ ರಕ್ಷಣಾ ವ್ಯವಸ್ಥೆ ಹದ ಗೆಟ್ಟು ಮತ್ತಷ್ಟು ಕ್ಷಯ ರೋಗಿಗಳು ಹುಟ್ಟಿಕೊಳ್ಳಲು ಕಾರಣವಾಗಿದೆ.
ಸಾಮಾನ್ಯ ರೋಗಿಗಳಿಗಿಂತ ಈ ಏಡ್ಸ್ ರೋಗಿಗಳು 30 ಪಟ್ಟು ಹೆಚ್ಚು ಕ್ಷಯ ರೋಗಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಮುಂಬರುವ ದಿನಗಳಲ್ಲಿ ನಾವು ಇನ್ನಷ್ಟು ಎಚ್ಚರಿಕೆ ಮತ್ತು ಜಾಗೃತಿ ವಹಿಸದಿದ್ದಲ್ಲಿ ಏಡ್ಸ್ ಮತ್ತು ಕ್ಷಯ ರೋಗಗಳು ಮನುಕೂಲವನ್ನು ನುಂಗಿ ನೀರು ಕುಡಿಯುವುದರಲ್ಲಿ ಎಳ್ಳಷ್ಟೂ ಸಂಶಯವೇ ಇಲ್ಲ. ಈ ನಿಟ್ಟಿನಲ್ಲಿ ವೈದ್ಯರು ಮಾತ್ರವಲ್ಲದೇ ಸಾರ್ವಜನಿಕರು ಮತ್ತು ರೋಗಿಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದ್ದಲ್ಲಿ ಕ್ಷಯ ರೋಗವನ್ನು ಮತ್ತು ಇನ್ನಾವುದೇ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟ ಬಹುದು.
ಅದರಲ್ಲಿಯೇ ಮನುಕುಲದ ಒಳಿತು ಇದೆ. ಹಾಗಾದಲ್ಲಿ ಮಾತ್ರ ವಿಶ್ವ ಕ್ಷಯರೋಗದ ಆಚರಣೆಗೆ ಹೆಚ್ಚು ಮೌಲ್ಯ ಬರಬಹುದು. ಕ್ಷಯ ರೋಗ ಪತ್ತೆಗೆ ಕಾರಣೀಭೂತವಾದ ರೋಗಾಣು ಕಂಡು ಹಿಡಿದ ಪುಣ್ಯಾತ್ಮ ಡಾ. ರಾಬರ್ಟ್ನ ಆತ್ಮಕ್ಕೆ ಶಾಂತಿ ದೊರಕಬಹುದು.