Thursday, 23rd March 2023

ಹಾಸನದಲ್ಲಿ ಆಗಸ್ಟ್ 10 ಭೂ ಸೇನಾ ರ್ಯಾಲಿ

ಹಾಸನ: ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಭೂ ಸೇನಾ ರ್ಯಾಲಿ ನಡೆಯಲಿದ್ದು, ಈ ವೇಳೆ ‘ಅಗ್ನಿಪಥ’ ಯೋಜನೆಯಡಿ ‘ಅಗ್ನಿವೀರ’ ರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ರ್ಯಾಲಿ ಯಲ್ಲಿ ಭಾಗವಹಿಸಬಹುದಾಗಿದೆ.

ಜನರಲ್ ಡ್ಯೂಟಿ, ಅಗ್ನಿವೀರ ತಾಂತ್ರಿಕ ನೇಮಕಾತಿ ಜೊತೆಗೆ 8ನೇ ತರಗತಿ ಮತ್ತು 10ನೇ ತರಗತಿ ಉತ್ತೀರ್ಣವಾಗಿರುವವರಿಗೆ ಅಗ್ನಿವೀರ ಕುಶಲಕರ್ಮಿ, ಅಗ್ನಿವೀರ ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್ಲೈನ್ ಮೂಲಕ ನೋಂದಣಿ ಕಡ್ಡಾಯವಾಗಿದ್ದು, ಜು.1ರಿಂದ 30ರವರೆಗೆ https//joinindianarmy.nic.in ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

error: Content is protected !!