ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್‌ಬಾಲ್‌ನಂತೆ ಮಗುವಿಗೆ ಒದ್ದ ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.

Namma Metro: ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗಲೆಂದು 96 ಹೊಸ ರೈಲುಗಳ ಸೇರ್ಪಡೆ ಮಾಡಲಾಗ್ತಿದೆ. ಹೊಸ ರೈಲುಗಳು ಬರುತ್ತಿದ್ದಂತೆ 4 ನಿಮಿಷಕ್ಕೊಂದರಂತೆ ಮೆಟ್ರೋ ರೈಲು ಸಂಚಾರಕ್ಕೆ ನೀಡಲು ಬಿಎಂಆರ್​ಸಿಎಲ್​ ಸಿದ್ದತೆ ಮಾಡಿಕೊಂಡಿದೆ. ಸದ್ಯ ನಮ್ಮ ಮೆಟ್ರೋದ ಹಸಿರು ಮಾರ್ಗ​, ನೇರಳೆ ಮಾರ್ಗ ಹಾಗೂ ಹಳದಿ ಮಾರ್ಗಗಳಿಗೆ 64 ರೈಲುಗಳು ಸೇರ್ಪಡೆಗೊಂಡಿವೆ.

Train Accident: ಆನೆ ಗುಂಪಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ‌, 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ

ಆನೆ ಗುಂಪಿಗೆ ರೈಲು ಡಿಕ್ಕಿ: 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ

ಸೈರಾಂಗ್– ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಆನೆಗಳ ಗುಂಪಿಗೆ ಡಿಕ್ಕಿ ಹೊಡೆದ ಬಳಿಕ ಲೊಕೊಮೊಟಿವ್ ಹಾಗೂ ಐದು ಬೋಗಿಗಳು ಹಳಿ ತಪ್ಪಿವೆ. ಆದರೆ ಪ್ರಯಾಣಿಕರಿಗೆ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಅಪಘಾತದಲ್ಲಿ ಎಂಟು ಆನೆಗಳು ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಒಂದು ಮರಿಯನ್ನು ರಕ್ಷಿಸಲಾಗಿದೆ.

DK Shivakumar: ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

5 ವರ್ಷಗಳ ಹಿಂದೆ ಈ ಸ್ಥಳಕ್ಕೆ ಬಂದು ಕುಟುಂಬದ ಕೆಲಸಕ್ಕೆ ಪ್ರಾರ್ಥನೆ ಮಾಡಿದ್ದೆ, ಅದು ಈಡೇರಿತ್ತು. ಮತ್ತೆ ಇಲ್ಲಿಗೆ ಬರುತ್ತೇನೆ ಎಂದಿದ್ದೆ, ಬಂದಿದ್ದೇನೆ. ತಾಯಿ ಜಗದೀಶ್ವರಿ ಆಶೀರ್ವಾದ ಮಾಡು ಎಂದು ಕೇಳಿಕೊಂಡಿದ್ದೇನೆ. ತಾಯಿ ನನ್ನೊಂದಿಗೆ ಮಾತನಾಡಿದ್ದಾಳೆ, ಶುಭ ಸೂಚನೆ ಕೂಡ ನೀಡಿದ್ದಾಳೆ ಎಂದು ಅಂಕೋಲಾ ತಾಲೂಕಿನ ಆಂದ್ಲೆಯ ಶ್ರೀ ಜಗದೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್‌ ನುಡಿದರು.

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Karnataka Weather: ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಹಗಲು ಸಾಕಷ್ಟು ಬಿಸಿಲು ಮೈ ಚುರುಕ್‌ ಎನ್ನುವಂತೆ ಇರಲಿದೆ. ಆದರೆ ಸಂಜೆಯಾದ ಕೂಡಲೆ ಶೀತ ಗಾಳಿ ಬೀಸುತ್ತಿದ್ದು, ರಾತ್ರಿ ತಾಪಮಾನ 14 ಡಿಗ್ರಿ ಸೆಲ್ಷಿಯಸ್‌ವರೆಗೂ ಇಳಿಯುತ್ತಿದೆ. ಹನ್ನೆರಡು ಡಿಗ್ರಿಯವರೆಗೂ ಇಳಿದು ಹತ್ತು ವರ್ಷಗಳ ದಾಖಲೆ ಬರೆದಿತ್ತು. ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Byrathi Basavaraj: ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ರೌಡಿ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಸೆರೆ ಸಾಧ್ಯತೆ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

Supreme Court: ಬೇರೆ ಜಾತಿ, ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿಯಲ್ಲಿ ಪಾಲು ಕೊಡಬೇಕಿಲ್ಲ: ಸುಪ್ರೀಂ ಕೋರ್ಟ್‌

ಬೇರೆ ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿ ಪಾಲು ಕೊಡಬೇಕಿಲ್ಲ!

ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ‌ತಂದೆ ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ. ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

CM Siddaramaiah: ನನಗೆ ಯಾವತ್ತೂ ರಾಜಕೀಯ ನಿಶ್ಶಕ್ತಿ ಇಲ್ಲ, 5 ವರ್ಷ ನಾನೇ ಸಿಎಂ: ಕಾಲೆಳೆದ ವಿಪಕ್ಷಗಳಿಗೆ ಸಿದ್ದರಾಮಯ್ಯ ಖಡಕ್‌ ಉತ್ತರ

ನಿಶ್ಶಕ್ತಿ ಇಲ್ಲ, 5 ವರ್ಷ ನಾನೇ ಸಿಎಂ: ವಿಪಕ್ಷಗಳಿಗೆ ಸಿದ್ದರಾಮಯ್ಯ ಉತ್ತರ

ವಿಪಕ್ಷ ನಾಯಕ ಆರ್.ಅಶೋಕ್, CLP ಸಭೆಯಲ್ಲಿ ನಿಮ್ಮನ್ನು ಆಯ್ಕೆ ಮಾಡಿರುವುದು 5 ವರ್ಷಕ್ಕಾ ಅಥವಾ ಎರಡೂವರೆ ವರ್ಷಕ್ಕೊ ಸರಿಯಾಗಿ ಹೇಳಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಒತ್ತಾಯ ಮಾಡಿದರು. ಈ ವೇಳೆ ಎರಡೂವರೆ ವರ್ಷವೆಂದು ಹೇಳಿಯೇ ಇಲ್ಲ ಎಂದು ಸಿಎಂ ಹೇಳಿದರು. ನನಗೆ ರಾಜಕೀಯ ನಿಶ್ಶಕ್ತಿ ಯಾವಾಗಲೂ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

Dharmasthala Case: ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

Dharmasthala Case: ತನಗೆ ಹಾಗೂ ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಅವರಿಗೆ ಧರ್ಮಸ್ಥಳ ವಿರೋಧಿ ಹೋರಾಟಗಾರರಾದ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಜಯಂತ್, ಯುಟ್ಯೂಬರ್‌ ಸಮೀರ್ ಎಂ.ಡಿ. ಮತ್ತು ಅವರ ಸಂಗಡಿಗರಿಂದ ಜೀವ ಬೆದರಿಕೆ ಇದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಬೇಕು ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Murder Attempt: ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್​ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್​ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.

Cancer cases: ದಕ್ಷಿಣ ಕನ್ನಡದಲ್ಲಿ ಒಂದೇ ವರ್ಷದಲ್ಲಿ ಕ್ಯಾನ್ಸರ್‌ ಪ್ರಕರಣ ದುಪ್ಪಟ್ಟು, ಕಳವಳ

ದಕ್ಷಿಣ ಕನ್ನಡದಲ್ಲಿ ಒಂದೇ ವರ್ಷದಲ್ಲಿ ಕ್ಯಾನ್ಸರ್‌ ಕೇಸ್ ದುಪ್ಪಟ್ಟು, ಕಳವಳ

Dakshina Kannada News: ಬಾಯಿ ಕ್ಯಾನ್ಸರ್‌ ಹಾಗೂ ಸ್ತನ ಕ್ಯಾನ್ಸರ್‌ಗಳ ಪ್ರಮಾಣ ಜಿಲ್ಲೆಯಲ್ಲಿ ವಿಪರೀತವಾಗಿ ಏರಿಕೆಯಾಗುತ್ತಿದೆ. ಇದರ ಜತೆಗೆ ಗರ್ಭಕಂಠದ ಕ್ಯಾನ್ಸರ್‌, ಇತರ ರೀತಿಯ ಕ್ಯಾನ್ಸರ್‌ಗಳು ಕೂಡ ಹೆಚ್ಚುತ್ತಿದ್ದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಹಳಷ್ಟು ಏರಿಕೆ ಕಂಡಿದೆ. ವಿಶೇಷವಾಗಿ ಮಂಗಳೂರು, ಪುತ್ತೂರು ಭಾಗದಲ್ಲಿಯೇ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಂಡಿವೆ.

Karnataka Politcs: ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಳಗಾವಿ ಉದ್ಯಮಿಗಳೊಂದಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದ ಬಳಿಕ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅವರು ಕೂಡ ಮಂಗಳವಾರ ರಾತ್ರಿಯಷ್ಟೇ ದಲಿತ ಉದ್ಯಮಿಗಳಿಗೆ ರಾತ್ರಿ ಡಿನ್ನರ್‌ ಸಭೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು.

Road Accident: ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದರು. ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿವೆ.

Gruha Laksmi Scheme: ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಬಗ್ಗೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಪ್‌ಡೇಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರಿಂದ ಗೃಹಲಕ್ಷ್ಮೀ ಯೋಜನೆ ಹಣದ ಅಪ್‌ಡೇಟ್

ಗೃಹ ಲಕ್ಷ್ಮೀ ಯೋಜನೆ (Gruha Laksmi Scheme) ಬಗ್ಗೆ ಯಾವುದೇ ಗೊಂದಲ ಇಲ್ಲ. ಗೃಹ ಲಕ್ಷ್ಮೀ ಕಂತಿನ ಹಣ ನೇರವಾಗಿ ಡಿಬಿಟಿ ಮೂಲಕ ಹೋಗುತ್ತದೆ. ಇಲ್ಲಿಯವರೆಗೆ ‌ಯೋಜನೆ ಪ್ರಾರಂಭ ಆಗಿ 23 ಕಂತು ಹಣ ಹೋಗಿದೆ. ವಿಪಕ್ಷಗಳು ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಬಗ್ಗೆ ಕೇಳುತ್ತಿದ್ದಾರೆ. ನಾನು ಅವರಿಗೆ 23 ಕಂತಿನ 46 ಸಾವಿರ ಕೋಟಿ ಹಣ ಹೋಗಿದೆ ಉತ್ತರಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Physical Abuse: ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

Dharmasthala Case: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು; ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಕಳೆದ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ 18, 2025ರಿಂದ ಸೆಪ್ಟೆಂಬರ್ 17, 2026ರವರೆಗೆ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ, ಪುತ್ತೂರು ಸಹಾಯಕ ಆಯುಕ್ತರ ಗಡೀಪಾರು ಆದೇಶವನ್ನು ರದ್ದುಪಡಿಸಿತ್ತು. ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಮಾಡುವಂತೆ ಸೂಚಿಸಿತ್ತು.

GBA amendment bill: ಜಿಬಿಎ ವಿಧೇಯಕ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ; ಸುಧಾ ಮೂರ್ತಿ, ಕೆ. ಸುಧಾಕರ್‌ಗೆ ಸದಸ್ಯತ್ವ

ಜಿಬಿಎ ವಿಧೇಯಕ ತಿದ್ದುಪಡಿ; ಸುಧಾ ಮೂರ್ತಿ, ಕೆ. ಸುಧಾಕರ್‌ಗೆ ಸದಸ್ಯತ್ವ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದರು. ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಜಿಬಿಎ ಸದಸ್ಯರ ಪಟ್ಟಿಯಲ್ಲಿ ಬಿಟ್ಟು ಹೋಗಿರುವುದರಿಂದ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ತಿಳಿಸಿದರು. ಇದೀಗ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ (Sudha Murty), ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಹೆಸರು ಕೂಡ ಸೇರ್ಪಡೆಯಾಗಿದೆ.

Belagavi news: ಬೆಳಗಾವಿಯಲ್ಲಿ ಘೋರ ದುರಂತ, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರ ತಲೆ ಕಟ್‌

ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರ ತಲೆ ಕಟ್‌

ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಟಾವು ವೇಳೆ ಹಿಂದೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ. ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

CM Siddaramaiah: ಸಿಎಂ ಸಿದ್ದರಾಮಯ್ಯಗೆ ಬಿಗ್‌ ಡೇ, ಮುಡಾ ಕೇಸ್‌ನಲ್ಲಿ ಕೋರ್ಟ್‌ ಆದೇಶ ಇಂದು

ಸಿಎಂ ಸಿದ್ದರಾಮಯ್ಯಗೆ ಬಿಗ್‌ ಡೇ, ಮುಡಾ ಕೇಸ್‌ನಲ್ಲಿ ಕೋರ್ಟ್‌ ಆದೇಶ ಇಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು.

PM Narendra Modi: ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತೀಯರಿಂದ ಯಕ್ಷಗಾನ- ನೃತ್ಯದ ಸ್ವಾಗತ

ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಯಕ್ಷಗಾನ- ನೃತ್ಯದ ಸ್ವಾಗತ

PM Narendra Modi in Oman: ಮಸ್ಕತ್​​ನಲ್ಲಿ ಭಾರತೀಯ ವಲಸಿಗರು ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ನೀಡಿದರು. ಯಕ್ಷಗಾನ, ಹಿಂದಿ ಗೀತೆಗಳು, ಕೂಚಿಪುಡಿ ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.

Harish Kera Column: ಚಿಂತನೆಯನ್ನು ಟ್ರಿಮ್‌ ಮಾಡುವ ರೇಜರ್‌ʼಗಳು

Harish Kera Column: ಚಿಂತನೆಯನ್ನು ಟ್ರಿಮ್‌ ಮಾಡುವ ರೇಜರ್‌ʼಗಳು

ನಾವು ಸನ್ನಿವೇಶವನ್ನು ನೋಡುವ ಬಗೆಯಲ್ಲಿ ಸ್ವಲ್ಪ ವ್ಯತ್ಯಾಸ ಮಾಡಿಕೊಂಡರೆ- ಬದುಕು ಹೆಚ್ಚು ಹಿತಕರ ಆಗಿರುತ್ತೆ ಅಂತ ಹಿಂದಿನ ಕೆಲವು ಫಿಲಾಸಫರ್‌ಗಳು ಹೇಳಿದ್ದಾರೆ. ಮುಖ ದಲ್ಲಿರುವ ಗಡ್ಡವನ್ನು ರೇಜರ್ʼ ನಿಂದ ಹೆರೆದು ತೆಗೆದರೆ ಮುಖ ಹೊಳೆಯುತ್ತದೆ. ಅನಗತ್ಯ ಗಡ್ಡ ಮೀಸೆಗಳನ್ನು ತೆಗೆದು ಹಾಕುವುದೂ ಬದುಕಿನ ಅನಗತ್ಯ ಸಂಗತಿಗಳನ್ನು ಅಳಿಸಿ ಹಾಕುವುದೂ ಒಂದೇ ಎಂಬ ಫಿಲಾಸಫಿಯೊಂದಿಗೆ ಈ ಚಿಂತಕರು ನೀಡಿರುವ ಕೆಲವು ಸೂತ್ರಗಳನ್ನು ‘ಫಿಲಾಸಫಿಕಲ್ ರೇಜರ್ಸ್’ ಎಂದು ಕರೆದಿದ್ದಾರೆ.

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ.

GPS tracker: ನೌಕಾನೆಲೆ ಬಳಿ ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ! ಚೀನಾದ ಗೂಢಚರ್ಯೆ?

ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ! ಚೀನಾದ ಗೂಢಚರ್ಯೆ?

ಸೀಗಲ್‌ನ ಬೆನ್ನಿನಲ್ಲಿದ್ದ ಜಿಪಿಎಸ್‌ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸ ಪತ್ತೆಯಾಗಿದೆ. ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ‍್ಯಾಕರ್ ಬಳಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಸ್ಪೈಯಿಂಗ್‌ ಆತಂಕವೂ ಇದೆ.

Loading...