ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Bandipur Nagarahole Safari Ban: ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ: ಸಚಿವರ ಆದೇಶ

ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ

Human- wildlife conflict: ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ.

Harish Rai death: ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

Harish Rai funeral: ಉಡುಪಿಯಲ್ಲಿ ಹುಟ್ಟಿ ಬೆಳೆದಿದ್ದ ಹರೀಶ್‌ ರಾಯ್ ಅವರು ಬಳಿಕ ಅಲ್ಲಿಂದ ಮುಂಬಯಿಗೆ ಓಡಿಹೋಗಿದ್ದರು. ನಂತರ ಬೆಂಗಳೂರಿಗೆ ಬಂದು ಕನ್ನಡ ಚಿತ್ರೋದ್ಯಮಕ್ಕೆ ಸೇರಿಕೊಂಡಿದ್ದರು. ಹರೀಶ್‌ ಅವರ ಬಂಧುಬಾಧವರು ಇಲ್ಲಿದ್ದಾರೆ. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಉಡುಪಿಗೆ ಕೊಂಡೊಯ್ಯಲಾಗಿತ್ತು. ಇಂದು ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಿತು.

Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

Lift Fall accident: ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bangalore Traffic:: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

Bengaluru Traffic Cobra Beat System: ‘ಕೋಬ್ರಾ ಬೀಟ್’ ಸಿಬ್ಬಂದಿ ಗರಿಷ್ಠ ಮಟ್ಟದಲ್ಲಿ ಎರಡು ನಿಯೋಜಿತ ಮಾರ್ಗಗಳಲ್ಲಿ ನಿಯಮಿತವಾಗಿ ಗಸ್ತು ತಿರುಗುತ್ತಾರೆ. ಪುನರಾವರ್ತಿತ ಸಂಚಾರ ದಟ್ಟಣೆಯ ಪಾಯಿಂಟ್‌ಗಳು, ಪಾರ್ಕಿಂಗ್ ಉಲ್ಲಂಘನೆಗಳು ಮತ್ತು ಅಡಚಣೆಗಳನ್ನು ಗುರುತಿಸುತ್ತಾರೆ. ಜತೆಗೆ ತಕ್ಷಣವೇ ಸ್ಪಂದಿಸಿ ಸಮಸ್ಯೆ ಪರಿಹರಿಸಲಿದ್ದಾರೆ. ಆಗಾಗ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ಸಂಚಾರ ವರದಿಯಾಗುವ ಕಮರ್ಷಿಯಲ್ ಸ್ಟ್ರೀಟ್‌ನಂತಹ ಪ್ರದೇಶಗಳಲ್ಲಿ ಈ ‘ಕೋಬ್ರಾ’ ಸಿಬ್ಬಂದಿ ಗಸ್ತು ಕಾರ್ಯಾಚಣೆ ನಡೆಸಲಿದ್ದಾರೆ.

Shakti scheme: ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ಅಜೀಂ ಪ್ರೇಮ್‌ಜೀ ವಿವಿ ವರದಿ

ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ವರದಿ

Shakti scheme in Karnataka: 2023ರ ಜೂನ್ 11ರಂದು ಆರಂಭಿಸಲಾದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ. 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ.

Vishweshwar Hegde Kageri: ಜನ ಗಣ ಮನ- ವಂದೇ ಮಾತರಂ ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ವಿವಾದ, ಕಾಂಗ್ರೆಸ್ ಟೀಕೆ

ಜನ ಗಣ ಮನ ‌ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ, ಕಾಂಗ್ರೆಸ್ ಟೀಕೆ

National anthem: ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಪ್ರೇರಣೆ ನೀಡಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳಿಂದಾಗಿ ವಂದೇ ಮಾತರಂ ಯಾವಾಗಲೂ ನಮಗೆ ಸ್ಫೂರ್ತಿ ನೀಡಿದೆ. ಈ ಗೀತೆ 150 ವರ್ಷ ಹಳೆಯದು. ವಂದೇ ಮಾತರಂ ಎಲ್ಲೆಡೆ ಪಠಿಸಲ್ಪಡಬೇಕು. ಅದು ಎಲ್ಲೆಡೆ ಪ್ರತಿಧ್ವನಿಸಬೇಕು ಎಂದು ಕೂಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

PM Narendra Modi: ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪ್ರಧಾನಿ ನರೇಂದ್ರ ಮೋದಿ ಗೀತಾ ಪಠನ

ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪಿಎಂ ನರೇಂದ್ರ ಮೋದಿ ಗೀತಾ ಪಠನ

Udupi Sri Krishna Math: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವಗೀತಾ ಪರ್ಯಾಯ ಎಂದೇ ಕರೆಯಲ್ಪಡುವ 4ನೇ ಪರ್ಯಾಯೋತ್ಸವ ಆರಂಭದಲ್ಲಿ ಸಂಕಲ್ಪಿಸಿದಂತೆ, ನ. 8ರಿಂದ ಒಂದು ತಿಂಗಳ ಕಾಲ ನಡೆಯುವ ಬೃಹತ್ ಗೀತೋತ್ಸವದ ಆಮಂತ್ರಣ ಪತ್ರವನ್ನು ಬುಧವಾರ ಕನಕ ಮಂಟಪದಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೋತ್ಸವದ ಅಂಗವಾಗಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.

Drugs seize: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಪತ್ತೆ, ನಾಲ್ವರ ಸೆರೆ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 53 ಕೋಟಿ ರು. ಡ್ರಗ್ಸ್ ಪತ್ತೆ, ನಾಲ್ವರ ಸೆರೆ

Drugs seize in kempegowda airport: ವಿದೇಶದಿಂದ ಬರುವ ವೇಳೆ ಬ್ಯಾಗ್‌ಗಳಲ್ಲಿ ಹೈಡ್ರೋ ಗಾಂಜಾವನ್ನು ಅಡಗಿಸಿ ತಂದಿದ್ದರು. ಮೇಲ್ನೋಟಕ್ಕೆ ಸಾಮಾನ್ಯ ಬ್ಯಾಗ್‌ನಂತೆ ಕಾಣುತ್ತಿತ್ತು. ಆದರೆ ಪರಿಶೀಲಿಸಿದಾಗ ಗಾಂಜಾ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥೈಲ್ಯಾಂಡ್ ಸೇರಿ ಕೆಲ ದೇಶಗಳಲ್ಲಿ ಹೈಡ್ರೋ ಗಾಂಜಾವನ್ನು ಡ್ರಗ್ಸ್ ಮಾಫಿಯಾ ಸದಸ್ಯರು ತಯಾರಿಸುತ್ತಾರೆ. ಆನ್‌ಲೈನ್ ಮೂಲಕವೇ ಆ ಗಾಂಜಾವನ್ನು ತರಿಸಿಕೊಳ್ಳುತ್ತಾರೆ. ಇದರ ಬೆಲೆ1 ಕೆಜಿ 1 ಕೋಟಿ ರು. ಇದೆ.

Bomb threat: ಯುವಕನಿಂದ ಪ್ರೀತಿ ಭಂಗ; ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ : ಮಹಿಳಾ ಟೆಕ್ಕಿ ಆರೆಸ್ಟ್

ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ: ಭಗ್ನಪ್ರೇಮಿ ಮಹಿಳಾ ಟೆಕ್ಕಿ ಸೆರೆ

Bengaluru Crime news: ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಗುಜರಾತ್ ಮೂಲದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್‌ಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ರೆನೆ ಜೋಶಿಲ್ದಾ ಎನ್ನುವ ಮಹಿಳಾ ಟೆಕ್ಕಿಯನ್ನು ಆರೆಸ್ಟ್ ಮಾಡಿದ್ದಾರೆ. ಈಕೆ ಬೆಂಗಳೂರಿನ ಶಾಲೆಗಳಿಗೆ, ಜೊತೆಗೆ ಚೆನ್ನೈ, ಹೈದರಾಬಾದ್ ಹಾಗೂ ಗುಜರಾತಿನ ಶಾಲೆಗಳಿಗೂ ಕೂಡ ಈಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾಳೆ.

Harsh Rai Death: ಭೂಗತ ಲೋಕದ ನಂಟು ಹೊಂದಿದ್ದ ಹರೀಶ್‌ ಆಚಾರಿ, ರಾಯ್‌ ಆಗಿದ್ದು ಹೇಗೆ?

ಭೂಗತ ಲೋಕದ ನಂಟು ಹೊಂದಿದ್ದ ಹರೀಶ್‌ ಆಚಾರಿ, ರಾಯ್‌ ಆಗಿದ್ದು ಹೇಗೆ?

Harish rai no more: ಹರೀಶ್‌ ರಾಯ್‌ ಅವರು ಕರಾವಳಿಯ ಉಡುಪಿಯವರು. ಅವರ ಮೊದಲ ಹೆಸರು ಹರೀಶ್‌ ಆಚಾರಿ. ಅಪ್ಪನಿಗೆ ಹೆದರಿ ಭಯದಿಂದ ಊರು ಬಿಟ್ಟು ಬಾಂಬೆಗೆ ಓಡಿ ಹೋದ ಅವರು 2 ವರ್ಷ ಅಲ್ಲೇ ಇದ್ದರು. ಮುಂಬಯಿಯಲ್ಲಿ ಅವರ ಮೇಲೆ ಕೆಲವು ಕೇಸ್​ಗಳು ಇದ್ದವು. ಕೆಲವು ರೌಡಿಗಳನ್ನು ಎದುರು ಹಾಕಿಕೊಂಡಿದ್ದರು. ಭೂಗತ ಜಗತ್ತಿನ ಪರಿಚಯವೂ ಆಗಿತ್ತು. ಬೆಂಗಳೂರಿಗೆ ಬಂದ ನಂತರ ಉಪೇಂದ್ರ ಪರಿಚಯದಿಂದ ಸಿನಿಮಾ ಇಂಡಸ್ಟ್ರಿಗೆ ಬರುವಂತಾಯಿತು.

Harish Rai Death: ʼಕೆಜಿಎಫ್ ಚಾಚಾʼ ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ

ʼಕೆಜಿಎಫ್ ಚಾಚಾʼ ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ

Harish Rai no more: ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

RSS row: ಆರೆಸ್ಸೆಸ್‌ ಪಥಸಂಚಲನ ನಿರಾಳ, ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

ಆರೆಸ್ಸೆಸ್‌ ಪಥಸಂಚಲನ ನಿರಾಳ, ಸರ್ಕಾರದ ಮೇಲ್ಮನವಿ ಹೈಕೋರ್ಟ್‌ನಲ್ಲಿ ವಜಾ

Karnataka high court: ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ಧಾರವಾಡದ ವಿಭಾಗೀಯ ಪೀಠದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರುವ ಉದ್ದೇಶದಿಂದ ಈ ನಿರ್ಬಂಧ ವಿಧಿಸಲಾಗಿತ್ತು. 10 ಜನಕ್ಕಿಂತ ಹೆಚ್ಚು ಜನರು ಸೇರಿಕೊಂಡರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಅಧಿಸೂಚನೆ ನಾಗರಿಕರ ಹಕ್ಕಿಗೆ ಧಕ್ಕೆ ಎಂದು ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು. ಈ ಆದೇಶಕ್ಕೆ ಏಕ ಸದಸ್ಯ ಪೀಠ ತಡೆಯಾಜ್ಞೆ ತಂದಿತ್ತು.

Harish Kera Column: ಆಡು ಕನ್ನಡ ಸಾಲದು, ಬರಹ ಕನ್ನಡವೂ ಬೆಳೆಯಲಿ

ಆಡು ಕನ್ನಡ ಸಾಲದು, ಬರಹ ಕನ್ನಡವೂ ಬೆಳೆಯಲಿ

ಚಿನ್ನಯ್ಯ ಮಾಸ್ಟ್ರು ಕೆದಂಬಾಡಿ ಜತ್ತಪ್ಪ ರೈಗಳ ಬೇಟೆಯ ಕತೆಗಳ ಪುಸ್ತಕಗಳನ್ನು ತೆಗೆದು ಕೊಂಡು ಬಂದು ಕ್ಲಾಸಿನಲ್ಲಿ ಓದುತ್ತಿದ್ದರು. ನಮ್ಮ ಅಕ್ಕಪಕ್ಕದ ಮಲೆಕಾಡುಗಳಲ್ಲಿ ಓಡಾಡು ತ್ತಿದ್ದ ಹುಲಿ ಚಿರತೆ ಕಾಡುಕೋಣಗಳೇ ಈ ಕತೆಯ ನಾಯಕರೂ ದುರಂತ ನಾಯಕರೂ ಆಗಿರುವುದನ್ನು ಕಂಡು ನಾವು ಚಕಿತರಾಗುತ್ತಿದ್ದೆವು.

Karnataka GST Collection: ಜಿಎಸ್‌ಟಿ ಮಾಸಿಕ ವರದಿ: ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಅಕ್ಟೋಬರ್‌ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

Karnataka GST collection September 2025: ಸೆಪ್ಟೆಂಬರ್‌ನಲ್ಲಿ ನಡೆದ ವಹಿವಾಟುಗಳಲ್ಲಿ ಕರ್ನಾಟಕ ರಾಜ್ಯ 14,395 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 13,080 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿತ್ತು. ಕೇಂದ್ರ ಜಿಎಸ್‌ಟಿಯ ಅಂಶಗಳು, ಅಂತರರಾಜ್ಯ ವಹಿವಾಟಿನ ಮೇಲಿನ ತೆರಿಗೆ, ಸಂಯೋಜಿತ ಜಿಎಸ್‌ಟಿ ಮತ್ತು ಸೆಸ್ ಸೇರಿದಂತೆ ಒಟ್ಟು ಸಂಗ್ರಹ ಇದಾಗಿದೆ. ಈ ಘಟಕಗಳನ್ನು ಕಡಿತಗೊಳಿಸಿದ ನಂತರ ರಾಜ್ಯ ಖಜಾನೆಗೆ ನಿವ್ವಳ 7,065 ಕೋಟಿ ರೂ.ಗಳನ್ನು ಪಡೆಯಲಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಟಾಪ್ -5 ರಾಜ್ಯಗಳೆಂದು ಪರಿಗಣಿಸಲಾದ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಯಕ್ಷಮತೆ ಅತ್ಯುತ್ತಮವಾಗಿರುವುದು ಕಂಡುಬಂದಿದೆ.

Bihar Election 2025: ಬಿಹಾರ ವಿಧಾನಸಭೆ ಚುನಾವಣೆ: 121 ಸ್ಥಾನಗಳಿಗೆ ಮೊದಲ ಹಂತದ ಮತದಾನ ಆರಂಭ

ಬಿಹಾರ ವಿಧಾನಸಭೆ ಚುನಾವಣೆ: 121 ಸ್ಥಾನಗಳಿಗೆ ಮೊದಲ ಹಂತದ ಮತದಾನ ಆರಂಭ

Bihar Assembly Election 2025 First Phase Voting: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ (first phase voting) ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈಗ ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿ ಸ್ಥಾನಕ್ಕೆ ಸರಾಸರಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲ್ಲಾ ಬೂತ್‌ಗಳಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಕೆಲಸಕ್ಕಾಗಿ ಸುಮಾರು ನಾಲ್ಕೂವರೆ ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Student Death: ಬೆಳಗ್ಗೆ ಊರಿಗೆ ಬರುತ್ತೇನೆಂದ ಮಗಳು ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ನೇಣಿಗೆ ಶರಣು

ಬೆಳಗ್ಗೆ ಊರಿಗೆ ಬರುತ್ತೇನೆಂದ ಮಗಳು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು

Self Harming: ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವನಿಷಾ (21) ಇನ್ನೇನು ಕಾಲೇಜ್ ಹೋಗುವ ಸಮಯದಲ್ಲಿ ತಿಂಡಿ ಮಾಡಿಕೊಂಡು ಹಾಸ್ಟೆಲ್​​ ಟೆರೇಸ್ ಮೇಲೆ ಹೋಗಿದ್ದಾಳೆ. ಆದರೆ, ಸ್ವಲ್ಪ ಹೊತ್ತಿನ ಬಳಿಕ ಟ್ಯಾಂಕ್ ಪಕ್ಕದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮನಿಷಾ ಶವ ಪತ್ತೆಯಾಗಿದೆ. ಟೆರೇಸ್ ಮೇಲೆ ಬಟ್ಟೆ ಹಾಕಲು ಹೋಗಿದ್ದ ವಿದ್ಯಾರ್ಥಿನಿಯರು ನೋಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮಗಳ ಸಾವಿನ ಸುದ್ದಿ ತಿಳಿದ ಹೆತ್ತವರ ಅಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವುದೇ ಸಮಸ್ಯೆ ಅವಳಿಗೆ ಇರಲಿಲ್ಲ ಎನ್ನುವುದು ಪೋಷಕರ ಮಾತು.

PUC students: ಸಿಹಿ ಸುದ್ದಿ, ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲು ಸರಕಾರ ಚಿಂತನೆ

ಸಿಹಿ ಸುದ್ದಿ, ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲು ಸರಕಾರ ಚಿಂತನೆ

Mid day meal: ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ. ಸರ್ಕಾರಿ ಕಾಲೇಜುಗಳ ಪ್ರವೇಶ ಅಧಿಕಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ಹಾಗೂ ನಾನಾ ಕ್ರಮಗಳಿಗೆ ಮುಂದಾಗಿದೆ. ಅದರಲ್ಲಿ, ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡುವುದು ಕೂಡ ಒಂದಾಗಿದೆ.

Road Accident: ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

Bidar News: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ತೆಲಂಗಾಣ ಮೂಲದ ರಾಚಪ್ಪ, ನವೀನ್, ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ. ಮೃತರು ನೆರೆಯ ತೆಲಂಗಾಣದ ಜಗನ್ನಾಥಪುರ ಗ್ರಾಮದವರಾಗಿದ್ದಾರೆ. ನಿನ್ನೆ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಇವರು ಬಂದಿದ್ದರು. ಇಂದು ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುವ ವೇಳೆ ಕಾರಿಗೆ ಗೂಡ್ಸ್​ ಗಾಡಿ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾರೆ.

WhatsApp RTO challan scam: ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

RTO challan scam:‌ ನಿಮಗೆ ಬರುವ ಈ ಫೈಲ್ ಅನ್ನು ತೆರೆದ ಕೂಡಲೇ ನಿಮ್ಮ ಫೋನ್‌ಗೆ ಮಾಲ್‌ವೇರ್‌ ಅಪಾಯ ಸಂಭವಿಸಬಹುದು. ಈ ಸಂದೇಶ ಸಾಮಾನ್ಯವಾಗಿ RTO E Challan.apk ಅಥವಾ Mparivahan.apk ಹೆಸರಿನ ಫೈಲ್ ಅನ್ನು ಹೊಂದಿರುತ್ತದೆ. ನೀವು ಅದನ್ನು ತೆರೆದ ನಂತರ, ಒಳಗೆ ಅಡಗಿರುವ ಮಾಲ್‌ವೇರ್ ಹ್ಯಾಕರ್‌ಗಳಿಗೆ ನಿಮ್ಮ ಸಾಧನಕ್ಕೆ ರಿಮೋಟ್ ಪ್ರವೇಶವನ್ನು ನೀಡುತ್ತದೆ. ಇದರಿಂದ ಸೈಬರ್ ಅಪರಾಧಿಗಳಿಗೆ ನಿಮ್ಮ ವೈಯಕ್ತಿಕ ಡೇಟಾ, ಬ್ಯಾಂಕ್ ವಿವರಗಳಿಗೆ ಪ್ರವೇಶ ಸಿಗುತ್ತದೆ. ಅವನ್ನು ಅವರು ಕದಿಯಬಹುದು. ನಿಮ್ಮ ಇತರ WhatsApp ಸಂಪರ್ಕಗಳಿಗೆ ಇದೇ ವಂಚನೆ ಸಂದೇಶವನ್ನು ಕಳುಹಿಸಲು ನಿಮ್ಮ ಸಂಖ್ಯೆಯನ್ನು ಸಹ ಬಳಸಬಹುದು.

HY Meti: ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

ಕಾಂಗ್ರೆಸ್‌ ಶಾಸಕ ಎಚ್‌ ವೈ ಮೇಟಿ ಅಂತ್ಯಕ್ರಿಯೆ ಇಂದು

HY Meti State Funeral: ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವ ಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

Belagavi Sugarcane farmers Protest: ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಬೆಳಗಾವಿಯಲ್ಲಿ ಹೆದ್ದಾರಿ ಬಂದ್

ಕಾಳ್ಗಿಚ್ಚಾದ ಕಬ್ಬು ಬೆಳೆಗಾರರ ಪ್ರತಿಭಟನೆ, ನ.7ರಂದು ಹೆದ್ದಾರಿ ಬಂದ್

Sugarcane farmers Protest: ಕಬ್ಬು ಬೆಳೆಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆರಂಭವಾಗಿರುವ ಕಬ್ಬು ಬೆಳೆಗಾರರ ಪ್ರತಿಭಟನೆ, ಇದೀಗ ಇಡೀ ಉತ್ತರ ಕರ್ನಾಟಕದ ರೈತರ ಬೃಹತ್‌ ಚಳವಳಿಯಾಗಿ ಪರಿವರ್ತನೆಯಾಗಿದೆ. ರೈತರ ಅಹೋರಾತ್ರಿ ಧರಣಿಗೆ ಮಂಗಳವಾರ ಬಿಜೆಪಿಯೂ ಕೈಜೋಡಿಸಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂ.ಕನಿಷ್ಠ ಬೆಂಬಲ ದರ ನೀಡಬೇಕೆಂಬ ಬೇಡಿಕೆಗೆ ದಿನೇದಿನೆ ಬಲ ಬರುತ್ತಿದ್ದು, ಸಕ್ಕರೆ ಕಾರ್ಖಾನೆಗಳು ನೀಡುತ್ತಿರುವ 3,200 ರೂ.ಬೆಲೆಗೆ ಕಬ್ಬು ಪೂರೈಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನ ಮತ್ತಷ್ಟು ತೀವ್ರಗೊಂಡಿದ್ದು, ಸಹಸ್ರಾರು ರೈತರು ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಸರಕಾರದ ವಿರುದ್ಧ ಕಹಳೆ ಊದಿದ್ದಾರೆ.

UPS cargo Plane Crash: ಅಮೆರಿಕದ ಕೆಂಟುಕಿಯಲ್ಲಿ ವಿಮಾನ ಟೇಕಾಫ್‌ ವೇಳೆ ಅಪಘಾತ, ಮೂವರು ಸಾವು

ಅಮೆರಿಕದ ಕೆಂಟುಕಿಯಲ್ಲಿ ವಿಮಾನ ಟೇಕಾಫ್‌ ವೇಳೆ ಅಪಘಾತ, ಮೂವರು ಸಾವು

UPS cargo plane crash: ಕೆಂಟುಕಿಯ ಲೂಯಿಸ್ ವಿಲ್ಲೆಯಲ್ಲಿರುವ ವಿಮಾನ ನಿಲ್ದಾಣದಿಂದ ಹೊರಡುವಾಗ ಯುಪಿಎಸ್ ಸರಕು ವಿಮಾನವೊಂದು ಮಂಗಳವಾರ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ಕನಿಷ್ಠ ಮೂವರು ಸತ್ತಿದ್ದಾರೆ ಎಂದು ಭಾವಿಸಲಾಗಿದೆ. ಆದರೆ ಸತ್ತವರ ಸಂಖ್ಯೆ ಹೆಚ್ಚಲಿದೆ ಎಂದು ಭಯವಿದೆ. ಕನಿಷ್ಠ 11 ಜನರಿಗೆ ಗಾಯಗಳಾಗಿವೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗವರ್ನರ್ ಆಂಡಿ ಬೆಶಿಯರ್ ತಿಳಿಸಿದ್ದಾರೆ.

POCSO case: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷದ ಬಳಿಕ ಬಯಲು

ಮೂಕ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷ ಬಳಿಕ ಬಯಲು

Harassment: ವಿದ್ಯಾರ್ಥಿನಿಗೆ ಮಾತನಾಡಲು ಬರದಿದ್ದರಿಂದ ಇದನ್ನೇ ಆರೋಪಿ ಲಾಭವಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಳ್ಳೇಗಾಲದಲ್ಲಿ 2012-2013ನೇ ಸಾಲಿನಲ್ಲಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ಕಳೆದ 1 ವಾರದ ಹಿಂದೆ ಶಾಲೆಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಭೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಬಿಚ್ಚಿಟ್ಟಿದ್ದಾಳೆ. ಬಳಿಕ ಸಂತ್ರಸ್ತೆ ಕೊಟ್ಟ ಮಾಹಿತಿ ಮೇರೆಗೆ ಶಾಲೆಯ ಸಿಇಒ ದೂರು ನೀಡಿದ್ದು, ಇದೀಗ ಕೊಳ್ಳೇಗಾಲ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Priyank Kharge: ರಾಜ್ಯದ ಪ್ರಜೆಗಳಿಗೆ ಸಿಹಿ ಸುದ್ದಿ:  ಒಂದು ಕೋಟಿ ಅಕ್ರಮ ಆಸ್ತಿ ಸಕ್ರಮಕ್ಕೆ ಇ-ಸ್ವತ್ತು ವಿತರಣೆ ಶೀಘ್ರ

ಸಿಹಿ ಸುದ್ದಿ: 1 ಕೋಟಿ ಅಕ್ರಮ ಆಸ್ತಿ ಸಕ್ರಮಕ್ಕೆ ಇ-ಸ್ವತ್ತು ವಿತರಣೆ ಶೀಘ್ರ

E- Properties: ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಪ್ರಯೋಜನ ಪಡೆಯಲು ತವಕದಿಂದ ಕಾಯುತ್ತಿದ್ದು, ಸಾರ್ವಜನಿಕರಿಗೆ ಸುಗಮ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಇ-ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಲಾಗಿದೆ.

Loading...