ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
CM Siddaramaiah: ನನಗೆ ಯಾವತ್ತೂ ರಾಜಕೀಯ ನಿಶ್ಶಕ್ತಿ ಇಲ್ಲ, 5 ವರ್ಷ ನಾನೇ ಸಿಎಂ: ಕಾಲೆಳೆದ ವಿಪಕ್ಷಗಳಿಗೆ ಸಿದ್ದರಾಮಯ್ಯ ಖಡಕ್‌ ಉತ್ತರ

ನಿಶ್ಶಕ್ತಿ ಇಲ್ಲ, 5 ವರ್ಷ ನಾನೇ ಸಿಎಂ: ವಿಪಕ್ಷಗಳಿಗೆ ಸಿದ್ದರಾಮಯ್ಯ ಉತ್ತರ

ವಿಪಕ್ಷ ನಾಯಕ ಆರ್.ಅಶೋಕ್, CLP ಸಭೆಯಲ್ಲಿ ನಿಮ್ಮನ್ನು ಆಯ್ಕೆ ಮಾಡಿರುವುದು 5 ವರ್ಷಕ್ಕಾ ಅಥವಾ ಎರಡೂವರೆ ವರ್ಷಕ್ಕೊ ಸರಿಯಾಗಿ ಹೇಳಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಒತ್ತಾಯ ಮಾಡಿದರು. ಈ ವೇಳೆ ಎರಡೂವರೆ ವರ್ಷವೆಂದು ಹೇಳಿಯೇ ಇಲ್ಲ ಎಂದು ಸಿಎಂ ಹೇಳಿದರು. ನನಗೆ ರಾಜಕೀಯ ನಿಶ್ಶಕ್ತಿ ಯಾವಾಗಲೂ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

Dharmasthala Case: ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣನವರ್‌ರಿಂದ ಜೀವ ಬೆದರಿಕೆ, ರಕ್ಷಣೆ ಕೊಡಿ: ಚಿನ್ನಯ್ಯ ದೂರು

Dharmasthala Case: ತನಗೆ ಹಾಗೂ ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಅವರಿಗೆ ಧರ್ಮಸ್ಥಳ ವಿರೋಧಿ ಹೋರಾಟಗಾರರಾದ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡ, ಜಯಂತ್, ಯುಟ್ಯೂಬರ್‌ ಸಮೀರ್ ಎಂ.ಡಿ. ಮತ್ತು ಅವರ ಸಂಗಡಿಗರಿಂದ ಜೀವ ಬೆದರಿಕೆ ಇದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಬೇಕು ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Murder Attempt: ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಗಂಡ!

ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್​ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್​ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.

Cancer cases: ದಕ್ಷಿಣ ಕನ್ನಡದಲ್ಲಿ ಒಂದೇ ವರ್ಷದಲ್ಲಿ ಕ್ಯಾನ್ಸರ್‌ ಪ್ರಕರಣ ದುಪ್ಪಟ್ಟು, ಕಳವಳ

ದಕ್ಷಿಣ ಕನ್ನಡದಲ್ಲಿ ಒಂದೇ ವರ್ಷದಲ್ಲಿ ಕ್ಯಾನ್ಸರ್‌ ಕೇಸ್ ದುಪ್ಪಟ್ಟು, ಕಳವಳ

Dakshina Kannada News: ಬಾಯಿ ಕ್ಯಾನ್ಸರ್‌ ಹಾಗೂ ಸ್ತನ ಕ್ಯಾನ್ಸರ್‌ಗಳ ಪ್ರಮಾಣ ಜಿಲ್ಲೆಯಲ್ಲಿ ವಿಪರೀತವಾಗಿ ಏರಿಕೆಯಾಗುತ್ತಿದೆ. ಇದರ ಜತೆಗೆ ಗರ್ಭಕಂಠದ ಕ್ಯಾನ್ಸರ್‌, ಇತರ ರೀತಿಯ ಕ್ಯಾನ್ಸರ್‌ಗಳು ಕೂಡ ಹೆಚ್ಚುತ್ತಿದ್ದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಹಳಷ್ಟು ಏರಿಕೆ ಕಂಡಿದೆ. ವಿಶೇಷವಾಗಿ ಮಂಗಳೂರು, ಪುತ್ತೂರು ಭಾಗದಲ್ಲಿಯೇ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಂಡಿವೆ.

Karnataka Politcs: ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಳಗಾವಿ ಉದ್ಯಮಿಗಳೊಂದಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದ ಬಳಿಕ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅವರು ಕೂಡ ಮಂಗಳವಾರ ರಾತ್ರಿಯಷ್ಟೇ ದಲಿತ ಉದ್ಯಮಿಗಳಿಗೆ ರಾತ್ರಿ ಡಿನ್ನರ್‌ ಸಭೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು.

Road Accident: ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಡಿಸಿಎಂ ಡಿಕೆ ಶಿವಕುಮಾರ್‌ ಪಿಎಸ್‌ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದರು. ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿವೆ.

Gruha Laksmi Scheme: ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಬಗ್ಗೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಪ್‌ಡೇಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರಿಂದ ಗೃಹಲಕ್ಷ್ಮೀ ಯೋಜನೆ ಹಣದ ಅಪ್‌ಡೇಟ್

ಗೃಹ ಲಕ್ಷ್ಮೀ ಯೋಜನೆ (Gruha Laksmi Scheme) ಬಗ್ಗೆ ಯಾವುದೇ ಗೊಂದಲ ಇಲ್ಲ. ಗೃಹ ಲಕ್ಷ್ಮೀ ಕಂತಿನ ಹಣ ನೇರವಾಗಿ ಡಿಬಿಟಿ ಮೂಲಕ ಹೋಗುತ್ತದೆ. ಇಲ್ಲಿಯವರೆಗೆ ‌ಯೋಜನೆ ಪ್ರಾರಂಭ ಆಗಿ 23 ಕಂತು ಹಣ ಹೋಗಿದೆ. ವಿಪಕ್ಷಗಳು ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಬಗ್ಗೆ ಕೇಳುತ್ತಿದ್ದಾರೆ. ನಾನು ಅವರಿಗೆ 23 ಕಂತಿನ 46 ಸಾವಿರ ಕೋಟಿ ಹಣ ಹೋಗಿದೆ ಉತ್ತರಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Physical Abuse: ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

Dharmasthala Case: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು; ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಕಳೆದ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ 18, 2025ರಿಂದ ಸೆಪ್ಟೆಂಬರ್ 17, 2026ರವರೆಗೆ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ, ಪುತ್ತೂರು ಸಹಾಯಕ ಆಯುಕ್ತರ ಗಡೀಪಾರು ಆದೇಶವನ್ನು ರದ್ದುಪಡಿಸಿತ್ತು. ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಮಾಡುವಂತೆ ಸೂಚಿಸಿತ್ತು.

GBA amendment bill: ಜಿಬಿಎ ವಿಧೇಯಕ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ; ಸುಧಾ ಮೂರ್ತಿ, ಕೆ. ಸುಧಾಕರ್‌ಗೆ ಸದಸ್ಯತ್ವ

ಜಿಬಿಎ ವಿಧೇಯಕ ತಿದ್ದುಪಡಿ; ಸುಧಾ ಮೂರ್ತಿ, ಕೆ. ಸುಧಾಕರ್‌ಗೆ ಸದಸ್ಯತ್ವ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದರು. ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಜಿಬಿಎ ಸದಸ್ಯರ ಪಟ್ಟಿಯಲ್ಲಿ ಬಿಟ್ಟು ಹೋಗಿರುವುದರಿಂದ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ತಿಳಿಸಿದರು. ಇದೀಗ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ (Sudha Murty), ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಹೆಸರು ಕೂಡ ಸೇರ್ಪಡೆಯಾಗಿದೆ.

Belagavi news: ಬೆಳಗಾವಿಯಲ್ಲಿ ಘೋರ ದುರಂತ, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರ ತಲೆ ಕಟ್‌

ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರ ತಲೆ ಕಟ್‌

ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಟಾವು ವೇಳೆ ಹಿಂದೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ. ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

CM Siddaramaiah: ಸಿಎಂ ಸಿದ್ದರಾಮಯ್ಯಗೆ ಬಿಗ್‌ ಡೇ, ಮುಡಾ ಕೇಸ್‌ನಲ್ಲಿ ಕೋರ್ಟ್‌ ಆದೇಶ ಇಂದು

ಸಿಎಂ ಸಿದ್ದರಾಮಯ್ಯಗೆ ಬಿಗ್‌ ಡೇ, ಮುಡಾ ಕೇಸ್‌ನಲ್ಲಿ ಕೋರ್ಟ್‌ ಆದೇಶ ಇಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು.

PM Narendra Modi: ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತೀಯರಿಂದ ಯಕ್ಷಗಾನ- ನೃತ್ಯದ ಸ್ವಾಗತ

ಒಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಯಕ್ಷಗಾನ- ನೃತ್ಯದ ಸ್ವಾಗತ

PM Narendra Modi in Oman: ಮಸ್ಕತ್​​ನಲ್ಲಿ ಭಾರತೀಯ ವಲಸಿಗರು ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ನೀಡಿದರು. ಯಕ್ಷಗಾನ, ಹಿಂದಿ ಗೀತೆಗಳು, ಕೂಚಿಪುಡಿ ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.

Harish Kera Column: ಚಿಂತನೆಯನ್ನು ಟ್ರಿಮ್‌ ಮಾಡುವ ರೇಜರ್‌ʼಗಳು

Harish Kera Column: ಚಿಂತನೆಯನ್ನು ಟ್ರಿಮ್‌ ಮಾಡುವ ರೇಜರ್‌ʼಗಳು

ನಾವು ಸನ್ನಿವೇಶವನ್ನು ನೋಡುವ ಬಗೆಯಲ್ಲಿ ಸ್ವಲ್ಪ ವ್ಯತ್ಯಾಸ ಮಾಡಿಕೊಂಡರೆ- ಬದುಕು ಹೆಚ್ಚು ಹಿತಕರ ಆಗಿರುತ್ತೆ ಅಂತ ಹಿಂದಿನ ಕೆಲವು ಫಿಲಾಸಫರ್‌ಗಳು ಹೇಳಿದ್ದಾರೆ. ಮುಖ ದಲ್ಲಿರುವ ಗಡ್ಡವನ್ನು ರೇಜರ್ʼ ನಿಂದ ಹೆರೆದು ತೆಗೆದರೆ ಮುಖ ಹೊಳೆಯುತ್ತದೆ. ಅನಗತ್ಯ ಗಡ್ಡ ಮೀಸೆಗಳನ್ನು ತೆಗೆದು ಹಾಕುವುದೂ ಬದುಕಿನ ಅನಗತ್ಯ ಸಂಗತಿಗಳನ್ನು ಅಳಿಸಿ ಹಾಕುವುದೂ ಒಂದೇ ಎಂಬ ಫಿಲಾಸಫಿಯೊಂದಿಗೆ ಈ ಚಿಂತಕರು ನೀಡಿರುವ ಕೆಲವು ಸೂತ್ರಗಳನ್ನು ‘ಫಿಲಾಸಫಿಕಲ್ ರೇಜರ್ಸ್’ ಎಂದು ಕರೆದಿದ್ದಾರೆ.

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ.

GPS tracker: ನೌಕಾನೆಲೆ ಬಳಿ ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ! ಚೀನಾದ ಗೂಢಚರ್ಯೆ?

ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ! ಚೀನಾದ ಗೂಢಚರ್ಯೆ?

ಸೀಗಲ್‌ನ ಬೆನ್ನಿನಲ್ಲಿದ್ದ ಜಿಪಿಎಸ್‌ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸ ಪತ್ತೆಯಾಗಿದೆ. ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ‍್ಯಾಕರ್ ಬಳಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಸ್ಪೈಯಿಂಗ್‌ ಆತಂಕವೂ ಇದೆ.

Dharwad News: ಬೆತ್ತಲೆ ಮಸಾಜ್‌ ಮಾಡಿಸಿಕೊಂಡ ಸ್ವಾಮೀಜಿಯ ವಿಡಿಯೊ ಬಯಲು, ಬ್ಲ್ಯಾಕ್‌ಮೇಲ್‌

ಸ್ವಾಮೀಜಿಯ ಬೆತ್ತಲೆ ಮಸಾಜ್‌ ವಿಡಿಯೊ ಬಯಲು, ಬ್ಲ್ಯಾಕ್‌ಮೇಲ್‌ ಕೇಸ್

ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿತ್ತು. ಗ್ರಾಮದ ವ್ಯಕ್ತಿಯೊಬ್ಬರ ಸಮ್ಮುಖದಲ್ಲಿ 10 ಲಕ್ಷಕ್ಕೆ ಡೀಲ್ ಓಕೆ ಆಗಿತ್ತು. ಬಳಿಕ ಸ್ವಾಮೀಜಿ ವಿಡಿಯೋ ಡಿಲೀಟ್‌ ಮಾಡುವಂತೆ ಹೇಳಿ ಮಠಕ್ಕೆ ಕರೆಸಿಕೊಂಡು 7 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಬಾಕಿ 3 ಲಕ್ಷ ಹಣ ಬಂದಿಲ್ಲ ಅಂತ ಗುಂಪಿನವರು ವಿಡಿಯೋ ವೈರಲ್‌ ಮಾಡಿದ್ದಾರೆ.

National Herald Case: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೇ ಕಾರ್ಡ್ ಹಿಡಿದುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Karnataka Weather: ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ತಾಪಮಾನ

ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ 7 ಡಿಗ್ರಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru weather) ಸಂಜೆ, ರಾತ್ರಿ ಹಾಗೂ ಮುಂಜಾನೆ ತಾಪಮಾನ ಎಂದಿಗಿಂತ ಕಡಿಮೆ ಪ್ರಮಾಣದಲ್ಲಿರಲಿದೆ. ಹಿರಿಯ ನಾಗರಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.

Heart Attack: ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ (BCM Hostel) ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.

New year celebration 2026: ಗೋವಾ ಪಬ್‌ ದುರಂತ ಹಿನ್ನೆಲೆ, ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಠಿಣ ರೂಲ್ಸ್‌, ಏನೇನು ಇಲ್ಲಿ ತಿಳ್ಕೊಳ್ಳಿ

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಕಠಿಣ ರೂಲ್ಸ್‌, ಏನೇನು ಇಲ್ಲಿ ತಿಳ್ಕೊಳ್ಳಿ

ಬೆಂಗಳೂರು ನಗರ ಪೊಲೀಸರು ಸುಮಾರು 19 ಅಂಶಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಕಾರ್ಯಕ್ರಮ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ಗೋವಾ ಪಬ್ ದುರಂತದ ನಂತರ ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೆ ತರಲು ಖಾಕಿ ಪಡೆ ಮುಂದಾಗಿದೆ.

Bondi beach shooting: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಯರ ರಕ್ತಪಾತಗೈದ ಹಂತಕನಿಗೆ ಭಾರತೀಯ ಲಿಂಕ್‌

ಬೊಂಡಿ ಬೀಚ್‌ನಲ್ಲಿ ಯಹೂದಿಯರ ರಕ್ತಪಾತಗೈದ ಹಂತಕನಿಗೆ ಭಾರತೀಯ ಲಿಂಕ್‌

ಹಂತಕ ಸಾಜೀದ್ ಅಕ್ರಂ 25 ವರ್ಷಗಳ ಹಿಂದೆ ಆಸ್ಟ್ರೇಲಿಯಾಗೆ ಹೊರಟು ಹೋಗಿದ್ದ, ಅಲ್ಲಿ ಆತ ಕ್ರಿಶ್ಚಿಯನ್ ಮಹಿಳೆಯನ್ನು ಮದುವೆಯಾಗಿದ್ದ. ಇದೇ ಕಾರಣಕ್ಕೆ ಆತನನ್ನು ಆತನ ಕುಟುಂಬ ದೂರ ಇಟ್ಟಿದೆ ಎಂದು ಅವರು ಹೇಳಿದ್ದಾರೆ. ಕಳೆದ 27 ವರ್ಷಗಳಲ್ಲಿ ಸಾಜೀದ್ ಹೆಚ್ಚೆಂದರೆ ಮೂರು ಬಾರಿ ಭಾರತಕ್ಕೆ ಬಂದಿರಬಹುದು. 2022ರಲ್ಲಿ ಆತ ಕೊನೆಯ ಬಾರಿ ಭಾರತಕ್ಕೆ ಬಂದಿದ್ದ.

R Ashok: ಜಮೀನು ಅಕ್ರಮ ಪ್ರಕರಣದಲ್ಲಿ ಆರ್‌ ಅಶೋಕ್‌ಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್‌

ಜಮೀನು ಅಕ್ರಮ ಪ್ರಕರಣದಲ್ಲಿ ಆರ್‌ ಅಶೋಕ್‌ಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇದೊಂದು ರಾಜಕೀಯ ಪ್ರೇರಿತ ಎಫ್‌ಐಆರ್‌ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಬಗರ್ ಹುಕುಂ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅನರ್ಹರಿಗೆ ಜಮೀನು ಹಂಚಿಕೆ ಮಾಡಿದ್ದರು ಎಂದು 2018 ರಲ್ಲಿ ಕಾಂಗ್ರೆಸ್‌ ಸರ್ಕಾರ ಆರೋಪಿಸಿತ್ತು. ನಂತರ ಎಸಿಬಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Music Mailari: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮ್ಯೂಸಿಕ್‌ ಮೈಲಾರಿ ಮೇಲೆ ಕೇಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮೈಲಾರಿ ಮೇಲೆ ಕೇಸ್

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

Loading...