ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Bengaluru Traffic: ಬೆಂಗಳೂರಲ್ಲಿ ‌ಇನ್ನು ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್‌ ಬೀಳಬಹುದು!

ಇನ್ನು ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್‌ ಬೀಳಬಹುದು!

ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್‌ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.

Makar Sankranti 2026: ಈ ವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕಾ ಅಥವಾ 15ಕ್ಕಾ? ಉತ್ತರ ಇಲ್ಲಿದೆ

ಈ ವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕಾ ಅಥವಾ 15ಕ್ಕಾ? ಉತ್ತರ ಇಲ್ಲಿದೆ

ಮಕರ ಸಂಕ್ರಾಂತಿಯ ಶುಭ ಸಮಯ ಜನವರಿ 15ರಂದು ಸೂರ್ಯೋದಯದ ನಂತರ ಇರುತ್ತದೆ. ನಿರ್ಣಯ ಸಿಂಧು ಪ್ರಕಾರ ಈ ಬಾರಿ ಮಕರ ಸಂಕ್ರಾಂತಿಯ ಶುಭ ಸಮಯ ಜನವರಿ 15 ರಂದು. ಏಕೆಂದರೆ ಸೂರ್ಯ ಹಿಂದಿನ ಮಧ್ಯಾಹ್ನ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಆದ್ದರಿಂದ, ಜನವರಿ 15 ರ ಗುರುವಾರದಂದು ಮಕರ ಸಂಕ್ರಾಂತಿಯನ್ನು ಆಚರಿಸುವುದು ಶಾಸ್ತ್ರಗಳ ಪ್ರಕಾರ ಸರಿಯಾದುದು.

Bengaluru News: ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ.

Self Harming: ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Lakkundi Gold Treasure: ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ರಿತ್ತಿ ಕುಟುಂಬದ ಸದಸ್ಯರಿಗೆ, ನಿಧಿ ಪತ್ತೆಯಾದ ಬಳಿಕ ಆ ಜಾಗದಲ್ಲಿ ಅನಾಹುತಗಳು ಸಂಭವಿಸುವ ಭಯ ಕಾಡುತ್ತಿದೆ. “ಆ ಜಾಗದಿಂದ ದೊಡ್ಡ ಸರ್ಪ ಎದ್ದಿದೆ. ಒಂದಲ್ಲ ಒಂದು ದಿನ ಕಚ್ಚಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನಮಗೆ ಒಬ್ಬನೇ ಮಗ ಇದ್ದಾನೆ. ಅವನ ಭವಿಷ್ಯ ನಮಗೆ ಮುಖ್ಯ. ಹೀಗಾಗಿ ಆ ಜಾಗ ನಮಗೆ ಬೇಡ” ಎಂದು ಕುಟುಂಬಸ್ಥರು ಹೇಳಿದ್ದಾರೆ.

GBA Elections: ಕೊನೆಗೂ ಜಿಬಿಎ ಚುನಾವಣೆಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಸುಪ್ರೀಂ ಕೋರ್ಟ್‌

ಕೊನೆಗೂ ಜಿಬಿಎ ಚುನಾವಣೆಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಸುಪ್ರೀಂ ಕೋರ್ಟ್‌

ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಅಡಿಯಲ್ಲಿ ರಚನೆಯಾಗಲಿರುವ ಐದು ಮಹಾನಗರ ಪಾಲಿಕೆಗಳ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಅದರ ಅಂತಿಮ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 2026ರ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಿದೆ. ಇದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡಲಾದ ಕೊನೆಯ ಅವಕಾಶವಾಗಿದೆ ಎಂದು ಕೋರ್ಟ್ ತಿಳಿಸಿದೆ.

Lalbagh Flower Show: ನಾಳೆಯಿಂದ ಲಾಲ್​​ಬಾಗ್​ನಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋ: ಈ ಬಾರಿ ʼತೇಜಸ್ವಿ ವಿಸ್ಮಯʼ! ಟಿಕೆಟ್​ ದರವೆಷ್ಟು?

ನಾಳೆಯಿಂದ ಲಾಲ್​​ಬಾಗ್​ನಲ್ಲಿ ʼತೇಜಸ್ವಿʼ ಫ್ಲವರ್ ಶೋ! ಟಿಕೆಟ್​ ದರವೆಷ್ಟು?

ತೋಟಗಾರಿಕೆ ಇಲಾಖೆಯಿಂದ ಆಯೋಜಿಸುತ್ತಿರುವ 219ನೇ ಪ್ರದರ್ಶನ ಇದಾಗಿದೆ. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ 'ತೇಜಸ್ವಿ ವಿಸ್ಮಯ' ವಿಷಯವನ್ನಾಧರಿಸಿದ ಈ ಪ್ರದರ್ಶನದಲ್ಲಿ ಗಾಜಿನ ಮನೆಯಲ್ಲಿ ಪೂರ್ಣಚಂದ್ರ ತೇಜಸ್ವಿಯವರ ನೆಚ್ಚಿನ ಕಾಡನ್ನು ನಿರ್ಮಿಸಲಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಹತ್ತು-ಹಲವು ಆಕರ್ಷಣೆಗಳಿದ್ದು, ಒಟ್ಟಾರೆ 3 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡಲಾಗುತ್ತಿದೆ.

Mallikarjun Kharge: ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ: ಮೋದಿ ಸೋಮನಾಥ ದೇಗುಲ ಭೇಟಿಗೆ ಖರ್ಗೆ ವ್ಯಂಗ್ಯ

ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ: ಮೋದಿಗೆ ಖರ್ಗೆ ವ್ಯಂಗ್ಯ

ಸೋಮನಾಥ ದೇವಸ್ಥಾನಕ್ಕೆ ಸಾವಿರ ವರ್ಷ ಆಯ್ತು ಎಂದು ಈಗ ಮೋದಿಗೆ ಆ ದೇವಾಲಯ ನೆನಪಾಗಿದೆ. ಈ ಮುಂಚೆ ಏಕೆ ಈ ದೇವಸ್ಥಾನ ನೆನಪಾಗಲಿಲ್ಲ? ಮುಂಬರುವ ಹಲವು ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಮೋದಿ ಈ ರೀತಿ ಮಾಡುತ್ತಿದ್ದಾರೆ. ದೇವರು ನಿಮ್ಮ ಕೆಲಸಗಳಿಂದ ಪ್ರಸನ್ನವಾಗುತ್ತಾನೆಯೇ ಹೊರತು ಗುಡಿಗೆ ಹೋಗಿ ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ ಎಂದು ಖರ್ಗೆ ಹೇಳಿದ್ದಾರೆ.

Bangladesh Violence: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ಹತ್ಯೆಗಳ ಸರಣಿ; ಗಾಯಕ, ಆಟೋ ಚಾಲಕನ ಕೊಲೆ

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ಹತ್ಯೆಗಳ ಸರಣಿ; ಗಾಯಕ, ಆಟೋ ಚಾಲಕನ ಕೊಲೆ

ಫೆಬ್ರವರಿ 12ರಂದು ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದ ತೀವ್ರಗಾಮಿ ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಸಾಮಾನ್ಯವಾಗಿದೆ. ಮೊದಲನೆಯದಾಗಿ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ 27 ವರ್ಷದ ಯುವಕ ದೀಪು ಚಂದ್ರ ದಾಸ್ ಅವರನ್ನು ಥಳಿಸಿ ಕೊಲ್ಲಲಾಗಿತ್ತು.

Mangaluru Lit Fest: ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಗೆ ಯಶಸ್ವಿ ಸಮಾರೋಪ: ಕಿಕ್ಕಿರಿದು ತುಂಬಿದ ಗೋಷ್ಠಿಗಳು, ಯುವಪೀಳಿಗೆ ಭಾಗಿ

ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಗೆ ಯಶಸ್ವಿ ಸಮಾರೋಪ: ಯುವಪೀಳಿಗೆ ಭಾಗಿ

ಎರಡು ದಿನಗಳಲ್ಲಿ ಸಾವಿರಾರು ಜನರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಾಹಿತ್ಯ ಆಸಕ್ತರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಯುವಕ ಯುವತಿಯರು ಎರಡು ದಿನಗಳು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ಬಾಗವಹಿಸಿ ಸಂಭ್ರಮಿಸಿದ್ದು ಯುವ ಜನತೆಗೆ ಇನ್ನೂ ಪುಸ್ತಕದ ಅಭಿರುಚಿ ಕಡಿಮೆಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಂತಿತ್ತು. ಹಲವು ಪುಸ್ತಕದ ಮಳಿಗಗೆಳು, ಲೇಖಕರ ಜೊತೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧ ಸಮಯಪಾಲನೆಯಿಂದ ಕಾರ್ಯಕ್ರಮ ನೆರವೇರಿತು.

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌, ಟಿಕೆಟ್‌ ದರ ಏರಿಕೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌, ಟಿಕೆಟ್‌ ದರ ಏರಿಕೆ

2025ರ ಫೆಬ್ರವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ದರಗಳನ್ನು ಭಾರಿ ಪ್ರಮಾಣದಲ್ಲಿ ಪರಿಷ್ಕರಿಸಿತ್ತು. ಕೆಲ ಮಾರ್ಗಗಳಲ್ಲಿ ಶೇ.71ರಷ್ಟು ದರ ಹೆಚ್ಚಿಸಿ ಒಂದು ವರ್ಷ ಇನ್ನೇನು ಕಳೆಯುತ್ತಿದೆ. ಈ ಹೊತ್ತಲ್ಲಿ ಬಿಎಂಆರ್​​ಸಿಎಲ್​​ ಮತ್ತೊಂದು ಶಾಕ್​​ ಕೊಡಲು ಮುಂದಾಗಿದೆ. ಈಗಾಗಲೇ ಬೆಂಗಳೂರಿನ ಮೆಟ್ರೋ ದರಗಳು ದುಬಾರಿ ಎನಿಸಿಕೊಂಡಿವೆ.

Sirsi News: ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್ ಜನ ಸಮಾವೇಶ

ಬೇಡ್ತಿ, ಅಘನಾಶಿನಿ ಯೋಜನೆ ವಿರೋಧಿಸಿ ಬೃಹತ್‌ ಜನ ಸಮಾವೇಶವು ಶಿರಸಿಯಲ್ಲಿ ಭಾನುವಾರ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀಗಳು, ಸೋಂದೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾಕಳಂಕ ಭಟ್ಟಾಚಾರ್ಯ ಸ್ವಾಮೀಜಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಂಕಾಳ ವೈದ್ಯ ಮೊದಲಾದವರು ಯೋಜನೆಗಳನ್ನು ವಿರೋಧಿಸಿ ಮಾತನಾಡಿದರು.

Iran protests: ಇರಾನ್‌ನಲ್ಲಿ ವ್ಯಾಪಕ ದಂಗೆ, ಹೆಣಗಳ ರಾಶಿಯಿಂದ ತುಂಬಿಹೋದ ಆಸ್ಪತ್ರೆಗಳು

ಇರಾನ್‌ನಲ್ಲಿ ವ್ಯಾಪಕ ದಂಗೆ, ಹೆಣಗಳ ರಾಶಿಯಿಂದ ತುಂಬಿಹೋದ ಆಸ್ಪತ್ರೆಗಳು

ಇರಾನ್‌ ಸರ್ಕಾರ ಜನರ ಸಾವಿನ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಮಾನವ ಹಕ್ಕು ಸಂಸ್ಥೆಯೊಂದರ ಪ್ರಕಾರ 116 ಜನ 14 ದಿನಗಳ ಹಿಂಸೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಕೆಲವು ವರದಿಗಳ ಪ್ರಕಾರ ಕಳೆದ 2 ದಿನದಲ್ಲಿ 2000 ಜನರು ಬಲಿಯಾಗಿದ್ದಾರೆ ಎಂದು ಇಸ್ರೇಲ್‌ನ ‘ಜೆರುಸಲೇಂ ಪೋಸ್ಟ್‌’ ವರದಿ ಮಾಡಿದೆ. ಭದ್ರತಾ ಪಡೆಗಳ ಹಿಂಸಾತ್ಮಕ ಕಾರ್ಯಾಚರಣೆ ಕಾರಣ ಟೆಹ್ರಾನ್ ಸೇರಿದಂತೆ ಹಲವಾರು ನಗರಗಳ ಆಸ್ಪತ್ರೆಗಳು ಶವಗಳಿಂದ ತುಂಬಿಹೋಗಿವೆ.

Question paper leak: ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ನೀಡಿದ್ದರು. ಪೊಲೀಸರ ತನಿಖೆ ವೇಳೆ ಪ್ರಶ್ನೆಪತ್ರಿಕೆ ಲೀಕ್ ಮಾಡಿರುವ ದೊಡ್ಡ ಜಾಲ ಬಯಲಾಗಿದೆ.

Cyber Crime: AI ಹುಡುಗಿ ನಂಬಿ ಬೆತ್ತಲಾದ ಯುವಕ, 1.5 ಲಕ್ಷ ರೂ. ಮಂಗಮಾಯ

AI ಹುಡುಗಿ ನಂಬಿ ಬೆತ್ತಲಾದ ಯುವಕ, 1.5 ಲಕ್ಷ ರೂ. ಮಂಗಮಾಯ

ಡೇಟಿಂಗ್ ಆ್ಯಪ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿದ ಕಿಡಿಗೇಡಿಗಳು, ಯುವಕನಿಗೆ ವಿಡಿಯೋ ಕಾಲ್ ಮಾಡಿದ್ದಾರೆ. ಬೆತ್ತಲೆಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿ ಒಂದೂವರೆ ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಈಜಿಪುರದಲ್ಲಿ ವಾಸವಾಗಿರುವ ಯುವಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಎಐ ಮೂಲಕ ಯುವತಿಯ ಪ್ರೊಫೈಲ್ ಸೃಷ್ಟಿಸಿದ್ದು, ಎಐ ಯುವತಿಯೇ ಬೆತ್ತಲೆಯಾಗಿದ್ದಾಳೆ ಎಂಬುದು ಗೊತ್ತಾಗಿದೆ

Pakistan Drones: ಭಾರತದೊಳಗೆ ನುಗ್ಗಿದ ಪಾಕ್‌ ಡ್ರೋನ್‌ಗಳು, ಹೊಡೆದುರುಳಿಸಿದ ಸೇನೆ

ಭಾರತದೊಳಗೆ ನುಗ್ಗಿದ ಪಾಕ್‌ ಡ್ರೋನ್‌ಗಳು, ಹೊಡೆದುರುಳಿಸಿದ ಸೇನೆ

ಪಾಕಿಸ್ತಾನವು ಭಾರತೀಯ ಭೂಪ್ರದೇಶದ ಮೇಲೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಬೀಳಿಸಲು ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸಲು ಡ್ರೋನ್‌ಗಳನ್ನು ಬಳಸುತ್ತಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದು ಹಾಕಿತ್ತು. ನಿನ್ನೆ ಒಂದೇ ದಿನದಲ್ಲಿ ಕನಿಷ್ಠ ಐದು ಪಾಕಿಸ್ತಾನಿ ಡ್ರೋನ್ ಆಕ್ರಮಣಗಳು ವರದಿಯಾಗಿವೆ.

Road Accident: ಬೆಂಗಳೂರಿನಲ್ಲಿ ಕಾರು ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ

ಬೆಂಗಳೂರಿನಲ್ಲಿ ಕಾರು ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ

ತಡರಾತ್ರಿ ಐವರು ಕ್ಯಾಬ್‌ನಲ್ಲಿ ಹೊಸಕೆರೆಹಳ್ಳಿಯಿಂದ ತುಮಕೂರು ರಸ್ತೆ ಕಡೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಸೋಂಪುರ ಸಮೀಪ ರಸ್ತೆಯ ಉಬ್ಬುಗಳನ್ನು ಎಗರಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕ್ಯಾಬ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಮಣ್ಣಿನ ಗುಡ್ಡೆಯ ಮೇಲೆ ಉರುಳಿ ಬಿದ್ದಿದೆ. ತುಮಕೂರು ಜಿಲ್ಲೆ ಮಧುಗಿರಿ ಮೂಲದ ಕ್ಯಾಬ್ ಚಾಲಕ ದೇವರಾಜ್ (32) ಹಾಗೂ ಅಶೋಕ (35) ಮೃತರು.

Basangouda Patil Yatnal: ಮಾನಹಾನಿ ಪ್ರಕರಣ: ಯತ್ನಾಳ್‌ ಮೇಲೆ ಜಾಮೀನುರಹಿತ ಬಂಧನ ವಾರಂಟ್‌

ಮಾನಹಾನಿ ಪ್ರಕರಣ: ಯತ್ನಾಳ್‌ ಮೇಲೆ ಜಾಮೀನುರಹಿತ ಬಂಧನ ವಾರಂಟ್‌

ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಖಾಸಗಿ ದೂರು ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯನ್ನು ಜ.20ಕ್ಕೆ ಮುಂದೂಡಿದೆ.

Lakkundi gold treasure: ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ! ಪ್ರಾಮಾಣಿಕತೆಯೇ ಮುಳುವಾಯ್ತಾ?

ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ!

ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದೆ.

Kodi Mutt Swamiji: ಸಿಎಂ ಕುರ್ಚಿ, ಇಬ್ಬರು ಮಹಾ ವ್ಯಕ್ತಿಗಳ ಸಾವು ಬಗ್ಗೆ ಕೋಡಿ ಮಠ ಸ್ವಾಮೀಜಿ ಕುತೂಹಲಕಾರಿ ಭವಿಷ್ಯವಾಣಿ

ಸಿಎಂ ಕುರ್ಚಿ, ಇಬ್ಬರು ಮಹನೀಯರ ಸಾವು: ಕೋಡಿ ಶ್ರೀ ಭವಿಷ್ಯವಾಣಿ ಹೀಗಿದೆ!

ಹೊಸ ವರ್ಷದ ಆರಂಭದಲ್ಲೇ ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬೀದರ್​ನಲ್ಲಿ ಮಾತಾಡಿದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸದ್ಯದ ರಾಜ್ಯ ರಾಜಕೀಯದ ಪರಿಸ್ಥಿತಿ ನೋಡಿದರೆ ಬದಲಾವಣೆ ಕಷ್ಟ. ಈ ಬಾರಿ ಕೂಡ ಸಿಎಂ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸ್ತಾರೆ ಎಂದಿದ್ದಾರೆ.

CM Siddaramaiah: ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ, ಮರಳಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು 19 ವಿಧೇಯಕಗಳಿಗೆ ಅಂಕಿತ ಹಾಕಿದ್ದರು. ಆದರೆ ದ್ವೇಷ ಭಾಷಣ ವಿಧೇಯಕಕ್ಕೆ ಯಾವುದೇ ವಿವರಣೆ ನೀಡದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

Body Found: ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ಹಾಗೂ ಮಗಳು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Namma Metro Pink Line: ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ

ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ

ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಈ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಇವೆ. ಪರೀಕ್ಷಾರ್ಥ ಸಂಚಾರ ಮುಗಿದ ಬಳಿಕ ಸುರಕ್ಷತಾ ಪ್ರಮಾಣಪತ್ರ ಲಭಿಸಿದ ಕೂಡಲೇ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಲಿದೆ

Road Accident: ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಇತ್ತೀಚೆಗೆ ಹಿರಿಯೂರು ಬಳಿಯೇ ಹೆದ್ದಾರಿಯಲ್ಲಿ ಕಂಟೈನರ್‌ ಡಿಕ್ಕಿಯಾಗಿ ಖಾಸಗಿ ಸ್ಲೀಪರ್‌ ಬಸ್‌ ಹೊತ್ತಿ ಉರಿದು ಐದು ಮಂದಿ ಸಜೀವ ದಹನಗೊಂಡಿದ್ದರು. ಈ ಘಟನೆಯ ಕಹಿನೆನಪು ಮಾಸುವ ಮುನ್ನವೇ ಇಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸಿವೆ. ಈ ಭಾಗದಲ್ಲಿ ಮುಂಜಾನೆ ಸಾಕಷ್ಟು ಮಂಜು ಕವಿದ ವಾತಾವರಣವಿದ್ದು, ತಡರಾತ್ರಿ ಡ್ರೈವ್‌ ಮಾಡುವ ವಾಹನ ಚಾಲಕರು ಹೆಚ್ಚು ಎಚ್ಚರ ವಹಿಸಲು ಸೂಚಿಸಿದೆ.

Loading...