ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
G Parameshwara: ನಾನು ಕೂಡ ರೇಸ್‌ನಲ್ಲಿರ್ತೀನಿ: ಸಿಎಂ ರೇಸ್‌ಗೆ ಪರಮೇಶ್ವರ್‌ ಎಂಟ್ರಿ

ನಾನು ಕೂಡ ರೇಸ್‌ನಲ್ಲಿರ್ತೀನಿ: ಸಿಎಂ ರೇಸ್‌ಗೆ ಪರಮೇಶ್ವರ್‌ ಎಂಟ್ರಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿರುವ ಒಳಗುದಿಗಳಿಗೆ ಸಂಬಂಧಿಸಿದಂತೆ, ಹಲವರು ಹಲವು ರೀತಿಯ ಹೇಳಿಕೆ ನೀಡಿದ್ದಾರೆ. ಒಂದೆಡೆ ಸ್ವತಃ ಹೈಕಮಾಂಡ್‌ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಕುರಿತು ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದರೆ, ಇನ್ನೊಂದೆಡೆ ಗೃಹ ಸಚಿವ ಜಿ ಪರಮೇಶ್ವರ (G Parameshwara) ಅವರು, ನಾನು ಕೂಡ ಯಾವಾಗ್ಲು ಸಿಎಂ ರೇಸ್‌ನಲ್ಲಿರ್ತೀನಿ ಎಂದಿದ್ದಾರೆ.

Mallikarjun Kharge: ನಾನೇನೂ ಹೇಳೊಲ್ಲ: ಸಿಎಂ ಗೊಂದಲ ಬಗ್ಗೆ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ನಾನೇನೂ ಹೇಳೊಲ್ಲ: ಸಿಎಂ ಗೊಂದಲ ಬಗ್ಗೆ ಮೌನ ಮುರಿದ ಖರ್ಗೆ

Karnataka Congress: ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದರು. ಇಂದು ಖರ್ಗೆ ಅವರು ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

CM Siddaramaiah: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ತಂದೆ ಪರ ಯತೀಂದ್ರ ಮತ್ತೆ ಬ್ಯಾಟಿಂಗ್

ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ತಂದೆ ಪರ ಯತೀಂದ್ರ ಮತ್ತೆ ಬ್ಯಾಟಿಂಗ್

Yathindra Siddaramaiah: ​ಸಿದ್ದರಾಮಯ್ಯನವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಮತ್ತು ದಲಿತರ (ಅಹಿಂದ) ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಈ ಕಾರಣಕ್ಕಾಗಿಯೇ, ಅಹಿಂದ ಸಮುದಾಯ ಸಂಪೂರ್ಣವಾಗಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದೆ. ​ಈ ಬಲವಾದ ಬೆಂಬಲದಿಂದಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ತಮ್ಮ ಸಂಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Bengaluru Robbery Case: ಬೆಂಗಳೂರು ದರೋಡೆ ಪ್ರಕರಣದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ಹಣ ವಶ

ಬೆಂಗಳೂರು ದರೋಡೆ ಎಸಗಿದ ಬಹುತೇಕ ಎಲ್ಲ ಆರೋಪಿಗಳು ಸೆರೆ, 6.70 ಕೋಟಿ ರೂ. ವಶ

Bengaluru Robbery Case: ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

Kempegowda International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಮಾನ್ಯತೆಯ ಗರಿ, ಏನಿದು ಎಸಿಐ-3?

ಬೆಂಗಳೂರು ಏರ್‌ಪೋರ್ಟ್‌ಗೆ ಮತ್ತೊಂದು ಅಂತಾರಾಷ್ಟ್ರೀಯ ಗರಿ, ಏನಿದು ಎಸಿಐ-3?

Bengaluru: ಕೆಐಎಎಲ್‌, ಈ ಹಿಂದೆ ಎಸಿಐ-1 ಮತ್ತು 2ನೇ ಹಂತದ ಮಾನ್ಯತೆ ಪಡೆದಿತ್ತು. ಎಸಿಐ, ಪ್ರಯಾಣಿಕರ ಸರ್ವೆ ಮೂಲಕ ಈಗ ಕೆಐಎಎಲ್‌ಗೆ ಎಸಿಐನ 3ನೇ ಹಂತದ ಮಾನ್ಯತೆ ನೀಡಿದೆ. ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮ ಮತ್ತು ಅವುಗಳಿಂದ ದೊರೆಯುವ ಫಲಿತಾಂಶವನ್ನು ಎಸಿಐ ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯ ಆಧರಿಸಿ ಈ ಮಾನ್ಯತೆ ನೀಡಲಾಗಿದೆ.

Self Harming: ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡದಲ್ಲಿ ದಾರುಣ ಘಟನೆ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Dharawada news: ಸಾಲದ ಬಾಧೆಯಿಂದ ನೊಂದಿದ್ದ ನಾರಾಯಣ ಶಿಂಧೆ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ಕೆಲಸಕ್ಕೆ ತೆರಳಿದ ತಾಯಿ ಬದುಕಿಕೊಂಡಿದ್ದಾಳೆ. ಶಾಲೆಗೆ ಹೊರಟು ಸಮವಸ್ತ್ರದಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆಯೇ ಮೊದಲು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಹಾರಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Labour Codes: ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ರಜೆ, ಪಿಎಫ್-‌ ಇಎಸ್‌ಐ ಕಡ್ಡಾಯ ಸೇರಿ 4 ಹೊಸ ಕಾರ್ಮಿಕ ಸಂಹಿತೆ ಜಾರಿ

ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ರಜೆ, ಪಿಎಫ್-‌ ಇಎಸ್‌ಐ ಕಡ್ಡಾಯ

Labour Law: ಎಲ್ಲ ಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು. ಯಾವುದೇ ಉದ್ಯೋಗವಾದರೂ ಮಹಿಳೆಯರಿಗೆ ರಾತ್ರಿಪಾಳಿ ಕೆಲಸಗಳಿಗೆ ಅವಕಾಶ ಹಾಗೂ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. 40 ವರ್ಷ ಮೇಲ್ಪಟ್ಟ ವಯೋಮಾನದ ಎಲ್ಲ ಕೆಲಸಗಾರರಿಗೆ ವಾರ್ಷಿಕವಾಗಿ ಉಚಿತ ಆರೋಗ್ಯ ತಪಾಸಣೆ ಮಾಡಿಸಬೇಕು ಎನ್ನುವುದು ಹೊಸ ಕಾರ್ಮಿಕ ಸಂಹಿತೆಗಳ ಪ್ರಮುಖ ಸಂಗತಿಗಳಾಗಿವೆ.

Tejas Crash: ದುಬೈನಲ್ಲಿ ಪತನಗೊಂಡ ತೇಜಸ್‌ ವಿಮಾನದಲ್ಲಿದ್ದ ಪೈಲಟ್‌ ಯಾರು ಗೊತ್ತೆ?

ದುಬೈನಲ್ಲಿ ಪತನಗೊಂಡ ತೇಜಸ್‌ ವಿಮಾನದಲ್ಲಿದ್ದ ಪೈಲಟ್‌ ಯಾರು ಗೊತ್ತೆ?

Tejas Crash in Dubai: 2016ರಲ್ಲಿ IAFಗೆ ತೇಜಸ್‌ ವಿಮಾನವನ್ನು ಸೇರಿಸಿದಾಗಿನಿಂದ ಇದು ಎರಡನೇ ಅಪಘಾತವಾಗಿದೆ. 150ಕ್ಕೂ ಹೆಚ್ಚು ದೇಶಗಳು ತಮ್ಮ ಏರೋಸ್ಪೇಸ್ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತಿರುವ ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾದ ದುಬೈ ಏರ್ ಶೋನಲ್ಲಿ ಏರೋಬ್ಯಾಟಿಕ್ ಪ್ರದರ್ಶನದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಂತಿಮ ದೃಶ್ಯಗಳಲ್ಲಿ ತೇಜಸ್ ಯುದ್ಧವಿಮಾನ ಇದ್ದಕ್ಕಿದ್ದಂತೆ ಮೂತಿ ಮುಂದಾಗಿ ನೆಲಕ್ಕಪ್ಪಳಿಸಿ ಬೆಂಕಿಯ ಉಂಡೆಯಾಗಿ ಸ್ಫೋಟಗೊಂಡಿರುವುದು ಕಂಡುಬಂದಿದೆ.

Davanagere Crime News: ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಬಂಧನ

ಕೊಲೆ ಯತ್ನ ಆರೋಪಿಯ ಅಡಗಿಸಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಸೆರೆ

Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ‌ ಖಾಲೀದ್ ಫೈಲ್ವಾನ್‌ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.

HD Devegowda: ಜೆಡಿಎಸ್‌ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಪುನರಾಯ್ಕೆ

ಜೆಡಿಎಸ್‌ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ

ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ದೇವೇಗೌಡರು, 1999 ರಲ್ಲಿ ಜನತಾದಳ ಒಡೆದು ಹೋದಾಗ ಯಾರೂ ಅಧ್ಯಕ್ಷರಾಗೋಕೆ ಮುಂದೆ ಬರಲಿಲ್ಲ. ಕೊನೆಗೆ ನನಗೆ ಜವಾಬ್ದಾರಿ ಕೊಟ್ಟರು ಎಂದು ಇತಿಹಾಸ ನೆನಪು ಮಾಡಿಕೊಂಡರು. 2023 ರಲ್ಲಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿದರು. ಆದರೆ ಕೊನೆಗೆ ಗ್ಯಾರಂಟಿ ಯೋಜನೆ ಅಂತ ತಂದು ನಮಗೆ ಹಿನ್ನಡೆ ಆಯ್ತು ಅಂತ 2023ರ ಚುನಾವಣೆ ಬಗ್ಗೆ ನೆನಪು ಮಾಡಿಕೊಂಡರು.

Bengaluru Crime News: ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

ವಿಧಾನಸೌಧದ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್‌ನ 11 ಯುವಕರು ಆರೆಸ್ಟ್

Nepali Gang Arrest: ಯುವತಿಯೊಬ್ಬಳ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ವಿಧಾನಸೌಧ ಲೈಟಿಂಗ್ಸ್ ನೋಡಲು ಬಂದಿದ್ದ ನೇಪಾಳ ಮೂಲದ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡು ಗಲಾಟೆ ಮಾಡಿದ್ದರು. ನೇಪಾಳಿ‌ ಯುವಕರ ಗಲಾಟೆ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೇ ಅತಿ ಹೆಚ್ಚು ಭದ್ರತೆ ಇರುವಂತಹ ವಿಧಾನಸೌಧ ಮುಂಭಾಗದಲ್ಲಿ ಇಂತಹ ಘಟನೆ ನಡೆದಿದ್ದಕ್ಕೆ ಪೊಲೀಸ್ ಇಲಾಖೆಗೆ ತಲೆ ಬಿಸಿ ತಂದೊಡ್ಡಿತ್ತು.

DK Shivakumar: ಪರಪ್ಪನ ಅಗ್ರಹಾರ ಜೈಲಿಗೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದೆ ಈ ಭೇಟಿಯ ಹಿಂದೆ?

ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದು ರಹಸ್ಯ?

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

Bengaluru news: ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

Death by Flex: ಜರ್ಮನಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಸ್ನೇಹಿತನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಯುವಕಮನ್ನು ಅಕ್ರಮ ಫ್ಲೆಕ್ಸ್‌ ಬಲಿ ಪಡೆದುಕೊಂಡಿದೆ. ನಿಯಮ ಮೀರಿ ರಾರಾಜಿಸುತ್ತಿರುವ ಫ್ಲೆಕ್ಸ್-‌ ಬ್ಯಾನರ್‌ಗಳ ತೆರವಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

DK Shivakumar: ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಆಲ್ ದ ಬೆಸ್ಟ್; ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರಿಗೆ ಆಲ್ ದ ಬೆಸ್ಟ್, ಹೈಕಮಾಂಡ್ ಮಾತಿಗೆ ಬದ್ಧ: ಡಿಕೆಶಿ

ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

CM Siddaramaiah: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ʼಬೆಸ್ಟ್‌ ಆಫ್‌ ಲಕ್‌ʼ ಎಂದ ಡಿಕೆ ಶಿವಕುಮಾರ್

ಮುಂದಿನ 2.5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; ಬೆಸ್ಟ್‌ ಆಫ್‌ ಲಕ್‌: ಡಿಕೆಶಿ

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಹೈಕಮಾಂಡ್‌ ಮಾತನಾಡಿಲ್ಲ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 'ನಾವು ಸಿದ್ದರಾಮಯ್ಯ ಅವರ ಜೊತೆಯಾಗಿ ಕೆಲಸ ಮಾಡುತ್ತೇವೆʼ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Manikanta Rathod: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್‌ ಮಣಿಕಂಠ ರಾಠೋಡ್‌ ಬಂಧನ

Kalaburagi News: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಲೀಡರ್ ಮಣಿಕಂಠ ರಾಠೋಡ್‌ ಬಂಧನವಾಗಿದೆ. ನಾಟಿ ಔಷಧಿ ನೀಡುತ್ತಿದ್ದ ರಶೀದ್ ಮುತ್ಯಾ ಎಂಬಾತನನ್ನು ಬಂಧಿಸುವಂತೆ ಆಗ್ರಹಿಸಿ ಮಣಿಕಂಠ ರಾಠೋಡ್ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೊಲೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ.

Udupi news: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ

ಪಾಕಿಸ್ತಾನಕ್ಕೆ ಭಾರತ ನೌಕಾಪಡೆ ರಹಸ್ಯ ಗೂಢಚರ್ಯೆ, ಉಡುಪಿಯಲ್ಲಿ ಇಬ್ಬರ ಸೆರೆ

Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.

CM Siddaramaiah: ಮೆಕ್ಕೆ ಜೋಳ ರೈತರ ನೆರವಿಗೆ ಧಾವಿಸಿದ ಸಿಎಂ, ಎಥೆನಾಲ್‌ ತಯಾರಿಗೆ ಖರೀದಿ, ಆಮದು ನಿಯಂತ್ರಿಸಲು ಕೇಂದ್ರಕ್ಕೆ ಆಗ್ರಹ

ಮೆಕ್ಕೆ ಜೋಳ ರೈತರ ನೆರವಿಗೆ ಧಾವಿಸಿದ ಸಿಎಂ, ಆಮದು ನಿಯಂತ್ರಿಸಲು ಆಗ್ರಹ

ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ (Maize Price) ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 70 ಲಕ್ಷ ಮೆ. ಟನ್ ಮೆಕ್ಕೆ ಜೋಳವನ್ನು ಆಮದು ಮಾಡಿಕೊಳ್ಳಲಾಗಿದೆ. ನಮ್ಮ ದೇಶದಲ್ಲಿಯೇ ಉತ್ಪಾದನೆ ಹೆಚ್ಚಾಗಿರುವುದರಿಂದ ಆಮದು ಮೇಲೆ ನಿರ್ಬಂಧ ವಿಧಿಸಲು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಲಾಗಿದೆ ಎಂದಿದ್ದಾರೆ.

Bengaluru Robbery Case: ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Narayana Yaji Column: ಭೌಮಸ್ವರ್ಗದಲ್ಲಿ ಸೀತೆಯನ್ನು ಹುಡುಕುವ ಚಿಂತೆ

Narayana Yaji Column: ಭೌಮಸ್ವರ್ಗದಲ್ಲಿ ಸೀತೆಯನ್ನು ಹುಡುಕುವ ಚಿಂತೆ

ನಾರಾಯಣ ಯಾಜಿ ಅಂಕಣ: ಸುಂದರಕಾಂಡ ರಾಮಾಯಣದ ಬಹು ಸುಂದರ ಭಾಗ. ʼಸುಂದರʼ ಎಂಬುದು ಹನುಮಂತನನ್ನು ಉದ್ದೇಶಿಸಿದ ಪದ. ಭರತ ದ್ವೀಪಖಂಡದ ತುದಿಯಿಂದ ಹಾರಿ ನೂರು ಯೋಜನ ದೂರದ ಸಮುದ್ರವನ್ನು ದಾಟಿ ಸುವರ್ಣಲಂಕೆಯನ್ನು ಸೇರಿ ಅಲ್ಲಿ ಸೀತಾಮಾತೆಯನ್ನು ಹುಡುಕುವ ಆಂಜನೇಯನ ಬೆಕ್ಕಸ ಬೆರಗಾಗುವಂಥ ಸಾಹಸವನ್ನು ಕವಿ ವಾಲ್ಮೀಕಿಗಳು ಇಲ್ಲಿ ಸೊಗಸಾಗಿ ಬಣ್ಣಿಸಿದ್ದಾರೆ. ಸುಂದರಕಾಂಡದ ಈ ಭಾಗವನ್ನು ಲೇಖಕರು ಇಲ್ಲಿ ವಿಶ್ಲೇಷಿಸಿದ್ದಾರೆ.

Harish Kera Column: ಮಧ್ಯರಾತ್ರಿ ಚಂದ್ರ ತಳಿಯ ತುಂಬುತಿರುವುದು

Harish Kera Column: ಮಧ್ಯರಾತ್ರಿ ಚಂದ್ರ ತಳಿಯ ತುಂಬುತಿರುವುದು

‘ಮಾರ್ಗಶಿರ ಪುಷ್ಯ- ಹೇಮಂತ ಋತು/ ಹಿಮ ಸುರಿವ ಹಾದಿಯಲಿ ಬೆಳಗಾಯಿತು/ ಮಾಘ ಫಲ್ಗುಣ ಶಿಶಿರ ಋತು/ಕಂಬಳಿಯ ಹೊದ್ದರೂ ಮೈ ನಡುಗಿತು’ ಎಂದು ಬರೆಯುತ್ತಾರೆ ಪ್ರೇಮ ಕವಿ. ಋತುವೈಭವದಲ್ಲಿ ಚಳಿಗಾಲಕ್ಕೆ ಬೇರೆಯೇ ಸ್ಥಾನ. ವಸಂತ ಎಂದರೆ ಚೆಲುವು, ಚಿಗುರು, ವರ್ಷ ಎಂದರೆ ಮಳೆ, ಹಸಿರು ಎಂದೆಲ್ಲ ಹೇಳುವ ಕವಿಗಳು ಚಳಿಗಾಲಕ್ಕೆ ಬಂದಾಗ ಯಾಕೋ ತುಸು ಥಂಡಾ ಹೊಡೆಯುತ್ತಾರೆ.

Siddaramaiah Award: ಪತ್ರಕರ್ತೆಯರ ಸಂಘದ ಸಿಎಂ ಸಿದ್ದರಾಮಯ್ಯ ದತ್ತಿನಿಧಿ ಪ್ರಶಸ್ತಿಗೆ ಸುಶೀಲಾ ಸುಬ್ರಹ್ಮಣ್ಯ, ನೀಳಾ ಎಂ.ಎಚ್ ಆಯ್ಕೆ‌

ಸಿದ್ದರಾಮಯ್ಯ ಪ್ರಶಸ್ತಿಗೆ ಸುಶೀಲಾ ಸುಬ್ರಹ್ಮಣ್ಯ, ನೀಳಾ ಎಂ.ಎಚ್ ಆಯ್ಕೆ‌

Siddaramaiah Award: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ತಮ್ಮದೇ ಹೆಸರಿನಲ್ಲಿ ಪ್ರಶಸ್ತಿ ಪ್ರಕಟಿಸಲು ದತ್ತಿನಿಧಿ ನೀಡಿದ್ದು, 2024-25ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಸಂಘ ಈ ಇಬ್ಬರು ಹಿರಿಯ ಪತ್ರಕರ್ತೆಯರನ್ನು ಆಯ್ಕೆ ಮಾಡಿದೆ. ʼಸಿದ್ದರಾಮಯ್ಯ ಪ್ರಶಸ್ತಿʼ ಪ್ರದಾನ ಸಮಾರಂಭ ನವೆಂಬರ್‌ 28ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ʼಕೊಂಡಜ್ಜಿ ಬಸಪ್ಪʼ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.

Purushottama Bilimale: ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತು ಪುರುಷೋತ್ತಮ ಬಿಳಿಮಲೆ ಹೇಳಿಕೆ, ಪ್ರತಿರೋಧದ ಬಳಿಕ ಕ್ಷಮೆಯಾಚನೆ

ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತು ಬಿಳಿಮಲೆ ಹೇಳಿಕೆ, ಕ್ಷಮೆಯಾಚನೆ

Purushottama Bilimale: ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದರು. ನಂತರ ಕ್ಷಮೆ ಯಾಚಿಸಿದ್ದಾರೆ.

Belagavi News: 31 ಕೃಷ್ಣಮೃಗಗಳ ಸಾವಿಗೆ ಕಾರಣ ಪತ್ತೆ, ತಜ್ಞರ ತಂಡದಿಂದ ವರದಿ

31 ಕೃಷ್ಣಮೃಗಗಳ ಸಾವಿಗೆ ಕಾರಣ ಪತ್ತೆ, ತಜ್ಞರ ತಂಡದಿಂದ ವರದಿ

Belagavi Blackbucks death: ಸಾವು ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ತಜ್ಞ ಡಾ. ಚಂದ್ರಶೇಖರ್ ಅವರನ್ನು ತಕ್ಷಣ ಬೆಳಗಾವಿಗೆ ಕಳುಹಿಸಲಾಗಿತ್ತು. ಅವರು ಮೃಗಾಲಯದ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಂಯುಕ್ತ ತನಿಖೆಯ ಬಳಿಕ, HS ಎಂಬ ತೀವ್ರವಾಗಿ ಹರಡುವ ಬ್ಯಾಕ್ಟೀರಿಯಾ ಸೋಂಕು ಕೃಷ್ಣ ಮೃಗಗಳಲ್ಲಿ ವೇಗವಾಗಿ ವ್ಯಾಪಿಸಿರುವುದು ಸ್ಪಷ್ಟ ಎಂದು ಮಾಹಿತಿ ಬಿಡುಗಡೆ ಮಾಡಿದ್ದಾರೆ.

Loading...