ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
CS Shadakshari: ಇದೇ ವಾರದಲ್ಲಿ ಮುಖ್ಯಮಂತ್ರಿಗಳಿಗೆ ಒಪಿಎಸ್‌ ಸಮಿತಿ ವರದಿ ಸಲ್ಲಿಕೆ: ಸಿ.ಎಸ್. ಷಡಾಕ್ಷರಿ

ಇದೇ ವಾರ ಮುಖ್ಯಮಂತ್ರಿಗೆ ಒಪಿಎಸ್‌ ಸಮಿತಿ ವರದಿ: ಸಿ.ಎಸ್. ಷಡಾಕ್ಷರಿ

Old pension scheme: ಸಮಿತಿ ನೀಡಲಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಾಮರ್ಶಿಸಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಲಾಗಿದ್ದ ಘೋಷಣೆ ಹಾಗೂ ಸಂಘದ ಹಲವು ಕಾರ್ಯಕ್ರಮಗಳಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರಿ ನೌಕರರಿಗೆ ಈ ಹಿಂದಿನಂತೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರು ಜಾರಿಗೊಳಿಸುವಂತೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿನಂತಿಸಿದ್ದಾರೆ.

Bengaluru Crime News: ಕಮಿಷನರ್‌ ಕಚೇರಿ ಆವರಣದಲ್ಲೇ ಆರೋಪಿಯ ಕಾರಿನಿಂದ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

ಕಮಿಷನರ್‌ ಕಚೇರಿ ಆವರಣದಲ್ಲೇ 11 ಲಕ್ಷ ರೂ. ಎಗರಿಸಿದ ಪೊಲೀಸ್‌ ಸಿಬ್ಬಂದಿ!

Theft: ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ.

Murder Case: ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದು ನಿವೃತ್ತ ಬಿಎಂಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು

Bengaluru Crime News: ವೆಂಕಟೇಶ್ ಬಿಎಂಟಿಸಿ ಡ್ರೈವರ್ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಪತ್ನಿಗೆ ಸ್ಟ್ರೋಕ್ ಆಗಿ ವೀಲ್‌ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಆರೋಗ್ಯ ಸಮಸ್ಯೆ ಸೇರಿದಂತೆ ಸಣ್ಣ ಪುಟ್ಟ ವಿಚಾರಗಳಿಗೂ ಕೂಡ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳು ಜಗಳ ಮಾಡಿಕೊಳ್ಳುತ್ತಿದ್ದರು. ಜಗಳ ಉಲ್ಭಣಿಸಿ ಕೊಲೆಗೆ ಕಾರಣವಾಗಿದೆ.

BS Yediyurappa: ಆರ್‌ಎಸ್‌ಎಸ್‌, ಬಿಎಸ್‌ವೈ ವಿರುದ್ಧದ ಆರೋಪ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಆರ್‌ಎಸ್‌ಎಸ್‌, ಬಿಎಸ್‌ವೈ ವಿರುದ್ಧದ ಆರೋಪ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa) ಅವರು ಒಂದು ಮಾಧ್ಯಮ ಸಂಸ್ಥೆಗೆ 5 ಕೋಟಿ ರೂ. ಪಾವತಿಸಿದ್ದಾರೆ. ಭೂ ಸಂಬಂಧಿತ ವಿಷಯಗಳಲ್ಲಿ ಮತ್ತೊಂದು ಮಾಧ್ಯಮ ಸಂಸ್ಥೆಗೆ ಅಕ್ರಮವಾಗಿ ಹಣದ ನೆರವು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಆರ್‌ಎಸ್‌ಎಸ್‌ಗೆ ವಿವಿಧ ಕಾನೂನುಬಾಹಿರ ಅನುಕೂಲಗಳನ್ನು ನೀಡಿದೆ ಎಂದು ರಾಜ್ಯ ಸರ್ಕಾರಕ್ಕೆ ನೀಡಿರುವ ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

Lokayukta Raid: ಶಿಕ್ಷಣ ಇಲಾಖೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ರೈಡ್‌, ಭಾರಿ ಅವ್ಯವಹಾರ ಪತ್ತೆ

ಶಿಕ್ಷಣ ಇಲಾಖೆಯ 12 ಕಚೇರಿ ಮೇಲೆ ಲೋಕಾಯುಕ್ತ ರೈಡ್‌, ಭಾರಿ ಅವ್ಯವಹಾರ ಪತ್ತೆ

Lokayukta Raid: ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ್ ಆದೇಶದ ಮೇರೆಗೆ, ಬೆಂಗಳೂರಿನ ಜಂಟಿ ನಿರ್ದೇಶಕರ (ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Harish Kera Column: ಶ್ರೀರಾಮನ ಕೋವಿದಾರ, ನಮ್ಮೂರ ಮಂದಾರ

Harish Kera Column: ಶ್ರೀರಾಮನ ಕೋವಿದಾರ, ನಮ್ಮೂರ ಮಂದಾರ

ಬೇಸಿಗೆಯಲ್ಲಿ ಎಲೆಗಳನ್ನು ಕಳೆದುಕೊಂಡು ಬೋಳಾಗಿ ಹೂಗಳನ್ನು ಧರಿಸಿಕೊಂಡು ನಿಂತಾಗ ಹೂ ಮರವೇ ಆಗಿಬಿಡುತ್ತದೆ ಇದು. ಈ ಮರದ ಹೂಗಳದು- ಎಲ್ಲ ಹೂವುಗಳದೂ- ಒಂದು ಬಗೆಯ ಗಂಧ ವ್ರತ. ತಾನು ಉರಿಯುತ್ತ ಜಗತ್ತಿಗೆ ಪರಿಮಳ ನೀಡುವ ಅಗರಬತ್ತಿಯ ಕಾಯಕವನ್ನು ಕವಿ ಎಚ್‌ಎಸ್ ವೆಂಕಟೇಶಮೂರ್ತಿ ಒಂದು ಕವನದಲ್ಲಿ ‘ಗಂಧವ್ರತ’ ಎಂದು ಕರೆದಿದ್ದರು.

Sangeeth Sagar Death: ಸಿನಿಮಾ ಶೂಟಿಂಗ್‌ ವೇಳೆಯೇ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

ಸಿನಿಮಾ ಶೂಟಿಂಗ್‌ ವೇಳೆ ನಿರ್ದೇಶಕ ಸಂಗೀತ್‌ ಸಾಗರ್‌ಗೆ ಹೃದಯಾಘಾತ, ಸಾವು

Sandalwood Director Sangeeth Sagar:‌ ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು.

Indigo Flights: 200 ಇಂಡಿಗೋ ವಿಮಾನ ಹಾರಾಟ ರದ್ದು, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಕರ ಪರದಾಟ

200 ಇಂಡಿಗೋ ವಿಮಾನ ಹಾರಾಟ ರದ್ದು, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪರದಾಟ

Indigo flights cancelled: ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಇತ್ತೀಚೆಗೆ ಕಾರ್ಯಾಚರಣೆಯ ತೀವ್ರ ತೊಂದರೆಯನ್ನು ಎದುರಿಸುತ್ತಿದೆ. ವಿಮಾನ ವಿಳಂಬ ಮತ್ತು ಹಾರಾಟ ರದ್ದತಿಗಳು ದೇಶಾದ್ಯಂತ ವ್ಯಾಪಕವಾಗಿವೆ. ವಿಮಾನಯಾನದ ಸಮಯದ ಕಾರ್ಯಕ್ಷಮತೆ ಕೇವಲ 35 ಪ್ರತಿಶತಕ್ಕೆ ಕುಸಿದಿದೆ. ಮಂಗಳವಾರ 1,400 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ಬುಧವಾರ 200 ವಿಮಾನ ಹಾರಾಟ ರದ್ದುಗೊಂಡಿದೆ.

Naxals Encounter: 12 ನಕ್ಸಲರನ್ನು ಗುಂಡಿಕ್ಕಿ ಕೊಂದ ಭದ್ರತಾ ಪಡೆಗಳು, ಮೂವರು ಯೋಧರು ಹುತಾತ್ಮ

12 ನಕ್ಸಲರನ್ನು ಗುಂಡಿಕ್ಕಿ ಕೊಂದ ಭದ್ರತಾ ಪಡೆಗಳು, ಮೂವರು ಯೋಧರು ಹುತಾತ್ಮ

ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಮತ್ತು CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ – CRPFನ ಗಣ್ಯ ಘಟಕ) ಒಳಗೊಂಡ ಜಂಟಿ ತಂಡ ಎನ್​ಕೌಂಟರ್ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಎನ್‌ಕೌಂಟರ್ ನಡೆದ ಸ್ಥಳದಿಂದ ಇಲ್ಲಿಯವರೆಗೆ 12 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

Midday Meal: ಇನ್ನು ಮುಂದೆ ಪೂರ್ವ ಪ್ರಾಥಮಿಕ ಶಾಲೆ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು, ಹಾಲು

ಇನ್ನು ಮುಂದೆ ಪೂರ್ವ ಪ್ರಾಥಮಿಕ ಶಾಲೆ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು, ಹಾಲು

Midday meal scheme: ಪೂರ್ವ ಪ್ರಾಥಮಿಕ ತರಗತಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ ಆಗಿರಲಿಲ್ಲ. ಈಗ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಮೊಟ್ಟೆ, ಬಾಳೆಹಣ್ಣು ನೀಡುವ ಕಾರ್ಯಕ್ರಮವನ್ನು ಡಿಸೆಂಬರ್‌ 1ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Belagavi Assembly Session: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈಅಲರ್ಟ್‌

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈಅಲರ್ಟ್‌

Belagavi suvarna vidhana soudha: ಡಿಸೆಂಬರ್‌ 8ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನಸಭೆ ಹಾಗೂ ಪರಿಷತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ. ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈ ಅಲರ್ಟ್‌ ನೀಡಿದ್ದು, ಬಿಗಿ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ.

SSLC, PUC Exam: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು ಎರಡೇ ಬಾರಿ ಪರೀಕ್ಷೆ, 3ನೇ ಪರೀಕ್ಷೆಗೆ ಬೈ

ಎಸ್ಸೆಸ್ಸೆಲ್ಸಿ- ಪಿಯುಸಿಗೆ ಇನ್ನು ಎರಡೇ ಬಾರಿ ಪರೀಕ್ಷೆ, 3ನೇ ಪರೀಕ್ಷೆಗೆ ಬೈ

SSLC, PUC Exam: ಎಸ್ಸೆಸ್ಸೆಲ್ಸಿ- ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣ ಅಂಕಗಳನ್ನು ಕಡಿತ ಮಾಡಿರುವುದರಿಂದ ಮೊದಲೆರಡು ಪರೀಕ್ಷೆಗಳಲ್ಲೇ ಬಹುತೇಕ ವಿದ್ಯಾರ್ಥಿಗಳು ಪಾಸಾಗುತ್ತಿದ್ದಾರೆ. ಅಲ್ಲದೆ, ಮೂರನೇ ಪರೀಕ್ಷೆಯಲ್ಲೂ ಅಂಕಗಳಲ್ಲಿ ಅಂತಹ ಸುಧಾರಣೆ ಕಾಣುತ್ತಿಲ್ಲ. ಹೀಗಾಗಿ, ಮೂರನೇ ಪರೀಕ್ಷೆ ಕೈಬಿಡಲು ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Sriranagaptna: ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ- ಹನುಮ ಮಂದಿರ ವಿವಾದ ಮತ್ತೆ ಮುನ್ನೆಲೆಗೆ, ಬಿಗಿ ಭದ್ರತೆ

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ- ಹನುಮ ಮಂದಿರ ವಿವಾದ ಮತ್ತೆ ಮುನ್ನೆಲೆಗೆ

Sriranagaptna Jamia Masjid: ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಂದಲೂ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೂ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ, ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಾರಿ ಉದ್ದಕ್ಕೂ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ 1,000ಕ್ಕೂ ಹೆಚ್ಚು ಪೊಲೀಸರು ಯಾತ್ರೆ ತೆರೆಳುವ ದಾರಿಯುದ್ದಕ್ಕೂ ಮಂಗಳವಾರ ಪಥಸಂಚಲನ ನಡೆಸಿದ್ದಾರೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತೊಂದರೆ, 70 ವಿಮಾನ ಹಾರಾಟಕ್ಕೆ ಅಡಚಣೆ, 22 ಫ್ಲೈಟ್‌ ರದ್ದು

ಬೆಂಗಳೂರು ಏರ್‌ಪೋರ್ಟ್‌: 70 ವಿಮಾನ ಹಾರಾಟಕ್ಕೆ ಅಡ್ಡಿ, 22 ಫ್ಲೈಟ್‌ ರದ್ದು

kempegowda international Airport: ವಿಮಾನಗಳ ಸಾಫ್ಟ್‌ವೇರ್ ಸಂಬಂಧಿತ ತಾಂತ್ರಿಕ ಕಾರಣಗಳಿಂದಾಗಿ ಕೊಲ್ಕತ್ತಾ, ದೆಹಲಿ, ಮುಂಬೈ, ಡೆಹ್ರಾಡೂನ್, ವಾರಣಾಸಿ, ಅಹಮದಾಬಾದ್, ಪುಣೆ, ಚೆನೈ, ಭೂಪಾಲ್ ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳಬೇಕಿದ್ದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಸರಿಯಾದ ಸಮಯಕ್ಕೆ ವಿಮಾನಗಳು ಹಾರಾಟ ನಡೆಸದ ಕಾರಣ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

BS Yediyurappa: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಬಿಎಸ್ ಯಡಿಯೂರಪ್ಪ

ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಯಡಿಯೂರಪ್ಪ

ಪೋಕ್ಸೋ ಪ್ರಕರಣದಲ್ಲಿ (POCSO case) ಹೈಕೋರ್ಟ್ ಆದೇಶದ ಪ್ರಕಾರ ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಿದ್ದ ಬಿಎಸ್‌ ಯಡಿಯೂರಪ್ಪ, ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿದ್ದಾರ್ಥ ಲೂಥ್ರಾ ವಾದಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.

BS Yediyurappa: ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ

ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕೋರ್ಟ್‌ಗೆ

ತಮ್ಮ ಮೇಲಿನ ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್,​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಇಂದೇ ಪೀಠದ ಮುಂದೆ ಹಾಜರಾಗುವಂತೆ ಆದೇಶಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

CM- DCM Meeting: ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಬ್ರೇಕ್‌ಫಾಸ್ಟ್‌ ಬಳಿಕ ಸಿಎಂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಜಂಟಿ ಹೇಳಿಕೆ

ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ, ಡಿಸಿಎಂ ಜಂಟಿ ನುಡಿ

ನಮ್ಮ ನಡುವೆ ಭಿನ್ನಾಭಿಪ್ರಾಯ ಇರಲಿಲ್ಲ. ನಾವು ಒಗ್ಗಟ್ಟಾಗಿ ಸರಕಾರ ಮುನ್ನಡೆಸಲಿದ್ದೇವೆ. ನಮ್ಮ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸಿದ ಕೂಡಲೇ ಭಿನ್ನಾಭಿಪ್ರಾಯ ಎಂದರ್ಥವಲ್ಲ. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಯಾವಾಗಲೂ ಬ್ರದರ್ಸೇ. ನಮ್ಮದು ಒಂದೇ ವಿಚಾರ- ಸಿದ್ಧಾಂತ ಎಂದು ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ನೀಡಿದರು.

RV Devraj passes Away: ನಾಳೆ ಕನಕಪುರದ ಹುಟ್ಟೂರಿನಲ್ಲಿ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆ

ನಾಳೆ ಕನಕಪುರದ ಹುಟ್ಟೂರಿನಲ್ಲಿ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆ

ಹುಟ್ಟುಹಬ್ಬ ಆಚರಣೆಗೂ ಮೊದಲು ದೇವರಾಜ್‌ (RV Devraj) ಅವರು ಚಾಮುಂಡಿ ತಾಯಿಯ ದರ್ಶನಕ್ಕೆಂದು ನಿನ್ನೆ (ಡಿ.1) ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Karnataka Politics: ಸಿಎಂ ಸ್ವಾಗತಕ್ಕೆ ಡಿಕೆ ಶಿವಕುಮಾರ್ ಮನೆಯಲ್ಲಿ ಕಾಯ್ತಿದೆ ನಾಟಿ ಕೋಳಿ ಸಾರು!

ಸಿಎಂ ಸ್ವಾಗತಕ್ಕೆ ಡಿಕೆ ಶಿವಕುಮಾರ್ ಮನೆಯಲ್ಲಿ ಕಾಯ್ತಿದೆ ನಾಟಿ ಕೋಳಿ ಸಾರು!

Breakfast meeting: ಇಂದು ಬೆಳಗ್ಗಿನ ಉಪಾಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆಯನ್ನು ಸಿಎಂ ಹಾಗೂ ಡಿಸಿಎಂ ನಡೆಸಲಿದ್ದಾರೆ. ಹೈಕಮಾಂಡ್‌ ನಾಯಕರು ಈ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು, ನಿಗಾ ಇಟ್ಟಿದ್ದಾರೆ. ಅಧಿಕಾರ ಹಂಚಿಕೆಗೆ ಮುನಿಸಿಕೊಂಡಿದ್ದ ಉಭಯ ನಾಯಕರಿಂದ ಈಗ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ.

Vegetables Price: ಗಗನಕ್ಕೇರಿದ ತರಕಾರಿ ಬೆಲೆ, ರಸಂ ಮಾಡ್ತೀವಿ ಸಾಕು ಅಂತಿರೋ ಗ್ರಾಹಕರು!

ಗಗನಕ್ಕೇರಿದ ತರಕಾರಿ ಬೆಲೆ, ರಸಂ ಮಾಡ್ತೀವಿ ಸಾಕು ಅಂತಿರೋ ಗ್ರಾಹಕರು!

ಬಹುತೇಕ ತರಕಾರಿಗಳ ಬೆಲೆ (Vegetables Price) ಏರಿಕೆಯಾಗಿದೆ. ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದರೆ, ನುಗ್ಗೆಕಾಯಿ ಬೆಲೆ ಐದುನೂರರ ಗಡಿ ದಾಟಿದೆ. ಕಳೆದ ಒಂದು ವಾರದಿಂದ ಚಳಿ ರಾಜಧಾನಿ ಜನರನ್ನು ಫ್ರಿಜ್‌ನಲ್ಲಿ ಇಟ್ಟಂತೆ ತಂಪಾಗಿಸಿದೆ. ಆದರೆ ಅಡುಗೆಗೆ ಬೇಕಾದ ತರಕಾರಿಗಳ ದರ ಜನರ ಜೇಬು ಸುಡುತ್ತಿದೆ. ಟೊಮೆಟೊ ಬೆಲೆಯೂ ನೂರರ ಹತ್ತಿರ ಹತ್ತಿರ ಹೋಗುತ್ತಿದೆ.

Cyclone Ditwah: ದಿತ್ವಾ ಸೈಕ್ಲೋನ್‌ ಎಫೆಕ್ಟ್‌, ಬೆಂಗಳೂರು ಕೂಲ್‌, ತಮಿಳುನಾಡು ಥರಥರ

ದಿತ್ವಾ ಸೈಕ್ಲೋನ್‌ ಎಫೆಕ್ಟ್‌, ಬೆಂಗಳೂರು ಕೂಲ್‌, ತಮಿಳುನಾಡು ಥರಥರ

ದಿತ್ವಾ ಚಂಡಮಾರುತ (Cyclone Ditwah) ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ ಇದೆ. ಬಂಗಾಳ ಉಪಸಾಗರದ ನೈರುತ್ಯ ಭಾಗದಲ್ಲಿ ದಿತ್ವಾ ಚಂಡಮಾರುತ ಚಲಿಸುತ್ತಿರುವುದರಿಂದ ಕರ್ನಾಟಕದ ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ತೀವ್ರ ಚಳಿಯ ಅನುಭವ ಆಗಬಹುದು.

Cyclone ditwah: ಶ್ರೀಲಂಕೆಗೆ ನೆರವಿನ ಪಾಕ್‌ ವಿಮಾನಕ್ಕೆ ಮಾನವೀಯ ಹಿನ್ನೆಲೆಯಲ್ಲಿ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು

ಶ್ರೀಲಂಕೆಗೆ ನೆರವಿನ ಪಾಕ್‌ ವಿಮಾನಕ್ಕೆ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು

Pakistan Flight: ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ಪಾಕಿಸ್ತಾನವು ಸೋಮವಾರ ಸುಮಾರು 13:00 ಗಂಟೆಗೆ (ಐಎಸ್ಟಿ) ಓವರ್‌ಫ್ಲೈಟ್ ವಿನಂತಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಶ್ರೀಲಂಕಾಕ್ಕೆ ಮಾನವೀಯ ನೆರವು ನೀಡುವ ವಿನಂತಿಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು, ಭಾರತವು ಶೀಘ್ರ ವೇಗದಲ್ಲಿ ವಿನಂತಿಗೆ ಸಮ್ಮತಿ ನೀಡಿತು.

RV Devaraj passes away: ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಇನ್ನಿಲ್ಲ

ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಇನ್ನಿಲ್ಲ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ (RV Devaraj) ಹೃದಯಾಘಾತದಿಂದ (heart attack) ಸೋಮವಾರ ನಿಧನ ಹೊಂದಿದ್ದಾರೆ. ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

Datta Jayanti 2025: ನಾಳೆಯಿಂದ ದತ್ತ ಜಯಂತಿ, ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ನಾಳೆಯಿಂದ ದತ್ತ ಜಯಂತಿ, ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ನಿರ್ಬಂಧ

ದತ್ತ ಜಯಂತಿಯ (Datta Jayanti 2025) ಹಿನ್ನೆಲೆಯಲ್ಲಿ ಇಂದಿನಿಂದ ಡಿ.5ರ ಬೆಳಗ್ಗೆ 10 ಗಂಟೆಯವರೆಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಾತ್ರೇಯ ಪೀಠ, ಬಾಬಾಬುಡನ್ ಸ್ವಾಮಿ ದರ್ಗಾಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

Loading...