ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Chitradurga Bus Accident: ಡೀಸೆಲ್ ಟ್ಯಾಂಕ್‌ಗೆ ಲಾರಿ ಡಿಕ್ಕಿ ಹೊಡೆದು ಸ್ಫೋಟ, ಬಸ್‌ ಪ್ರಯಾಣಿಕರ ಪಟ್ಟಿ ಇಲ್ಲಿದೆ

ಬಸ್ಸಿನ ಡೀಸೆಲ್ ಟ್ಯಾಂಕ್‌ಗೇ ಲಾರಿ ಡಿಕ್ಕಿ, ಬಸ್‌ ಯಾನಿಗಳ ಪಟ್ಟಿ ಇಲ್ಲಿದೆ

ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್, ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಬಸ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪ್ಪಳಿಸುವಿಕೆಯಿಂದಾಗಿ ಸ್ಲೀಪರ್ ಕೋಚ್ ಬಸ್ ರಸ್ತೆಯ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ.

Zameer Ahmed Khan: ಸಚಿವ ಜಮೀರ್‌ ಅಹ್ಮದ್‌ ಆಪ್ತ ಕಾರ್ಯದರ್ಶಿ ಮನೆ, ರೆಸಾರ್ಟ್‌ ಮೇಲೆ ದಾಳಿ, ಏನೆಲ್ಲ ಪತ್ತೆ?

ಸಚಿವ ಜಮೀರ್‌ ಆಪ್ತನ ಮನೆ, ರೆಸಾರ್ಟ್‌ ಮೇಲೆ ಲೋಕಾ ದಾಳಿ, ಏನೆಲ್ಲ ಪತ್ತೆ?

ಸಹಕಾರ ಇಲಾಖೆಯಲ್ಲಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕರಾಗಿರುವ ಸರ್ಫರಾಜ್‌ ಖಾನ್‌ ಅವರು ನಿಯೋಜನೆ ಮೇರೆಗೆ ವಸತಿ ಮತ್ತು ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆಯಲ್ಲಿದ್ದಾರೆ. ಸದ್ಯ ಅವರು ಸಚಿವ ಜಮೀರ್‌ (Zameer Ahmed Khan) ಅವರ ಆಪ್ತ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್‌ ನಿವಾಸ ಮತ್ತು ಸಂಬಂಧಿಕರ ಮನೆಗಳೂ ಸೇರಿದಂತೆ 5 ಕಡೆ ದಾಳಿ ನಡೆದಿದೆ. ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

Chitradurga Bus Accident: ಚಿತ್ರದುರ್ಗ ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಸಂತ್ರಸ್ತರಿಗೆ ಮೋದಿ 2 ಲಕ್ಷ ರೂ. ಪರಿಹಾರ

ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಮೋದಿ 2 ಲಕ್ಷ ರೂ. ಪರಿಹಾರ

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

Chitradurga Bus Accident: ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಸದ್ಯದ ಮಾಹಿತಿ ಪ್ರಕಾರ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮೃತ ದೇಹಗಳು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿವೆ. ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿರುವುದರಿಂದ ಬೆಂಗಳೂರಿನಿಂದ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ' ಎಂದು ಐಜಿಪಿ ತಿಳಿಸಿದ್ದಾರೆ.

Harish Kera Column: ಎರಡು ಕವಿತೆ, ಇಬ್ಬರು ಪಯಣಿಗರು

Harish Kera Column: ಎರಡು ಕವಿತೆ, ಇಬ್ಬರು ಪಯಣಿಗರು

ರಾಬರ್ಟ್ ಫ್ರಾಸ್ಟ್ ಎಂಬ ಆಂಗ್ಲ ಕವಿಗೆ Stopping by Woods ಎಂಬ ಕವನ ಬರೆಯುವಾಗ ಇದು ಕಾಲದ ಪರೀಕ್ಷೆಯಲ್ಲಿ ಮಸುಕಾಗದೆ ಉಳಿಯಬಲ್ಲ ಕವನ ಎಂದು ಗೊತ್ತಾಗಿತ್ತೋ ಇಲ್ಲವೋ ತಿಳಿಯದು. ಅದು ಓದುಗನಲ್ಲಿ ವಿಚಿತ್ರ ತಳಮಳ ಹುಟ್ಟಿಸುವ ಪದ್ಯ. ಅದು ಕಾಲ ಕಾಲಾಂತರದ ಯಾತ್ರಿಕನ ಕಳವಳ, ನಿಟ್ಟುಸಿರು, ಕಾಯುವಿಕೆ, ದೃಢತೆ ಎಲ್ಲವನ್ನು ಕಾಣಿಸುವ ಹಾಡು.

CM Siddaramaiah: ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮೈಸೂರಿನಲ್ಲಿ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮೈಸೂರಿನಲ್ಲಿ ಅಹಿಂದ ಸಮಾವೇಶ ಮುಹೂರ್ತ ಫಿಕ್ಸ್

ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರು ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಯಲಿದೆ ಎನ್ನಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

Chitradurga Bus Accident: ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 9 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 9 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

bus accident: ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಬೆಂಗಳೂರಿನ ದಾನಿಯಿಂದ 30 ಕೋಟಿ ರೂ. ಮೌಲ್ಯದ ಚಿನ್ನದ ಕಲಾಕೃತಿ ದಾನ

ಅಯೋಧ್ಯೆಗೆ ಬೆಂಗಳೂರಿನ ದಾನಿಯಿಂದ 30 ಕೋಟಿ ರೂ.ನ ಚಿನ್ನದ ಕಲಾಕೃತಿ ದಾನ

Ayodhya Sri Ram Temple: ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ ಅಪರೂಪದ ಶ್ರೀರಾಮನ ಕಲಾಕೃತಿ ಅಯೋಧ್ಯೆ ಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಸಜ್ಜಾಗಿದೆ. ಈ ವಿಶಿಷ್ಟ ಕಲಾಕೃತಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ, ಹವ್ಯಾಸಿ ಕಲಾವಿದೆ ಜಯಶ್ರೀ ಫಣೀಶ್ ತಮ್ಮ ಕೈಯ್ಯಾರೆ ನಿರ್ಮಿಸಿದ್ದಾರೆ.

POCSO Case: ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

Menstrual Leave: ಕೆಎಸ್‌ಆರ್‌ಟಿಸಿ ಮಹಿಳಾ ನೌಕರರಿಗೆ ಸಿಹಿ ಸುದ್ದಿ: ಋತುಚಕ್ರ ರಜೆ ಜನವರಿ 1ರಿಂದ ಜಾರಿ

ಕೆಎಸ್‌ಆರ್‌ಟಿಸಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಜನವರಿ 1ರಿಂದ ಜಾರಿ

ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ (Menstrual Leave) ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲಾಗಿದೆ. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ . ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

Road Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

K Raghunath Murder Case: ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌: ಸಿಬಿಐಗೆ ಸಿಕ್ಕಿಬಿದ್ದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು

ಉದ್ಯಮಿ ಹತ್ಯೆ: ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಸಿಬಿಐ ವಶಕ್ಕೆ

ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ ಮೇ 14, 2019 ರಲ್ಲಿಆದಿಕೇಶವುಲು ಗೆಸ್ಟ್ ಹೌಸ್‌ನಲ್ಲಿ ರಘುನಾಥ್ ಮೃತಪಟ್ಟಿದ್ದರು. ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್‌ ದಾಖಲಿಸಿ ಈಗ ಆದಿಕೇಶವುಲು ಮಗ ಶ್ರೀನಿವಾಸ್‌ ಹಾಗೂ ಮಗಳು ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್‌ಎಎಲ್‌ ಇನ್ಸ್‌ಪೆಕ್ಟರ್‌ ಮೋಹನ್‌ ಅವರನ್ನೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

Virat Kohli: ವಿರಾಟ್‌ ಕೊಹ್ಲಿ ಭಾಗವಹಿಸಬೇಕಿದ್ದ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಇಲ್ಲ, ಮತ್ತೆಲ್ಲಿ?

ವಿರಾಟ್‌ ಕೊಹ್ಲಿ ಭಾಗವಹಿಸುವ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲ್ಲ

ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಪಂದ್ಯ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ಈ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅನುಮತಿ ಇಲ್ಲ. ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ (Centre of Excellence) ಮೈದಾನದಲ್ಲಿ ನಡೆಯಲಿದೆ. ವಿರಾಟ್‌ ಕೊಹ್ಲಿ(Virat kohli) ಮೊದಲ ಬಾರಿಗೆ ದೆಹಲಿ ಪರ ಈ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದ್ದಾರೆ.

Theft Case: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಅಪಘಾತವಾಗಿ ಬಿದ್ದ ವ್ಯಕ್ತಿ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ (UPI) ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌, ನಾಲ್ಕು ಜಿಲ್ಲೆಗಳಲ್ಲಿ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌, ನಾಲ್ಕು ಜಿಲ್ಲೆಗಳಲ್ಲಿ ದಾಳಿ

ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳು, ಕಚೇರಿಗಳು ಲೋಕಾಯುಕ್ತ ತಂಡಗಳ ದಾಳಿಗೆ ಈಡಾಗಿವೆ. ಈ ಅಧಿಕಾರಿಗಳ ಮೇಲೆ ವ್ಯಾಪಕ ಭ್ರಷ್ಟಾಚಾರ, ಹಗರಣಗಳ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

Assault Case: ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಘಟನೆ ದೊಡ್ಡಬಳ್ಳಾಪುರದ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ದೀಪ ಎಂಬಾಕೆ ಜೊತೆ ಅದೇ ಗ್ರಾಮದಲ್ಲಿ ನೆಲೆಸಿದ್ದ ಕಾರ್ತಿಕ್​ ಎಂಬ ಯುವಕ ಅಕ್ರಮ ಸಂಬಂಧ ಹೊಂದಿದ್ದ. ವಿಚಾರ ತಿಳಿದು ಕಾರ್ತಿಕ್​ ಕುಟುಂಬಸ್ಥರು ಆತನಿಗೆ ಬುದ್ದಿವಾದ ಹೇಳಿದ್ದಾರೆ. ಆಕೆಯ ಸಹವಾಸ ಬಿಟ್ಟುಬಿಡು ಎಂದಿದ್ದಾರೆ.

Karnataka Weather: ರಾಜ್ಯದಲ್ಲಿ ಶೀತಗಾಳಿ ಉಲ್ಬಣ, ಇನ್ನೂ ಒಂದು ವಾರ ಗಡಗಡ!

ರಾಜ್ಯದಲ್ಲಿ ಶೀತಗಾಳಿ ಉಲ್ಬಣ, ಇನ್ನೂ ಒಂದು ವಾರ ಗಡಗಡ!

ರಾಜ್ಯಾದ್ಯಂತ (Karnatak weather) ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ ಬೀಸಲಿದೆ. ಒಳನಾಡು ಕರ್ನಾಟಕದ ಎರಡು ಜಿಲ್ಲೆಗಳಾದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಮಾನ್ಯ ಕನಿಷ್ಠ ತಾಪಮಾನದಲ್ಲಿ 5-7 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಆಗಿದೆ. ಇದರಿಂದಾಗಿ ದಟ್ಟ ಮಂಜು ಸಹಿತ ವ್ಯಾಪಕ ಚಳಿ ಕಂಡು ಬಂದಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಇದೇ ರೀತಿಯ ಗರಿಷ್ಠ ಚಳಿ ಮುಂದುವರಿಯಲಿದೆಯಂತೆ.

Murder Case: ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಯಲಹಂಕದ ಬೊಮ್ಮಸಂದ್ರದ ಬಳಿ ವಾಸವಿದ್ದ ಅನಂತ್ (64) ಎಂಬಾತ ತನ್ನ ಪತ್ನಿ ಗಾಯತ್ರಿ (50) ಅವರನ್ನು ಸೈಟ್ ನೋಡಲೆಂದು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಸೈಟ್​ನಲ್ಲಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ನಂತರ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.

No Salary: 6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ

6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ

ವೈದ್ಯರಾದ ಡಾ.ಕುಲದೀಪ್ ಎಂ.ಡಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

CM Siddaramaiah: ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು (CM Siddaramaiah) ಪುನರುಚ್ಚರಿಸಿದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

Bomb Threat: ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು ಹಾಗೂ ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆಯನ್ನು ಅನಾಮಧೇಯ ವ್ಯಕ್ತಿ ಇಮೇಲ್‌ ಮೂಲಕ ಹಾಕಿದ್ದಾನೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ರಾಜ್ಯದಲ್ಲಿ ಹಲವು ಕಡೆ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಪರಿಶೀಲನೆಯ ಬಳಿಕ ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿದುಬಂದಿತ್ತು.

Karnataka Politics: ರಾಜ್ಯ ಕಾಂಗ್ರೆಸ್ ಗೊಂದಲಕ್ಕೆ ನಾವಲ್ಲ ಕಾರಣ, ನೀವೇ ಪರಿಹರಿಸಿಕೊಳ್ಳಿ: ಕೈಚೆಲ್ಲಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಕಾಂಗ್ರೆಸ್ ಗೊಂದಲ ಅವರೇ ಪರಿಹರಿಸಿಕೊಳ್ಳಲಿ: ಕೈಚೆಲ್ಲಿದ ಖರ್ಗೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನುಡಿದಿದ್ದಾರೆ.

Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಧರ್ಮೀಯರಿಗೆ ಆಹ್ವಾನಕ್ಕೆ ವಿರೋಧ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಮತೀಯರಿಗೆ ಆಮಂತ್ರಣಕ್ಕೆ ವಿರೋಧ

Kukke Subrahmanya Temple: ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರಿಗೆ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಎಂದು ಆಕ್ರೋಶ ಕೇಳಿಬಂದಿದೆ.

Loading...