ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Lakkundi gold treasure: ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ! ಪ್ರಾಮಾಣಿಕತೆಯೇ ಮುಳುವಾಯ್ತಾ?

ಲಕ್ಕುಂಡಿಯಲ್ಲಿ ನಿಧಿ ಪತ್ತೆ, ನಿಧಿ ಸಿಕ್ಕ ಮನೆಯವರಿಗೆ ಬೀದಿಪಾಲಾಗುವ ಭೀತಿ!

ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದೆ.

Kodi Mutt Swamiji: ಸಿಎಂ ಕುರ್ಚಿ, ಇಬ್ಬರು ಮಹಾ ವ್ಯಕ್ತಿಗಳ ಸಾವು ಬಗ್ಗೆ ಕೋಡಿ ಮಠ ಸ್ವಾಮೀಜಿ ಕುತೂಹಲಕಾರಿ ಭವಿಷ್ಯವಾಣಿ

ಸಿಎಂ ಕುರ್ಚಿ, ಇಬ್ಬರು ಮಹನೀಯರ ಸಾವು: ಕೋಡಿ ಶ್ರೀ ಭವಿಷ್ಯವಾಣಿ ಹೀಗಿದೆ!

ಹೊಸ ವರ್ಷದ ಆರಂಭದಲ್ಲೇ ರಾಜ್ಯ ರಾಜಕೀಯದ ಬಗ್ಗೆ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬೀದರ್​ನಲ್ಲಿ ಮಾತಾಡಿದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಸದ್ಯದ ರಾಜ್ಯ ರಾಜಕೀಯದ ಪರಿಸ್ಥಿತಿ ನೋಡಿದರೆ ಬದಲಾವಣೆ ಕಷ್ಟ. ಈ ಬಾರಿ ಕೂಡ ಸಿಎಂ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸ್ತಾರೆ ಎಂದಿದ್ದಾರೆ.

CM Siddaramaiah: ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ, ಮರಳಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು 19 ವಿಧೇಯಕಗಳಿಗೆ ಅಂಕಿತ ಹಾಕಿದ್ದರು. ಆದರೆ ದ್ವೇಷ ಭಾಷಣ ವಿಧೇಯಕಕ್ಕೆ ಯಾವುದೇ ವಿವರಣೆ ನೀಡದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

Body Found: ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ಹಾಗೂ ಮಗಳು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Namma Metro Pink Line: ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ

ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ

ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಈ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಇವೆ. ಪರೀಕ್ಷಾರ್ಥ ಸಂಚಾರ ಮುಗಿದ ಬಳಿಕ ಸುರಕ್ಷತಾ ಪ್ರಮಾಣಪತ್ರ ಲಭಿಸಿದ ಕೂಡಲೇ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಲಿದೆ

Road Accident: ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಇತ್ತೀಚೆಗೆ ಹಿರಿಯೂರು ಬಳಿಯೇ ಹೆದ್ದಾರಿಯಲ್ಲಿ ಕಂಟೈನರ್‌ ಡಿಕ್ಕಿಯಾಗಿ ಖಾಸಗಿ ಸ್ಲೀಪರ್‌ ಬಸ್‌ ಹೊತ್ತಿ ಉರಿದು ಐದು ಮಂದಿ ಸಜೀವ ದಹನಗೊಂಡಿದ್ದರು. ಈ ಘಟನೆಯ ಕಹಿನೆನಪು ಮಾಸುವ ಮುನ್ನವೇ ಇಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸಿವೆ. ಈ ಭಾಗದಲ್ಲಿ ಮುಂಜಾನೆ ಸಾಕಷ್ಟು ಮಂಜು ಕವಿದ ವಾತಾವರಣವಿದ್ದು, ತಡರಾತ್ರಿ ಡ್ರೈವ್‌ ಮಾಡುವ ವಾಹನ ಚಾಲಕರು ಹೆಚ್ಚು ಎಚ್ಚರ ವಹಿಸಲು ಸೂಚಿಸಿದೆ.

Bheemanna Khandre: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯ ಏರುಪೇರು, ಆಸ್ಪತ್ರೆಗೆ ದಾಖಲು

ಕಳೆದ ಒಂದು ವಾರದಿಂದ ನಮ್ಮ ತಂದೆಯವರಾದ ಮಾಜಿ ಸಚಿವರು, ಲೋಕನಾಯಕ ಪೂಜ್ಯ ಡಾ. ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಇಂದು ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡು ಬಂದಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

Karnataka Weather: ಬೆಂಗಳೂರಿನಲ್ಲಿ ಚಳಿಯ ಕೊರೆತ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಚಳಿಯ ಕೊರೆತ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ. ಬೆಂಗಳೂರಿನಲ್ಲಿ ಚಳಿಯೊಂದಿಗೆ ತುಂತುರು ಮಳೆಯೂ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ತೀವ್ರ ಶೀತ ವಾತಾವರಣ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ.

Road Accident: ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಯುವಕರ ತಂಡ ಹಳ್ಳಿಯೊಂದರಲ್ಲಿ ಊಟ ಮುಗಿಸಿಕೊಂಡು ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಪಟ್ಟಣದ ಕಡೆಗೆ ಬರುವಾಗ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Asha Raghu No more: ಅಗಲಿದ ಪತಿಯ ನೋವಿನಲ್ಲಿದ್ದ ಕಾದಂಬರಿಕಾರ್ತಿ ಆಶಾ ರಘು ಆತ್ಮಹತ್ಯೆ

ಅಗಲಿದ ಪತಿಯ ನೋವಿನಲ್ಲಿದ್ದ ಕಾದಂಬರಿಕಾರ್ತಿ ಆಶಾ ರಘು

ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಅಗಲಿಕೆಯಿಂದ ಆಶಾ ಅವರು ಮಾನಸಿಕವಾಗಿ ನೊಂದಿದ್ದರು. ಈ ನೋವನ್ನು ಮೀರಲು ಸಾಹಿತ್ಯ ಕೃತಿಗಳ ರಚನೆ, ಉಪಾಸನಾ ಬುಕ್ಸ್‌ ಎಂಬ ಪ್ರಕಾಶನ ಸಂಸ್ಥೆ ಕಟ್ಟಿ ಅದರ ಮೂಲಕ ಯುವ ಸಾಹಿತಿಗಳ ಪುಸ್ತಕ ಪ್ರಕಟಣೆ ಮೊದಲಾದ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಆಂತರಿಕವಾಗಿ ಬಹಳ ಕುಸಿದಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

Road Rage: ಬೆಂಗಳೂರಿನಲ್ಲಿ ರೋಡ್‌ ರೇಜ್‌, ಡೆಲಿವರಿ ಬಾಯ್‌ ಮೇಲೆ ಅಮಾನುಷ ಹಲ್ಲೆ, ವಿಡಿಯೋ ವೈರಲ್

ರೋಡ್‌ ರೇಜ್‌, ಡೆಲಿವರಿ ಬಾಯ್‌ ಮೇಲೆ ಅಮಾನುಷ ಹಲ್ಲೆ‌, ವಿಡಿಯೋ ವೈರಲ್

ಡೆಲಿವರಿ ಬಾಯ್ ಅಚಾನಕ್‌ ಆಗಿರುವ ಡಿಕ್ಕಿಗೆ ಕ್ಷಮೆ ಯಾಚಿಸಿದ್ದಾನೆ. ಆದರೆ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಮಾತ್ರ ಡೆಲಿವರಿ ಬಾಯ್‌ಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಡೆಲಿವರಿ ಬಾಯ್ ಬೈಕ್‌ನಿಂದ ಕೆಳಗೆ ಬಿದ್ದರೂ ಬಿಡದೆ ಇಬ್ಬರು ದುಷ್ಕರ್ಮಿಗಳು ಹೆಲ್ಮೆಟ್‌ನಿಂದ ಥಳಿಸಿ, ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Harassment: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್‌ ಎಂಬಾತ ಆರೋಪಿ. ಈತ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬೀದಿಯಲ್ಲಿ ಯುವತಿಯ ಮುಂದೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡಿದ್ದಾನೆ. ಇದಕ್ಕೆ ಪ್ರತಿರೋಧಿಸಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ.

Hate Speech Bill: 19 ವಿಧೇಯಕಗಳಿಗೆ ರಾಜ್ಯಪಾಲರ ಸಹಿ, ದ್ವೇಷ ಭಾಷಣ ಬಿಲ್‌ಗೆ ಅಂಕಿತವಿಲ್ಲ

19 ವಿಧೇಯಕಗಳಿಗೆ ರಾಜ್ಯಪಾಲರ ಸಹಿ, ದ್ವೇಷ ಭಾಷಣ ಬಿಲ್‌ ಪೆಂಡಿಂಗ್

ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ಅಂಗೀಕರಿಸಿತ್ತು. ವಿಧೇಯಕಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ವಿಪಕ್ಷಗಳ ವಿರೋಧದ ನಡುವೆ ಸರ್ಕಾರ ದ್ವೇಷ ಭಾಷಣ ಬಿಲ್​ ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಈ ವಿಧೇಯಕವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

Asha Raghu no more: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ

Asha Raghu: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ

ಆಶಾ ರಘು ಅವರು ಕನ್ನಡ ಕಾದಂಬರಿಕಾರರಾಗಿದ್ದರಲ್ಲದೆ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಉಪಾಸನಾ ಎಂಬ ಪ್ರಕಾಶನವನ್ನೂ ಆರಂಭಿಸಿ ಯುವ ಲೇಖಕ/ಕಿಯರ ಪುಸ್ತಕಗಳನ್ನು ಪ್ರಕಟಿಸಿದ್ದರು. ಅವರ ಪತಿ ಖ್ಯಾತ ಆಹಾರ ತಜ್ಞ, ಲೇಖಕ ಕೆ.ಸಿ. ರಘು ಎರಡು ವರ್ಷ ಹಿಂದೆ ಮೃತಪಟ್ಟಿದ್ದರು.

Ballari Firing: ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ. ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು.

Viral video: ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ಸುಜಾತಾ ಹಂಡಿ ವ್ಯಕ್ತಿಯೊಬ್ಬರ ಮೇಲೆ ಮೃಗೀಯ ವರ್ತನೆ ತೋರಿದ್ದ 3 ವರ್ಷಗಳ ಹಳೆಯ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಈಕೆ ರಾಕ್ಷಸಿಯಂತೆ ವರ್ತಿಸುತ್ತಿರುವುದು ಕಂಡುಬಂದಿದೆ. ಯುವಕನೊಬ್ಬನನ್ನು ರೂಮಿನಲ್ಲಿ ಕೂಡಿ ಹಾಕಿ ಸುಜಾತ ಹಂಡಿ ಬೆಲ್ಟ್ ಹಿಡಿದು ಆತನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾಳೆ.

Karnataka Weather: 15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

Boiler Blast: ಬೈಲಹೊಂಗಲ ಸಕ್ಕರೆ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸಿಡಿದು ಕುದಿಯುವ ಕಬ್ಬಿನ ಹಾಲು ಮೈಮೇಲೆ ಬಿದ್ದು 8 ಜನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದುವರೆಗೆ 7 ಮಂದಿ ಮೃತಪಟ್ಟಿದ್ದಾರೆ. ಒಬ್ಬನನ್ನು ಹೊರತುಪಡಿಸಿ ಯಾರಿಗೂ ಪರಿಹಾರ ದೊರೆತಿಲ್ಲ, ಪೊಲೀಸರೂ ಕಠಿಣ ಕ್ರಮ ಕೈಗೊಂಡಿಲ್ಲ.

School Bag: ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು ಭಾರದ ಪುಸ್ತಕಗಳನ್ನು ತುಂಬಿಕೊಂಡು ಭಾರವಾದ ಬ್ಯಾಗ್ ಹೊತ್ತು ಶಾಲೆಗೆ ತೆರಳಿದ್ದ. ಶಾಲೆಯಿಂದ ಮರಳಿ ಮನೆಗೆ ಬಂದಾಗ ವಿದ್ಯಾರ್ಥಿಯ ಬಲಗೈ ಭುಜ ಭಾಗದಲ್ಲಿ ತೀವ್ರ ಊತ ಕಂಡುಬಂದಿದೆ.

Harish Kera Column: ಪಶ್ಚಿಮ ಘಟ್ಟಗಳ ʼಗಾಡ್‌ʼಗೀಳ್‌ ಇನ್ನು ನೆನಪು ಮಾತ್ರ

ಪಶ್ಚಿಮ ಘಟ್ಟಗಳ ʼಗಾಡ್‌ʼಗೀಳ್‌ ಇನ್ನು ನೆನಪು ಮಾತ್ರ

ಸುಮಾರು 1600 ಕಿಲೋಮೀಟರ್‌ಗಳಷ್ಟು ಉದ್ದ ಚಾಚಿಕೊಂಡಿರುವ ಪಶ್ಚಿಮ ಘಟ್ಟದ ಬಹುಭಾಗ ಕರ್ನಾಟಕದಲ್ಲಿ ಹರಡಿಕೊಂಡಿದೆ. ಈ ಘಟ್ಟಗಳ ಸಂರಕ್ಷಣೆ ಕುರಿತು ತಮ್ಮ ವರದಿ ತಯಾರಿಗೆ ಮುನ್ನ ಹಾಗೂ ಅದರ ನಂತರವೂ ಈ ಭಾಗದಲ್ಲಿ ಸಾಕಷ್ಟು ಓಡಾಡಿದ್ದ ಹಿರಿಯ ವಿಜ್ಞಾನಿ ಮಾಧವ ಗಾಡ್ಗೀಳ್ ಅವರಿಗೆ ಸ್ಥಳೀಯರ ಒಡನಾಟ ಚೆನ್ನಾಗಿತ್ತು. ಮರಾಠಿ ಮೂಲವಾದರೂ ಅವರಿಗೆ ಕನ್ನಡ ಚೆನ್ನಾಗಿ ಬರುತ್ತಿತ್ತು. ಗಾಡ್ಗೀಳ್ ಅವರ ಜೀವನದ ಬಹುಮುಖ್ಯ ಅಧ್ಯಾಯಗಳು ಕರ್ನಾಟಕದ ರೂಪುಗೊಂಡಿವೆ.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

Encroachment: ಕೋಗಿಲು ಬಳಿಕ ಥಣಿಸಂದ್ರದಲ್ಲೂ ಜೆಸಿಬಿ ಗರ್ಜನೆ, ಬಿಡಿಎ ಜಾಗ ಒತ್ತುವರಿ ತೆರವು

ಕೋಗಿಲು ಬಳಿಕ ಥಣಿಸಂದ್ರದಲ್ಲೂ ಜೆಸಿಬಿ ಗರ್ಜನೆ, ಬಿಡಿಎ ಜಾಗ ಒತ್ತುವರಿ ತೆರವು

ಬೆಂಗಳೂರಿನ ನಾಗವಾರದ ಥಣಿಸಂದ್ರ (Thanisandra) ಬಳಿಯ ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ (BDA) ಸೇರಿದ ಸರ್ವೆ ಸಂಬರ್ 28 ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿದ್ದ 30ಕ್ಕೂ ಹೆಚ್ಚು ಮನೆ, ಶೆಡ್ ಹಾಗೂ ಗ್ಯಾರೇಜ್​ಗಳನ್ನು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಿ ಕೆಡವಲಾಗಿದೆ.

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಇರಿದ ನಾಲ್ವರು ಆರೋಪಿಗಳ ಸೆರೆ

ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರನ ಚಾಲಕನಿಗೆ ಇರಿದ ನಾಲ್ವರು ಆರೋಪಿಗಳ ಸೆರೆ

ಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದ್ದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.

Loading...