ಇದೇ ವಾರ ಮುಖ್ಯಮಂತ್ರಿಗೆ ಒಪಿಎಸ್ ಸಮಿತಿ ವರದಿ: ಸಿ.ಎಸ್. ಷಡಾಕ್ಷರಿ
Old pension scheme: ಸಮಿತಿ ನೀಡಲಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಾಮರ್ಶಿಸಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಲಾಗಿದ್ದ ಘೋಷಣೆ ಹಾಗೂ ಸಂಘದ ಹಲವು ಕಾರ್ಯಕ್ರಮಗಳಲ್ಲಿ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರಿ ನೌಕರರಿಗೆ ಈ ಹಿಂದಿನಂತೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರು ಜಾರಿಗೊಳಿಸುವಂತೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿನಂತಿಸಿದ್ದಾರೆ.