ಉದ್ಯಮಿ ಹತ್ಯೆ: ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಸಿಬಿಐ ವಶಕ್ಕೆ
ಹೆಚ್ಎಎಲ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ ಮೇ 14, 2019 ರಲ್ಲಿಆದಿಕೇಶವುಲು ಗೆಸ್ಟ್ ಹೌಸ್ನಲ್ಲಿ ರಘುನಾಥ್ ಮೃತಪಟ್ಟಿದ್ದರು. ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್ ದಾಖಲಿಸಿ ಈಗ ಆದಿಕೇಶವುಲು ಮಗ ಶ್ರೀನಿವಾಸ್ ಹಾಗೂ ಮಗಳು ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್ಎಎಲ್ ಇನ್ಸ್ಪೆಕ್ಟರ್ ಮೋಹನ್ ಅವರನ್ನೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.