ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ; ರಷ್ಯಾ ಜೊತೆ ಚಕಮಕಿಗೆ ಸಜ್ಜು?

ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ; ರಷ್ಯಾ ಜೊತೆ ಚಕಮಕಿಗೆ ಸಜ್ಜು?

ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್‌ ಅನ್ನು ಅಮೆರಿಕದ ನೌಕಾಪಡೆ ವಶಪಡಿಸಿಕೊಂಡಿದೆ. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ ತೆರಳುತ್ತಿತ್ತು

Ballari Firing: ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್‌ ಅವರು ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ- ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್‌ ಅವರನ್ನ ಸರ್ಕಾರ ವರ್ಗಾವಣೆಗೊಳಿಸಿದೆ.

Crime News: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗಿಳಿಸಿದ ಪಾಪಿ ತಂದೆ, ಅಜ್ಜಿ ಸೇರಿ 12 ಮಂದಿ ಬಂಧನ

ಮಗಳನ್ನೇ ವೇಶ್ಯಾವಾಟಿಕೆಗಿಳಿಸಿದ ಪಾಪಿ ತಂದೆ, ಅಜ್ಜಿ ಸೇರಿ 12 ಮಂದಿ ಬಂಧನ

ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ದುರಾಸೆಯಿಂದ ಈ ತಂದೆ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ. ಆಕೆಯ ಅಜ್ಜಿ ಕೂಡ ಈ ಕೃತ್ಯಕ್ಕೆ ಸಹಕರಿಸಿದ್ದಾಳೆ. ಇವರಿಬ್ಬರೂ ಹಾಗೂ ಇವರಿಂದ ಬಾಲಕಿಯನ್ನು ಪಡೆದುಕೊಂಡ ಮಾಂಸ ದಂಧೆ ಕಿಂಗ್‌ಪಿನ್‌ ಸೇರಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ. ಈ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.

Car Fire Accident: ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

Question Paper Leak: ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ, ಆದರೂ ಪರೀಕ್ಷೆ ನಡೆಸಿದ ಇಲಾಖೆ

ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ

ಮಂಗಳವಾರದ ಗಣಿತ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋಮವಾರ ವಾಟ್ಸ್ಯಾಪ್​ ಮೂಲಕ ವಿದ್ಯಾರ್ಥಿಗಳಿಗೆ ತಲುಪಿದೆ. 80 ಅಂಕಗಳಿಗೆ ಸಿದ್ಧಪಡಿಸಿದ್ದ ಗಣಿತ ಪ್ರಶ್ನೆ ಪತ್ರಿಕೆಯ 47 ಪ್ರಶ್ನೆಗಳು ಹೊಂದಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಅದೇ ಪ್ರಶ್ನೆ ಪತ್ರಿಕೆಗೆ ಮಂಗಳವಾರ PU ಪರೀಕ್ಷಾ ಮಂಡಳಿ ಪರೀಕ್ಷೆ ನಡೆಸಿದೆ. ಪರೀಕ್ಷಾ ಮಂಡಳಿಯ ಈ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

Self Hraming: ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.

Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಬೆಂಗಳೂರು- ಒಳನಾಡು ಗಡಗಡ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಒಳನಾಡು ಗಡಗಡ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ನಾಳೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಇಳಿಕೆ ಆಗಲಿದೆ.

Self Harming: ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್​ಗೆ ತಳ್ಳಿ ಬಳಿಕ ತಾನೂ ಸಂಪ್​ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Road Accident: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Namma Metro Oranage Line: ನಮ್ಮ ಮೆಟ್ರೋ ಆರೆಂಜ್‌ ಲೈನ್‌ ಇನ್ನೂ ತಡ, ವಿಳಂಬದಿಂದಾಗಿ ದಿನಕ್ಕೆ 2 ಕೋಟಿ ರೂಪಾಯಿ ವೆಚ್ಚ ಹೆಚ್ಚಳ!

ನಮ್ಮ ಮೆಟ್ರೋ ಆರೆಂಜ್‌ ಲೈನ್‌ ತಡ, ದಿನಕ್ಕೆ 2 ಕೋಟಿ ರೂಪಾಯಿ ವೆಚ್ಚ ಏರಿಕೆ!

ಕೇಂದ್ರ ಸರ್ಕಾರವು 2024ರ ಆಗಸ್ಟ್‌ 16ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಅನುಮೋದನೆ ನೀಡಿತ್ತು. ಅದಾಗಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಸಮಯ ಕಳೆದರೂ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಇನ್ನೂ ನಾಗರಿಕ ಕಾಮಗಾರಿಗಳಿಗಾಗಿ ಟೆಂಡರ್‌ಗಳನ್ನು ಆಹ್ವಾನಿಸಿಲ್ಲ. ಅಧಿಕಾರಿಗಳ ಪ್ರಕಾರ, ದಿನದಿನದ ವಿಳಂಬವೂ ಯೋಜನೆಗೆ ಆರ್ಥಿಕ ಹೊರೆ ಹೆಚ್ಚಿಸುತ್ತಿದ್ದು, ದಿನಕ್ಕೆ ಸರಾಸರಿ ₹2 ಕೋಟಿ ವೆಚ್ಚ ಏರಿಕೆಯಾಗುವ ಸಾಧ್ಯತೆ ಇದೆ.

Bomb Threat: ಮೈಸೂರು ಹಳೆ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಸಂದೇಶ

ಮೈಸೂರು ಹಳೆ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಸಂದೇಶ

ಹಳೆ ಕೋರ್ಟ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಕಿಡಿಗೇಡಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಈ ವಿಚಾರವನ್ನು ತಕ್ಷಣ ಪೊಲೀಸರು ಹಾಗೂ ನ್ಯಾಯಾಧೀಶರ ಗಮನಕ್ಕೆ ತರಲಾಗಿದೆ. ಕೂಡಲೇ ಕೋರ್ಟ್‌ನಿಂದ ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರು ಹೊರಗಡೆ ಬಂದಿದ್ದಾರೆ. ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನಪಡೆ ಆಗಮಿಸಿದೆ. ಕೋರ್ಟ್ ಆವರಣ ಹಾಗೂ ಒಳಗಡೆ ಇಂಚಿಂಚನ್ನೂ ಪರಿಶೀಲನೆ ನಡೆಸಲಾಗಿದೆ.

Assault Case: ರೌಡಿಶೀಟರ್‌ನ ಕೈ ಮುರಿದು, ಕಣ್ಣಿಗೆ ಇರಿದ ಪತ್ನಿ! ಪೊಲೀಸ್‌ ಠಾಣೆಗೆ ಓಡಿ ಬಂದ ಗಂಡ!

ರೌಡಿಶೀಟರ್‌ನ ಕೈ ಮುರಿದು, ಕಣ್ಣಿಗೆ ಇರಿದ ಪತ್ನಿ! ಠಾಣೆಗೆ ಓಡಿ ಬಂದ ಗಂಡ!

2ನೇ ಪತ್ನಿಯನ್ನು ಬಿಡು ಎಂದು ಮೊದಲ ಹೆಂಡತಿ ಈ ರೌಡಿಶೀಟರ್‌ಗೆ ತಗುಲಿಕೊಂಡು ಚೆನ್ನಾಗಿ ಗೂಸಾ ಕೊಟ್ಟಿದ್ದಾಳೆ. ಅವನ ಕೈ ಮುರಿದಿದ್ದಲ್ಲದೆ, ಕಣ್ಣಿಗೆ ಕೂಡ ಚಾಕುವಿನಿಂದ ಇರಿದಿದ್ದಾಳೆ. ಇದರಿಂದ ಬೆಚ್ಚಿಬಿದ್ದಿರುವ ಸೈಯದ್ ಅಸ್ಗರ್ ಪತ್ನಿ ವಿರುದ್ಧ ಜೆಜೆ ನಗರ ಠಾಣೆಗೆ ಓಡಿಬಂದು ದೂರು ನೀಡಿದ್ದಾರೆ. ಆತನಿಗೆ ಎರಡನೇ ಪತ್ನಿ ಸಾಥ್​​ ಕೊಟ್ಟಿದ್ದಾಳೆ.

Priyank Kharge: ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ: ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್

ಆರ್‌ಎಸ್‌ಎಸ್ ಕುರಿತು ಹೇಳಿಕೆ: ಪ್ರಿಯಾಂಕ್‌ ಖರ್ಗೆ, ಗುಂಡೂರಾವ್‌ಗೆ ನೋಟಿಸ್

ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್ ಎ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನ್ಯಾಯಾಲಯ ಮೂವರಿಗೆ ನೋಟಿಸ್ ಜಾರಿ ಮಾಡಿದೆ.‌ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 356(2) ಅಡಿಯಲ್ಲಿ ದೂರು ದಾಖಲಿಸಲಾಗಿದ್ದು, ಈ ಸಂಬಂಧ BNSS ನಿಯಮಾವಳಿಗಳಂತೆ ನ್ಯಾಯಾಲಯವು ದೂರುದಾರ ಮತ್ತು ಸಾಕ್ಷಿಗಳಾದ ಮಹೇಶ್ ಹಾಗೂ ಸತೀಶ್ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

KSRTC ticket Price: ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ, ಆಯ್ದ ಬಸ್‌ಗಳಲ್ಲಿ ಟಿಕೆಟ್‌ ದರ ವಿನಾಯಿತಿ

ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ, ಆಯ್ದ ಬಸ್‌ಗಳಲ್ಲಿ ಟಿಕೆಟ್‌ ದರ ವಿನಾಯಿತಿ

ಏಪ್ರಿಲ್‌ನಿಂದ ಜೂನ್ ಮತ್ತು ಅಕ್ಟೋಬರ್‌ನಿಂದ ಡಿಸೆಂಬರ್ ಸಮಯದಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಿರುತ್ತೆ. ಈ ಸಮಯದಲ್ಲಿ ಕೆಎಸ್ಆರ್‌ಟಿಸಿ ಸಾಮಾನ್ಯವಾಗಿ ಪ್ರೀಮಿಯಂ ಸೇವೆಗಳ ದರವನ್ನು 10–15% ರಷ್ಟು ಹೆಚ್ಚಿಸುತ್ತದೆ. ಆದ್ರೆ ಇದೀಗ ಆಫ್ ಸೀಸನ್ ಸಮಯದಲ್ಲಿ ಬಸ್ ಟಿಕೆಟ್ ದರ ಇಳಿಸುವ ಮೂಲಕ, ಪ್ರಯಾಣಿಕರಿಗೆ ಇಲಾಖೆ ಬಿಗ್ ಆಫರ್ ನೀಡಿದೆ. ಕೆಲವು ಆಯ್ದ ಮಾರ್ಗಗಳಲ್ಲಿ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದ್ದು,. ಜನವರಿ 05 ರಿಂದಲೇ ದರ ರಿಯಾಯಿತಿ ಜಾರಿಯಾಗಿದೆ.

Techie Death: ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

ಅಪಾರ್ಟ್‌ಮೆಂಟ್‌ನಲ್ಲೇ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

ಬೆಂಕಿ ಬಿದ್ದಿದ್ದ ಪರಿಣಾಮ ರೂಮಿನಿಂದ ಹೊರ ಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರುವ ಶಂಕೆ‌ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂದು ಪೊಲೀಸರು ಹುಡುಕುತ್ತಿದ್ದಾರೆ. ಶಾರ್ಟ್ ಸೆರ್ಕ್ಯೂಟ್, ಬೆಡ್ ಲ್ಯಾಂಪ್ ಅಥವಾ ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಂಡಿರಬಹುದಾ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯಿಂದ ರೂಮಿನ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ.

Namma Mtero: ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್‌ ಖುಷಿ ಸುದ್ದಿ

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್‌ ಖುಷಿ ಸುದ್ದಿ

2026ರ ಅಂತ್ಯದ ಒಳಗೆ ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಿದೆ. ಪಿಂಕ್​ ಮತ್ತು ಬ್ಲೂ ಲೈನ್​​ಗಳಲ್ಲಿ ಮೆಟ್ರೋ ರೈಲುಗಳು ವಾಣಿಜ್ಯ ಸಂಚಾರ ನಡೆಸಲಿವೆ. ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಓಪನ್ ಆದರೆ, ಡಿಸೆಂಬರ್​​ ವೇಳೆಗೆ ಬ್ಲ್ಯೂ ಲೈನ್​​ನ ಮೊದಲ ಹಂತವೂ ಕಾರ್ಯಾಚರಣೆ ಆರಂಭಿಸಲಿದೆ.

Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ನರಮೇಧ, 18 ದಿನಗಳಲ್ಲಿ 6ನೇ ಬಲಿ

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ನರಮೇಧ, 18 ದಿನಗಳಲ್ಲಿ 6ನೇ ಬಲಿ

ಬಾಂಗ್ಲಾದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಹಿಂದೂಗಳ ಮೇಲಿನ ದೌರ್ಜನ್ಯ ಕ್ರೌರ್ಯ ಮುಂದುವರಿದಿದೆ. ಸೋಮವಾರ ಹಿಂದೂ ಯುವಕನೊಬ್ಬನನ್ನ ಗುಂಡಿಕ್ಕಿ ಕೊಲ್ಲಲಾಗಿದೆ. ಅದೇ ಸಮಯ ಮತ್ತೊಂದು ಕಡೆ ಹಿಂದೂ ವಿಧವೆಯೊಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದಿದ್ದಾರೆ.

CM Siddaramaiah: ಮೈಸೂರು ಹೀಲಿಯಂ ಸ್ಫೋಟದಲ್ಲಿ ಮೃತರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು ಸ್ಫೋಟ: ಮೃತರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ

ಡಿ.25ರಂದು ಮೈಸೂರು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದರು. ಈ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಮೃತರ ಕುಟುಂಬಕ್ಕೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

Road Accident: ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಕೂಡ ಕೋಳಿ ಸಪ್ಲೈ ಮಾಡುವ ವಾಹನದ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಸ್ನೇಹಿತನ ರೂಂಗೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Body Found: ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ

OM Shakthi: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆದ ಮೂವರು 'ಬಾಲಪಾತಕಿ'ಗಳ ಬಂಧನ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆದ ಮೂವರು 'ಬಾಲಪಾತಕಿ'ಗಳ ಬಂಧನ

ಬೆಂಗಳೂರಿನ ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ನಾಲ್ಕೈದು ಜನ 15-17 ವರ್ಷದವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.

CM Siddaramaiah: ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ, ಬಜೆಟ್‌ನಲ್ಲೂ ರೆಕಾರ್ಡ್‌

ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ, ಬಜೆಟ್‌ನಲ್ಲೂ ರೆಕಾರ್ಡ್‌

ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ಅವರು ತಮ್ಮ ಏಳೂವರೆ ವರ್ಷದ ಆಡಳಿತಾವಧಿಯಲ್ಲಿ 2,792 ದಿನಗಳ ಕಾಲ ಅಧಿಕಾರದಲ್ಲಿದ್ದರು. ಸಿದ್ದರಾಮಯ್ಯ ಅವರು 2013-2018ರ ಅವಧಿಯಲ್ಲಿ ಮೊದಲ ಬಾರಿಗೆ ಸಿಎಂ ಆಗಿದ್ದಾಗ 1,829 ದಿನಗಳ ಕಾಲ ಅಧಿಕಾರದಲ್ಲಿದ್ದರು. ಈಗ ಎರಡನೇ ಅವಧಿಗೆ ಆಡಳಿತದ ಸೂತ್ರ ಹಿಡಿದಿರುವ ಅವರು, ಜನವರಿ 6ರಂದು ದೇವರಾಜ ಅರಸರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

Hidden Camera: ಸಿನಿಮಾ ಥಿಯೇಟರ್‌ನ ಮಹಿಳಾ ಟಾಯ್ಲೆಟ್‌ನಲ್ಲಿ ಗುಪ್ತ ಕ್ಯಾಮೆರಾ ಇಟ್ಟ ವಿಕೃತಕಾಮಿ!

ಸಿನಿಮಾ ಥಿಯೇಟರ್‌ನ ಮಹಿಳಾ ಟಾಯ್ಲೆಟ್‌ನಲ್ಲಿ ಗುಪ್ತ ಕ್ಯಾಮೆರಾ ಇಟ್ಟ ವಿಕೃತ

ಸಿನಿಮಾ ನೋಡಲು ಬಂದಿದ್ದ ಮಹಿಳೆಯರು ವಾಶ್‌ರೂಮ್‌ಗೆ ಹೋದಾಗ, ಕ್ಯಾಮೆರಾ ಕಂಡು ಶಾಕ್ ಆಗಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಸ್ಥಳೀಯರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗುಪ್ತ ಕ್ಯಾಮರಾ ಕಂಡ ಮಹಿಳೆಯರು ಇದನ್ನು ಗಮನಿಸಿ ತಕ್ಷಣವೇ ಹೊರಬಂದು ಕಿರುಚಾಡಿದ್ದಾರೆ. ಇದರಿಂದ ಥಿಯೇಟರ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Century Gowda Passes Away: 'ತಿಥಿ' ಸಿನಿಮಾ ಖ್ಯಾತಿಯ ನಟ ಸೆಂಚುರಿ ಗೌಡ ನಿಧನ

'ತಿಥಿ' ಸಿನಿಮಾ ಖ್ಯಾತಿಯ ನಟ ಸೆಂಚುರಿ ಗೌಡ ನಿಧನ

ತಿಥಿ ಸಿನಿಮಾದ ಮೂಲಕ ಸಿಂಗಾರಿ ಗೌಡ ಅಲಿಯಾಸ್ ಸೆಂಚುರಿ ಗೌಡ ಜನಪ್ರಿಯರಾಗಿದ್ದರು. ʼತಿಥಿ' ಸಿನಿಮಾದಿಂದ ಜನಪ್ರಿಯತೆ ಗಳಿಸಿದ 'ಸೆಂಚುರಿ ಗೌಡ'ರ ನಿಜವಾದ ಹೆಸರು ಸಿಂಗಾರಿ ಗೌಡ ಅಥವಾ ಸಿಂಗ್ರಿ ಗೌಡ. 100 ವರ್ಷ ವಯಸ್ಸು ದಾಟಿದ್ದರಿಂದ ಸಿನಿಮಾದಲ್ಲೂ ಸೆಂಚುರಿ ಗೌಡ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡಿಗ ಸಿನಿ ಪ್ರೇಮಿಗಳಿಗೆ ಇಷ್ಟವಾಗಿದ್ದರು.

Loading...