ಕುವೆಂಪು ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣ: ದಲಿತ ಸಂಘರ್ಷ ಸಮಿತಿ ವಿರೋಧ
Shivamogga News: ಈ ವಿಚಾರಗೋಷ್ಠಿ ಬಲಪಂಥೀಯ ತತ್ತ್ವದ ಅಜೆಂಡಾವನ್ನು ಉತ್ತೇಜಿಸುತ್ತಿದೆ. ರಾಷ್ಟ್ರೀಯ ಕವಿ ಕುವೆಂಪು ಅವರ ಆದರ್ಶಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಭಗವದ್ಗೀತೆಯನ್ನು ಇತಿಹಾಸದಲ್ಲಿ ಚಾತುರ್ವರ್ಣ ವ್ಯವಸ್ಥೆ ಮತ್ತು ಜಾತಿ ಪದ್ಧತಿಯನ್ನು ಸಮರ್ಥಿಸಲು ಬಳಸಲಾಗಿದೆ. ಬಲಪಂಥೀಯ ಗುಂಪುಗಳು ಇಂತಹ ಕಾರ್ಯಕ್ರಮಗಳ ಮೂಲಕ ವಿಶ್ವವಿದ್ಯಾಲಯಗಳಲ್ಲಿ ಒಂದೇ ರೀತಿಯ ತತ್ತ್ವದ ಚೌಕಟ್ಟನ್ನು ಮುನ್ನೆಲೆಗೆ ತಂದು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಲಾಗಿದೆ.