ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Namma Metro: ರಾಜ್ಯಕ್ಕೆ ಶಾಕ್‌; ನಮ್ಮ ಮೆಟ್ರೋ ರೆಡ್‌ ಲೈನ್‌, ಡಬಲ್‌ ಡೆಕ್ಕರ್‌ ಫ್ಲೈಓವರ್‌ಗೆ ಕೇಂದ್ರ ಬ್ರೇಕ್‌

ನಮ್ಮ ಮೆಟ್ರೋ ರೆಡ್‌ ಲೈನ್‌, ಡಬಲ್‌ ಡೆಕ್ಕರ್‌ಗೆ ಕೇಂದ್ರ ಬ್ರೇಕ್‌

28,405 ಕೋಟಿ ರೂ. ಬೃಹತ್‌ ಮೊತ್ತದ ಡಿಪಿಆರ್ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೆಡ್‌ ಲೈನ್ ಯೋಜನೆಯನ್ನು ಮರುಪರಿಶೀಲನೆ ಮಾಡಲು ಸೂಚಿಸಲಾಗಿದ್ದು, ಅನುಮೋದನೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ. ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದರೆೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿರುವ ಕಾರಣ, ಅದಕ್ಕೂ ಆಯ್ದ ಜಂಕ್ಷನ್‌ಗಳಲ್ಲಿ ಮಾತ್ರ ಮಾಡಲು ಸೂಚಿಸಲಾಗಿದೆ.

Cauvery water: ಬೆಂಗಳೂರಿಗರೇ, ಕಾವೇರಿ ನೀರು ಪೋಲು ಮಾಡಿದರೆ ಬೀಳುತ್ತೆ ರೂ.5000 ದಂಡ!

ಬೆಂಗಳೂರಿಗರೇ, ಕಾವೇರಿ ನೀರು ಪೋಲು ಮಾಡಿದರೆ ಬೀಳುತ್ತೆ ರೂ.5000 ದಂಡ!

ಎಲ್ಲೆಲ್ಲಿ ಅಗತ್ಯವಿದೆಯೋ ಆ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪ್ಲ್ಯಾನ್‌ ಕೂಡ ಜಲಮಂಡಳಿ ಮಾಡಿಕೊಂಡಿದೆ. ಕಾವೇರಿ ನೀರಿನಲ್ಲಿ ಬೈಕ್, ಕಾರು ತೊಳೆಯೋದು, ನೀರನ್ನ ಬೇಕಾಬಿಟ್ಟಿ ಪೋಲು ಮಾಡಿದರೆ ಜಲಮಂಡಳಿ ದಂಡ ಹಾಕಲು ಕೂಡ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ವೀಕ್ಷಕರು ಮತ್ತು ಬ್ಲೂಫೋರ್ಸ್‌ ಕೂಡ ಕಾರ್ಯಾಚರಣೆ ಮಾಡಲಿದೆ.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು ಹಾಗೂ ದಾವಣಗೆರೆಗಳಲ್ಲಿ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆಯೇ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ವೇಳೆ ದಾಖಲೆಗಳಿಲ್ಲದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Sadhu Kokila: ನಟ ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್: ಲೈಂಗಿಕ ದೌರ್ಜನ್ಯ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಹೈಕೋರ್ಟ್ ರಿಲೀಫ್: ಕಿರುಕುಳ ಕೇಸ್‌ ರದ್ದು

ಮೈಸೂರಿನ ಬ್ಯೂಟಿ ಪಾರ್ಲರ್‌ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ್ದ ಮೈಸೂರಿನ ಸರಸ್ವತಿ ಪುರಂ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯ ಮಾಡಿದ್ದರೆಂದು ಆರೋಪ ಮಾಡಲಾಗಿತ್ತು. ಈ ಪ್ರಕರಣ ರದ್ದು ಕೋರಿ ಇಬ್ಬರೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Byrathi Basavaraj: ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜುಗೆ ಸಿಐಡಿ ಲುಕೌಟ್‌ ನೋಟಿಸ್‌

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜುಗೆ ಸಿಐಡಿ ಲುಕೌಟ್‌ ನೋಟಿಸ್‌

ಬೈರತಿ ಬಸವರಾಜು ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೈರತಿ ಬಸವರಾಜು ಅವರು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು, ಸಿಐಡಿ ಪೊಲೀಸ್‌ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧೆಡೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್‌ ನೋಟಿಸ್‌ ಹೊರಡಿಸಿದ್ದಾರೆ.

Harish Kera Column: ಶಿವರಾತ್ರಿ: ರುದ್ರವಿಲಾಸ ಮತ್ತು ಶಿವಕರುಣೆ

Harish Kera Column: ಶಿವರಾತ್ರಿ: ರುದ್ರವಿಲಾಸ ಮತ್ತು ಶಿವಕರುಣೆ

ಬೇಂದ್ರೆಯವರು ಶಿವತಾಂಡವವನ್ನೂ ಕಾಣಬಲ್ಲರು- ಶಿವನು ಬೆನ್ನ ಕೆಚ್ಚನ್ನು ತುಳಿದು ತಾಂಡವ ಪಾದಾಹತಿಯಲಿ ನೋಡುವವನು. ಭುಜದ ಭುಜಂಗನ ಕಚ್ಚಿಸಿ ರಸದ ವಿಷ ಹಿಳಿದು ನೋಡುವನು. ‘ಚಿತಾಭಸ್ಮದಲಿ ಹೊರಳಿಸಿ ನೋಡುವ/ ಮೈಯ ಮಲವ ತೊಳೆದು/ ಕಣ್ಣ ಕಿಚ್ಚಿನಲಿ ಹೊತ್ತಿಸಿ ನೋಡುವ/ ಜ್ಯೋತಿಯ ಎಳೆಯೆಳೆದು’ ಇದರ ಜೊತೆಗೇ ‘ಗಂಗಾ ಜಲದಲಿ ಮುಳುಗಿಸಿ ನೋಡುವ ಎದೆಯಾಳವನಳೆದು’ ಮತ್ತು ‘ರುಂಡವ ಹೂವೊಲು ಉರದಲಿ ಧರಿಸುವ ಕೊರಳಿಗೆ ಬರಸೆಳೆದು’ ಅವನಲ್ಲಿ ನವರಸವೂ ಇದೆ.

Chikkamagaluru news: ಕಡೂರು ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆ

ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆ

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

Road Rage: ರಾಜಧಾನಿಯಲ್ಲಿ ರೋಡ್‌ ರೇಜ್‌, ಬಾನೆಟ್‌ ಮೇಲೆ ಗೂಡ್ಸ್‌ ಚಾಲಕನ ಎಳೆದೊಯ್ದ ಕಾರು ಚಾಲಕ!!

ರೋಡ್‌ ರೇಜ್‌, ಬಾನೆಟ್‌ ಮೇಲೆ ಗೂಡ್ಸ್‌ ಚಾಲಕನ ಎಳೆದೊಯ್ದ ಕಾರು ಚಾಲಕ!

ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ ಶುರುವಾಗಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ವಾಗ್ವಾದ ನಡೆಸುತ್ತಾ ಗೂಡ್ಸ್ ಚಾಲಕ ಕಾರಿನ ಬ್ಯಾನೆಟ್ ಮೇಲೆ ಕುಳಿತಿದ್ದಾನೆ. ಈ ಸಂದರ್ಭದಲ್ಲಿ ಗೂಡ್ಸ್‌ ಚಾಲಕ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಗೊತ್ತಾಗಿದೆ. ಸಿಟ್ಟಿನಿಂದ ಕಾರು ಚಾಲಕ ಹಾಗೆಯೇ ಕಾರು ಚಲಾಯಿಸಿ, ಗೂಡ್ಸ್ ಚಾಲಕನನ್ನು ಎಳೆದೊಯ್ದಿದ್ದಾನೆ.

Bharat Bandh: ಇಂದು ಭಾರತ ಬಂದ್‌, ಕರ್ನಾಟಕದಲ್ಲಿ ಏನೇನು ಎಫೆಕ್ಟ್?‌ ಏನಿದೆ, ಏನಿಲ್ಲ?

ಇಂದು ಭಾರತ ಬಂದ್‌, ಕರ್ನಾಟಕದಲ್ಲಿ ಏನೇನು ಎಫೆಕ್ಟ್?‌ ಏನಿದೆ, ಏನಿಲ್ಲ?

ಹಲವು ರಾಜ್ಯಗಳಲ್ಲಿ ಪ್ರತಿಭಟನಾಕಾರರು ರಸ್ತೆಗಿಳಿದು ಹೋರಾಟದ ಮಾಡುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಲಿದೆ. ಭಾರತ್ ಬಂದ್ ಎಫೆಕ್ಟ್​ ಕರ್ನಾಟಕಕ್ಕೂ ತಟ್ಟಬಹುದು. ಹಲವೆಡೆ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದೆ. ಸಂಚಾರದಲ್ಲೂ ಅಸ್ತವ್ಯಸ್ತ ಉಂಟಾಗುವ ಸಾಧ್ಯತೆ ಇದೆ. ಆದರೆ ಕರ್ನಾಟಕದಲ್ಲಿ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

Double Murder: ಬೆಂಗಳೂರಿನಲ್ಲಿ ಟೆಕ್ಕಿಯಿಂದ ಹಣಕಾಸಿಗಾಗಿ ತಂದೆ- ತಾಯಿಯ ಹತ್ಯೆ

ಬೆಂಗಳೂರಿನಲ್ಲಿ ಟೆಕ್ಕಿಯಿಂದ ಹಣಕಾಸಿಗಾಗಿ ತಂದೆ- ತಾಯಿಯ ಹತ್ಯೆ

ರೋಹನ್ ಭಟ್ (33) ಎಂಬಾತ 4 ಲಕ್ಷ ರೂ. ಹಣಕ್ಕಾಗಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿದ್ದಾನೆ. ನವೀನ್ ಚಂದ್ರ ಭಟ್ (60), ಡಾ. ಶ್ಯಾಮಲಾ ಭಟ್ (55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದಾರೆ. ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದಾರೆ.

Self Harming: ಪರೀಕ್ಷೆಗೆ ಕೆಲವೇ ದಿನ ಮೊದಲು ವಸತಿ ಶಾಲೆಯಲ್ಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಗೆ ದಿನ ಮೊದಲು ಶಾಲೆಯಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಠಾಳ ಗ್ರಾಮದ ಶರತ್, ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ. ನಿನ್ನೆ (ಫೆ.10) ರಾತ್ರಿ ಡೆತ್‌ ನೋಟ್ ಬರೆದಿಟ್ಟು ಶರತ್​ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸ್ಟೆಲ್‌ನಲ್ಲೇ ರಾತ್ರಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.

Toxic Movie: ಟಾಕ್ಸಿಕ್‌ ಸಿನಿಮಾಗೆ ಮತ್ತೊಂದು ಸಂಕಷ್ಟ, ಸಿಡಿದೆದ್ದ ಕ್ರೈಸ್ತರ ಒಕ್ಕೂಟ

ಟಾಕ್ಸಿಕ್‌ ಸಿನಿಮಾಗೆ ಮತ್ತೊಂದು ಸಂಕಷ್ಟ, ಸಿಡಿದೆದ್ದ ಕ್ರೈಸ್ತರ ಒಕ್ಕೂಟ

ಟಾಕ್ಸಿಕ್‌ ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಖಯೇಲ್‌ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್‌ಗಳನ್ನ ತೆಗೆಯಬೇಕು. ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

Leopard Attack: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ

ಇತ್ತೀಚೆಗಷ್ಟೇ ಮಂಡ್ಯ (Mandya) ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ ಎಂಬ ಯುವಕ ಮಹದೇಶ್ವರ ಬೆಟ್ಟದ ರಂಗಸ್ವಾಮಿ ಒಡ್ಡು ಬಳಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಭಕ್ತರು ಪಾದಯಾತ್ರೆ ಮೂಲಕ ಮಹದೇಶ್ವರನ ದರ್ಶನಕ್ಕೆ ಹೊರಟಿದ್ದರು. ಆದರೆ ತಾಳ ಬೆಟ್ಟದ ಮುಂದೆ 2ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ಚಿರತೆ ಪಾದಯಾತ್ರಿಗಳ ಗುಂಪಿನ ಮೇಲೆ ದಾಳಿ ನಡೆಸಿದೆ.

Bengaluru Crime News: ಹಿಂದೂ ಯುವತಿಗೆ ಮಗು ಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

ಹಿಂದೂ ಯುವತಿಗೆ ಮಗು ಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

ಬೆಂಗಳೂರಿನ ಬಿಟಿಎಂ ಲೇಔಟ್‌ ನಿವಾಸಿ ಆಗಿರುವ ಸೈಯದ್ ಇಮ್ತಿಯಾಜ್, ಸಾಮಾಜಿಕ ಜಾಲತಾಣದಲ್ಲಿ ಕೊಲ್ಕತ್ತಾದ ಹಿಂದೂ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಆ ಯುವತಿಯನ್ನು ಈತನೇ ಇಸ್ಲಾಮಿಗೆ ಪರಿವರ್ತನೆ ಮಾಡಿ ನಂತರ ಜೈನಾದ್ ಎಂದು ಮರು ನಾಮಕರಣ ಮಾಡಿದ್ದ. 2025ರ ಜುಲೈ 18ನೇ ತಾರೀಕು ಇಬ್ಬರೂ ರಿಜಿಸ್ಟರ್ ಮದುವೆ ಆಗಿದ್ದಾರೆ.

Love Jihad: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ರಿಜಿಸ್ಟರ್ಡ್‌ ವಿವಾಹ, ಲವ್‌ ಜಿಹಾದ್‌ ಆರೋಪ, ಹೆತ್ತವರ ದೂರು

ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ರಿಜಿಸ್ಟರ್ಡ್‌ ವಿವಾಹ, ಹೆತ್ತವರ ದೂರು

ಕೇರಳದ‌ ವಯನಾಡು ಮೂಲದ ಮಹಮ್ಮದ್ ಮಿಲ್ದಾಜ್ ಎಂಬ ಯುವಕ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಇರುವ ಚಿನ್ನಾಭರಣ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ. ಅತ್ತ ಮೀಪುಗುರಿ ಮೂಲದ 23 ವರ್ಷದ ಯುವತಿ ಮಂಗಳೂರು ಸುರತ್ಕಲ್‌ನಲ್ಲಿರುವ ಕಾಲೇಜ್ ಒಂದರಲ್ಲಿ ಓದುತ್ತಾ ಇದ್ದಳು. ಇಬ್ಬರ ನಡುವೆ ಪ್ರೀತಿ ಶುರುವಾಗಿದೆ.‌ ಇಬ್ಬರೂ ಕೇರಳದ ವಯನಾಡಿನಲ್ಲಿರುವ ರಿಜಿಸ್ಟರ್ ಆಫೀಸ್‌ನಲ್ಲಿ ಜನವರಿ 31ರಂದು ರಿಜಿಸ್ಟರ್ ಮದುವೆಯಾಗಿದ್ದಾರೆ.

P Ramaiah passes away: ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ನಿಧನ, ಸಿಎಂ ಸಂತಾಪ

ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ನಿಧನ, ಸಿಎಂ ಸಂತಾಪ

ಪಿ. ರಾಮಯ್ಯ (ಹಿಂದೂ ರಾಮಯ್ಯ) ಅವರು ಕರ್ನಾಟಕದ ಪ್ರಸಿದ್ಧ ಹಿರಿಯ ಪತ್ರಕರ್ತರು, ಇವರು ಸುಮಾರು 45 ವರ್ಷಗಳ ಕಾಲ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು 'ಪತ್ರಿಕೋದ್ಯಮದ ತಪಸ್ವಿ' ಎಂದು ಕರೆಯಲಾಗುತ್ತದೆ. ಇವರ ಅನುಭವ ಕಥನ "ನಾನು ಹಿಂದೂ ರಾಮಯ್ಯ" ಕೃತಿಯು ಇವರ ಬದ್ಧತೆಯನ್ನು ಎತ್ತಿಹಿಡಿಯುತ್ತದೆ.

DK Shivakumar: ನಾನು- ಸಿಎಂ ಏನು ಮಾತಾಡಿಕೊಂಡಿದ್ದೇವೆ ಎಂಬುದು ಗೊತ್ತಿದೆ: ಡಿಕೆ ಶಿವಕುಮಾರ್

ನಾನು- ಸಿಎಂ ಏನು ಮಾತಾಡಿಕೊಂಡಿದ್ದೇವೆ ಎಂಬುದು ಗೊತ್ತಿದೆ: ಡಿಕೆ ಶಿವಕುಮಾರ್

ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ. ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಡಿಕೆಶಿ ಹೇಳಿದರು.

Bengaluru Crime News: ಭೀಕರ ಕೃತ್ಯ, ನವಜಾತ ಶಿಶುವನ್ನು ಕಸದ ತೊಟ್ಟಿಗೆಸೆದು ಕೊಲೆ

ಭೀಕರ ಕೃತ್ಯ, ನವಜಾತ ಶಿಶುವನ್ನು ಕಸದ ತೊಟ್ಟಿಗೆಸೆದು ಕೊಲೆ

ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯ ಬದಿಯ ಕಸದ ತೊಟ್ಟಿಯಲ್ಲಿ ನವಜಾತ (newborn child) ಗಂಡು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋಗಳನ್ನು ಕಲೆಹಾಕಿ ಆರೋಪಿಗಳ ಜಾಡು ಸಂಗ್ರಹಿಸಲಾಗುತ್ತಿದೆ.

Gold theft: ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳವು!

ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳವು!

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

Chinnu Pappu: 2 ಲಕ್ಷ ಫಾಲೋವರ್ಸ್‌ ಹೊಂದಿದ್ದ ಇನ್‌ಫ್ಲುಯೆನ್ಸರ್‌ ರೇಶ್ಮಾ ಆತ್ಮಹತ್ಯೆ

2 ಲಕ್ಷ ಫಾಲೋವರ್ಸ್‌ ಹೊಂದಿದ್ದ ಇನ್‌ಫ್ಲುಯೆನ್ಸರ್‌ ರೇಶ್ಮಾ ಆತ್ಮಹತ್ಯೆ

ಮೃತ ಮಹಿಳೆಯ ನಿಜವಾದ ಹೆಸರು ಕೆ.ರೇಶ್ಮಾ. ಆದರೆ ಸೋಶಿಯಲ್‌ ಮೀಡಿಯಾದಲ್ಲಿ ಚಿನ್ನು ಪಾಪು ಎನ್ನುವ ಹೆಸರಿನಿಂದಲೇ ಅವರು ಫೇಮಸ್‌ ಆಗಿದ್ದರು. ಮೂಲತಃ ಅವರು ಕೇರಳದ ಆಡೂರಿನವರಾಗಿದ್ದರೂ, ಕರ್ನಾಟಕದ ಗಡಿ ಭಾಗಕ್ಕೆ ಹೊಂದಿರುವ ಕನ್ನಡಿಗರೇ ಹೆಚ್ಚಿರುವ ಕೇರಳದ ಕಾಸರಗೋಡಿನ ಬಳಿಯ ಉಳಿಯತ್ತಡ್ಕದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

Kempegowda Airport: ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಬೃಹತ್‌ ಬಲೂನು ಹಾರಾಟ, ಆತಂಕ

ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಬೃಹತ್‌ ಬಲೂನು ಹಾರಾಟ, ಆತಂಕ

ಮೃತಳ ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಅತ್ತೆ ಅರುಣಾಬಾಯಿ ಸೊಸೆಗೆ ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Murder culprits: 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರ ಮೂಲದ ಅಪ್ಪ ಮಗ ಬೆಂಗಳೂರಿನಲ್ಲಿ ಬಂಧನ

24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರದ ಅಪ್ಪ ಮಗ ಬೆಂಗಳೂರಿನಲ್ಲಿ ಬಂಧನ

ಈ ಅಪ್ಪ ಮಗ ಒಟ್ಟು 24 ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇವರ ವಿರುದ್ಧ 40ಕ್ಕೂ ಹೆಚ್ಚು ಪ್ರಕರಣಗಳಿವೆ. ಇದರಲ್ಲಿ 2 ಡಜನ್‌ನಷ್ಟು ಡಬ್ಬಲ್ ಮರ್ಡರ್‌ ಕೇಸ್‌ಗಳಾಗಿದ್ದು, ಕೊಲೆ, ದರೋಡೆ, ಡಕಾಯಿತಿ, ಬೆದರಿಕೆ, ಹಫ್ತಾ ವಸೂಲಿ ಹಾಗೂ ಶಸ್ತ್ರಾಸ್ತ್ರ ಕಾಯ್ದೆಗಳ ಉಲ್ಲಂಘಿಸಿದ ಆರೋಪ ಇವರ ಮೇಲಿದೆ. ಇವರಿಬ್ಬರು ಪಾಟ್ನಾದ ನಿವಾಸಿಗಳಾಗಿದ್ದು, ಇವರ ವಿರುದ್ಧ ಬಿಹಾರ ಮಾತ್ರವಲ್ಲದೇ ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲೂ ಕೇಸುಗಳು ದಾಖಲಾಗಿವೆ.

Electricity Bill: ಸದ್ಯದಲ್ಲೇ ಇನ್ನೊಂದು ದರ ಏರಿಕೆ ಶಾಕ್‌, ಎಸ್ಕಾಂಗಳಿಂದ ‌ಕರೆಂಟ್ ಬೆಲೆ ಏರಿಕೆಗೆ ಮನವಿ

ಸದ್ಯದಲ್ಲೇ ಇನ್ನೊಂದು ದರ ಏರಿಕೆ, ಎಸ್ಕಾಂಗಳಿಂದ ಕರೆಂಟ್ ಬೆಲೆ ಏರಿಕೆಗೆ ಮನವಿ

ರಾಜ್ಯದ ಎಲ್ಲಾ ಎಸ್ಕಾಂಗಳಿಂದಲೂ ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಮನವಿ ಮಾಡಿದೆ. ಎಸ್ಕಾಂಗಳ ಖರ್ಚು ವೆಚ್ಚ ಸರಿದೂಗಿಸಲು ದರ ಏರಿಕೆ ಅಗತ್ಯ ಎಂದು ಸಂಸ್ಥೆಗಳು ಹೇಳಿವೆ. ವಿದ್ಯುಚ್ಛಕ್ತಿಗೆ ಯುನಿಟ್‌ಗೆ ಒಂದು ರೂ.ವರೆಗೆ ದರ ಏರಿಕೆಗೆ ಎಸ್ಕಾಂಗಳು ಮನವಿ ಸಲ್ಲಿಸಿವೆ.

Social Media: ರಾಜ್ಯದಲ್ಲಿ ಸೋಶಿಯಲ್ ಮೀಡಿಯಾ ಪೋಸ್ಟ್ ವಿರುದ್ಧ ಏಕಾಏಕಿ ಕೇಸ್‌ಗೆ ಬ್ರೇಕ್: ಮಾರ್ಗಸೂಚಿ ಪ್ರಕಟ

ಸೋಶಿಯಲ್ ಮೀಡಿಯಾ ಪೋಸ್ಟ್ ವಿರುದ್ಧ ಏಕಾಏಕಿ ಕೇಸ್‌ಗೆ ಬ್ರೇಕ್, ಮಾರ್ಗಸೂಚಿ

ಸುಪ್ರೀಂ ಕೋರ್ಟ್ ನಿಗದಿಪಡಿಸಿದಂತೆ ಪ್ರಾಥಮಿಕ ವಿಚಾರಣೆಗಳನ್ನು ಕೈಗೊಳ್ಳದೆ, ಪೊಲೀಸ್ ಅಧಿಕಾರಿಗಳು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣವನ್ನು ಯಾಂತ್ರಿಕವಾಗಿ ದಾಖಲಿಸುತ್ತಿದ್ದಾರೆ. ಹೀಗಾಗಿ, ಸುಪ್ರೀಂ ಕೋರ್ಟ್, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ FIR ಗಳ ನೋಂದಣಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ತೀರ್ಪಿನಲ್ಲಿ ಎತ್ತಿಹಿಡಿದಿದೆ.

Loading...