ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
DK Shivakumar: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ? ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್

ಊಟಕ್ಕೆ ಕರೆದರೆ ಇಲ್ಲ ಅನ್ನೋಕಾಗುತ್ತಾ: ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ

ಬೆಳಗಾವಿ ಹೊರವಲಯದಲ್ಲಿ ನಿನ್ನೆ ರಾತ್ರಿ ಶಾಸಕರ ಜತೆ ಔತಣಕೂಟ ಮಾಡಿದ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರನ್ನು ಪತ್ರಕರ್ತರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ʼಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆʼ ಎಂದಿದ್ದಾರೆ.

Shivraj Patil Death: ಮುಂಬಯಿ ದಾಳಿ, ಕೋಟು ಮತ್ತು ಶಿವರಾಜ್‌ ಪಾಟೀಲ್‌ ರಾಜೀನಾಮೆ!

ಮುಂಬಯಿ ದಾಳಿ, ಕೋಟು ಮತ್ತು ಶಿವರಾಜ್‌ ಪಾಟೀಲ್‌ ರಾಜೀನಾಮೆ!

2008ರ ಮುಂಬೈ ಭಯೋತ್ಪಾದಕ ದಾಳಿ ನಡೆದಾಗ ಶಿವರಜ್‌ ಪಾಟೀಲ್‌ (Shivraj Patil Death) ಅವರು ಗೃಹ ಸಚಿವರಾಗಿದ್ದರು. ಮುಂಬೈ ದಾಳಿಯ ನಂತರ ಅವರು ಪಕ್ಷದ ಒಳಗಿನಿಂದ ಹಾಗೂ ಸಾರ್ವನಿಕವಾಗಿ ಒತ್ತಡ ಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕಾಯಿತು. ದಾಳಿಯ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಶಿವರಾಜ್‌ ಪಾಟೀಲ್‌, ದಿನಕ್ಕೆ ಮೂರು ಬಾರಿ ಕೋಟ್‌ ಬದಲಿಸಿಕೊಂಡು ಬಂದರು ಎಂದು ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರು.

Road Accident: ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

HM Revanna Son: ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

Karnataka Politics: 40 ಆಪ್ತ ಶಾಸಕರ ಜೊತೆ ಡಿಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್, ಏನೇನು ಚರ್ಚೆ?

40 ಆಪ್ತ ಶಾಸಕರ ಜೊತೆ ಡಿಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್, ಏನೇನು ಚರ್ಚೆ?

ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramiah) ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹಾಗೂ ಅವರ ಬಣದ ಯಾವೊಬ್ಬ ಶಾಸಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ!

ಕಳೆದ ವಾರದಿಂದ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದ ಬೆಂಗಳೂರಿನಲ್ಲಿ ಮುಂದಿನ ವಾರದ ವೇಳೆಗೆ ಕನಿಷ್ಠ ತಾಪಮಾನ (bengaluru weather) ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ತಾಪಮಾನ 12 ಡಿಗ್ರಿಗೆ ಇಳಿದರೆ, 2016ರ ನಂತರ ಬೆಂಗಳೂರು ಕಂಡ ಅತೀ ಶೀತಲ ಡಿಸೆಂಬರ್‌ ಎನಿಸಲಿದೆ. ಮಂಜಿನೊಂದಿಗೆ ನಗರದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳುತ್ತದೆ.

Namma Metro Pink Line: ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸುಮಾರು ‌21.25 ಕಿಮೀ ಸಂಪರ್ಕಿಸುವ ಗುಲಾಬಿ ಮಾರ್ಗ (Namma Metro Pink Line) 2026ರ ಡಿಸೆಂಬರ್ ಅಥವಾ 2027 ರಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮೊದಲ ಹಂತವಾಗಿ ಐದು ಹೊಸ ʻಚಾಲಕರಹಿತʼ ರೈಲುಗಳನ್ನ ಓಡಿಸಲು ಸಿದ್ಧತೆ ನಡೆಯುತ್ತಿದೆ. ಇದರ ಅಂಗವಾಗಿ ಇಂದು ಹೊಸ ರೈಲು ಮಾದರಿಯನ್ನ ಅನಾವರಣಗೊಳಿಸಿದೆ.

Cabinet meeting: ಒಳಮೀಸಲು ಬಡ್ತಿ ಜಾರಿ, ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಕ್ಯಾಬಿನೆಟ್‌ ಸಭೆ ನಿರ್ಣಯಗಳು‌

ಒಳಮೀಸಲು ಬಡ್ತಿ, ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಕ್ಯಾಬಿನೆಟ್‌ ನಿರ್ಣಯಗಳು

ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ (Cabinet meeting) ನಡೆದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶರತ್ತುಗಳೊಂದಿಗೆ ಕ್ರಿಕೆಟ್‌ ಆಡಿಸಲು ಅವಕಾಶ, ಒಳಮೀಸಲು ಮೊದಲಿದ್ದಂತೆ ಜಾರಿ, ಹೊಸ ವಾಹನ ಖರೀದಿದಾರರಿಗೆ ಕಾರಿನ ಬೆಲೆ ಆಧರಿಸಿ ಶೇಕಡವಾರು ಸೆಸ್ ಜಾರಿ,ಸಿಲ್ಕ್ ರಸ್ತೆ ಜಂಕ್ಷನ್‌ನಿಂದ ಕೆ.ಆರ್ ಪುರದವರೆಗೆ 307 ಕೋಟಿ ರೂ ವೆಚ್ಚದಲ್ಲಿ ನೂತನ ವಿನ್ಯಾಸದ ರಸ್ತೆ ಇತ್ಯಾದಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​​ ವಜಾಗೊಳಿಸಿತ್ತು. ಹೀಗಾಗಿ ಪ್ರಜ್ವಲ್ ಸುಪ್ರೀಂಕೋರ್ಟ್​​​ ಮೊರೆ ಹೋಗಿದ್ದು, ಅಲ್ಲೂ ಸಹ ಹಿನ್ನಡೆಯಾಗಿದೆ.

Yatindra Siddaramaiah: ಕಾಂಗ್ರೆಸ್‌ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು!

ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!

ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ (Yatindra Siddaramaiah), 'ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಜಗಳ ಇಲ್ಲ. ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ' ಎಂದು ಘೋಷಿದರು.

Janaushadhi Kendra: ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರ (Janaushadhi Kendra) ಮುಚ್ಚುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಮಹಾಲಿಂಗಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಆದೇಶವನ್ನು ರದ್ದುಗೊಳಿಸಿ ಆದೇಶ ಆದೇಶಿಸಿದ್ದಾರೆ.

ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ನಡುವೆ 88 ನಿಮಿಷಗಳ ಮಾತುಕತೆ: ಸಭೆಯಲ್ಲಿ ಚರ್ಚೆಯಾಗಿದ್ದೇನು?

ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ನಡುವೆ 88 ನಿಮಿಷ ಚರ್ಚೆಯಾಗಿದ್ದೇನು?

ಕೇಂದ್ರ ಮಾಹಿತಿ ಆಯೋಗದ ಹುದ್ದೆಗಳ ನೇಮಕಾತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ನಡುವೆ ನಡೆದ ಚರ್ಚೆ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮಾಹಿತಿ ಆಯುಕ್ತರ ಅಭ್ಯರ್ಥಿಗಳ ಆಯ್ಕೆ ಕುರಿತು ಉಭಯ ನಾಯಕರು ಪರಸ್ಪರ ಚರ್ಚಿಸಿದ್ದಾರೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿಯವರು ಎಲ್ಲಾ ನೇಮಕಾತಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹಾಗೂ ಲಿಖಿತ ರೂಪದಲ್ಲಿ ತಮ್ಮ ಆಕ್ಷೇಪಣೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

PM Narendra Modi: ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.

Purushottama Bilimale: ಸದನದಲ್ಲೂ ಪ್ರತಿಧ್ವನಿಸಿದ ಪುರುಷೋತ್ತಮ ಬಿಳಿಮಲೆ ಹೇಳಿಕೆ, ಕ್ರಮ ಕೈಗೊಳ್ಳಲು ಆಗ್ರಹ

ಸದನದಲ್ಲೂ ಪ್ರತಿಧ್ವನಿಸಿದ ಪುರುಷೋತ್ತಮ ಬಿಳಿಮಲೆ ಹೇಳಿಕೆ, ಕ್ರಮಕ್ಕೆ ಆಗ್ರಹ

ಯಕ್ಷಗಾನ ಕಲಾವಿದರ ಸಲಿಂಗಕಾಮ ಪ್ರವೃತ್ತಿಯ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ನೀಡಿದ್ದ ಹೇಳಿಕೆಯನ್ನು ವಿಧಾನಸಭೆಯ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ನಾಯಕರು ಖಂಡತುಂಡವಾಗಿ ಖಂಡಿಸಿದ್ದು, ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ನೋಟಿಸ್ ಕೊಟ್ಟು ವಿವರಣೆ ಕೇಳುವಂತೆ ಸರ್ಕಾರಕ್ಕೆ ಸ್ಪೀಕರ್ ಯು.ಟಿ. ಖಾದರ್​​ ಸೂಚನೆ ನೀಡಿದ್ದಾರೆ.

IPS Alok Kumar: ಅಲೋಕ್ ಕುಮಾರ್​ಗೆ ಡಿಜಿಪಿಯಾಗಿ ಬಡ್ತಿ, ಕಾರಾಗೃಹ ಇಲಾಖೆಗೆ ವರ್ಗ

ಅಲೋಕ್ ಕುಮಾರ್​ಗೆ ಡಿಜಿಪಿಯಾಗಿ ಬಡ್ತಿ, ಕಾರಾಗೃಹ ಇಲಾಖೆಗೆ ವರ್ಗ

2019 ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ (IPS Alok Kumar) ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಅಲೋಕ್‌ ಕುಮಾರ್‌ ಮೇಲಿನ ತನಿಖೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿತ್ತು. ಹೀಗಾಗಿ ಅಲೋಕ್‌ ಕುಮಾರ್‌ ಗೆದ್ದಿದ್ದಾರೆ.

Dharmasthala Case: ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲರ ಸಂಚು: ಬಿಜೆಪಿ ಆರೋಪ

ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲರ ಸಂಚು: ಬಿಜೆಪಿ ಆರೋಪ

ಎಸ್ಐಟಿ ಪ್ರಾಥಮಿಕ ತನಿಖೆಯಲ್ಲಿ ಷಡ್ಯಂತ್ರ ಎಂಬುದು ಬೆಳಕಿಗೆ ಬಂದಿದೆ. ಬುರುಡೆ ಗ್ಯಾಂಗ್‌ ಏಕೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ (Dharmastahala case) ಮಾಡಿತು ಎಂದು ನಾನು ಸರ್ಕಾರವನ್ನು ಕೇಳುತ್ತೇನೆ. ಇದೊಂದು ಮತಾಂತರ ಮಾಫಿಯಾ ಎನ್ನುವುದು ಗೊತ್ತಾಗಿದೆ. ನಿಯೋ ಕಮ್ಯುನಿಸ್ಟ್‌ ಮಿದುಳು ಇದರಲ್ಲಿ ಕೆಲಸ ಮಾಡುತ್ತಿದೆ. ಇದಕ್ಕೆ ಅವರೇ ನೀರು, ಗೊಬ್ಬರ ಹಾಕಿದ್ದಾರೆ. ಇದೆಲ್ಲವನ್ನೂ ಆಧರಿಸಿ ಸಮಗ್ರ ತನಿಖೆ ನಡೆಸಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

Harish Kera Column: ಸಮಸ್ಯೆ ಇದೆ ಎಂದರೂ ಪರಿಹಾರ ಬೇಕಿಲ್ಲ !

Harish Kera Column: ಸಮಸ್ಯೆ ಇದೆ ಎಂದರೂ ಪರಿಹಾರ ಬೇಕಿಲ್ಲ !

ಭಾರತದಲ್ಲಿ ವಾಯುಮಾಲಿನ್ಯವನ್ನು ಒಂದು ಸಹಜ ಸಂಗತಿ ಎಂಬಂತೆ ಎಲ್ಲರೂ ಸ್ವೀಕರಿಸಿದ್ದಾರೆ. ಯಾರೂ ಅದರ ಬಗ್ಗೆ ಮಾತಾಡ್ತಾನೇ ಇಲ್ಲ. ಇದು ನ್ಯಾಷನಲ್ ಎಮರ್ಜೆನ್ಸಿ ಆಗಬೇಕಾದ ವಿಷಯ ಎಂದು ರೇಗಿದ. ದಿಲ್ಲಿಯ ಭೀಕರ ವಾತಾವರಣದಲ್ಲಿ ಎಲ್ಲರೂ ಮಾಸ್ಕ್ ಇಲ್ಲದೆ ನಿರಾಳವಾಗಿ ಓಡಾಡು ತ್ತಿರುವುದನ್ನು ಕಂಡು ಬೆಚ್ಚಿಬಿದ್ದ.

Menstrual Leave: ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆ: ಇಂದು ಸಂಪುಟ ನಿರ್ಣಯ

ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆ: ಇಂದು ಸಂಪುಟ ನಿರ್ಣಯ

Menstrual Leave: ಋತುಚಕ್ರ ರಜೆ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಲ್ಲಿನ ಮಹಿಳಾ ಉದ್ಯೋಗಿಗಳಿಗೆ ರಜೆ ಅನ್ವಯವಾಗಲಿದೆ. ಇದು ಮಹಿಳೆಯರು, ಯುವತಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ಅನ್ವಯವಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಲ್ಲಿ ಟ್ರಾನ್ಸ್‌ ಮೆನ್‌ ಹಾಗೂ ಟ್ರಾನ್ಸ್‌ ವುಮೆನ್‌ ಇಬ್ಬರಿಗೂ ಈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ.

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

New Year Celebration rules: ಹೊಸ ವರ್ಷಾಚರಣೆಗೆ ದಿನಗಣನೆ ಶುರು: ಬಿಗಿ ಗೈಡ್‌ಲೈನ್ಸ್‌ ಜಾರಿ ಮಾಡಿದ ಪೊಲೀಸ್‌ ಇಲಾಖೆ!

ಹೊಸ ವರ್ಷಾಚರಣೆಗೆ ಪೊಲೀಸ್‌ ಇಲಾಖೆಯಿಂದ ಬಿಗಿ ಗೈಡ್‌ಲೈನ್ಸ್‌ ಜಾರಿ

New year celebration 2026: ಈ ವರ್ಷಕ್ಕೆ ಗುಡ್‌ ಬೈ ಹೇಳಿ ನೂತನ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿ ಸೇರಿದಂತೆ ಅನೇಕ ಕಡೆ ಸಿದ್ಧತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಅಹಿತಕರ ಘಟನೆಗಳನ್ನು ತಡೆಗಟ್ಟಲು ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಗೈಡ್‌ಲೈನ್ಸ್‌ ಜಾರಿ ಮಾಡಿದೆ. ಸೂಕ್ಷ್ಮ ತಾಣಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ.

Gruhalakshmi Scheme: ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಬಿಗ್‌ ಅಪ್‌ಡೇಟ್‌

ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಬಿಗ್‌ ಅಪ್‌ಡೇಟ್‌

ನಾವು ಆರ್ಥಿಕವಾಗಿ ಗಟ್ಟಿಯಾಗಿ ಇದ್ದೇವೆ. ಜಿಎಸ್‌ಟಿ ಕಲೆಕ್ಷನ್ ಆದರೆ ಕೇಂದ್ರದವರು ಅರ್ಧ ಹಣ ಕೊಡಬೇಕು. ಅವರು ಕೊಡುವುದು 1 ತಿಂಗಳು, ಎರಡು ತಿಂಗಳು ತಡವಾಗುತ್ತೆ. ಹೀಗಾಗಿ ಹಣ ಹೊಂದಿಸುವುದು ತಡವಾಗುತ್ತದೆ. ಹೀಗಾಗಿ ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮೀ ಹಣ ಕೊಡುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraja rayareddy) ತಿಳಿಸಿದ್ದಾರೆ.

Dharmasthala Case: ಹಣದ ಆಮಿಷದಿಂದ ಬುರುಡೆ ಚಿನ್ನಯ್ಯ ಸುಳ್ಳು ದೂರು, 6 ಜನರ ಪಿತೂರಿ: ಧರ್ಮಸ್ಥಳ ಕೇಸ್‌ನ ಪ್ರಾಥಮಿಕ ವರದಿ ಸಲ್ಲಿಕೆ

ಹಣದ ಆಮಿಷದಿಂದ ಬುರುಡೆ ಚಿನ್ನಯ್ಯ ಸುಳ್ಳು ದೂರು, 6 ಜನರ ಪಿತೂರಿ

ಮಾಸ್ಕ್‌ ಮ್ಯಾನ್‌ ಚಿನ್ನಯ್ಯ (Chinnayya), ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ ಜಯಂತ್ ಹಾಗೂ ಸುಜಾತಾ ಭಟ್ ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದಾರೆ. ಪ್ರಕರಣದ (Dharmasthala Case) ಮೊದಲ ಆರೋಪಿಯಾಗಿರುವ ದೂರುದಾರ ಚಿನ್ನಯ್ಯ ಆಮಿಷಕ್ಕೆ ಒಳಗಾಗಿ ಸುಳ್ಳು ಹೇಳಿದ್ದಾನೆ. ಹಣವನ್ನು ಪಡೆದು ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಅಪರಿಚಿತ ಶವ ಹೂತಿದ್ದೇನೆಂದು ಸುಳ್ಳು ಹೇಳಿಸಿ ಆರೋಪಿಗಳು ವಿಡಿಯೋ ರೆಕಾರ್ಡ್‌ ಮಾಡಿದ್ದರು.

Janardhan Reddy: 100 ಕೋಟಿ ರೂ. ಮೌಲ್ಯದ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

100 ಕೋಟಿಯ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ (Land grabbing) ಆರೋಪ ಕೇಳಿ ಬಂದಿದೆ. ಈ ಬಗ್ಗೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಹ ಸಲ್ಲಿಕೆಯಾಗಿದೆ. ಬಳ್ಳಾರಿಯ ಗೋವರ್ಧನ ಎಂಬವರು ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಸಿಐಡಿ ಅಥವಾ ಎಸ್ಐಟಿ ತನಿಖೆಗೆ ವಹಿಸುವಂತೆ ಗೋವರ್ಧನ್ ಮನವಿ ಮಾಡಿದ್ದಾರೆ.

Tiger death: ಸೆರೆ ಸಿಕ್ಕಿದ ನಾಲ್ಕು ಹುಲಿ ಮರಿಗಳ ನಿಗೂಢ ಸಾವು, ತನಿಖೆ

ಸೆರೆ ಸಿಕ್ಕಿದ ನಾಲ್ಕು ಹುಲಿ ಮರಿಗಳ ನಿಗೂಢ ಸಾವು, ತನಿಖೆ

Tiger cubs death: ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್‌ ಅವರ ಜೋಳದ ಹೊಲದ ಬಳಿ ಕಾಣಿಸಿಕೊಂಡಿದ್ದ ಹುಲಿ ಮರಿಗಳನ್ನು ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಪತ್ತೆ ಮಾಡಿದ್ದರು. ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ತಾಯಿ ಹುಲಿಯನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.

Tipu Jayanti : ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಸದನದಲ್ಲಿ ಕಾಂಗ್ರೆಸ್‌ ಶಾಸಕ ಪ್ರಸ್ತಾಪ, ವಿಪಕ್ಷ ಕಿಡಿ

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ವಿಪಕ್ಷವನ್ನು ಕೆರಳಿಸಿದ ಕೈ ಪ್ರಸ್ತಾಪ

ಸದನದಲ್ಲಿ ಟಿಪ್ಪು ಜಯಂತಿ (Tipu Jayanti) ವಿಚಾರವನ್ನು ಪ್ರಸ್ತಾಪಿಸಿದ ಕಾಶಪ್ಪನವರ್‌ ನಮ್ಮ ರಾಷ್ಟ್ರದಲ್ಲಿ ಎಲ್ಲಾ ಜಾತಿ, ಜನಾಂಗ ಇದ್ದು, ಜಾತ್ಯತೀತ ರಾಷ್ಟ್ರದಲ್ಲಿ ವಿರೋಧ ಯಾಕೆ? ಅಲ್ಪ ಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ವಾ? ಈ ಹಿಂದೆ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಟಿಪ್ಪು ವೇಷ ಹಾಕಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಇದಕ್ಕೆ ಯಾವ ರೀತಿ ಉತ್ತರಿಸಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ರಾಜ್ಯದಲ್ಲಿ ಈ ಕುರಿತಾದ ಮತ್ತೊಂದು ಸುತ್ತಿನ ವಿವಾದದ ಚರ್ಚೆ ಆರಂಭವಾಗುವ ಮುನ್ಸೂಚನೆ ಇದೆ.

Loading...