ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Prahlad Joshi: ಸಿಎಂ ಸಿದ್ದರಾಮಯ್ಯ ಮಾಸ್‌ ಲೀಡರ್‌, ಕಾಂಗ್ರೆಸ್‌ ಗೆದ್ದಿದ್ದು ಅವರಿಂದ: ಪ್ರಹ್ಲಾದ್‌ ಜೋಶಿ

ಸಿಎಂ ಸಿದ್ದರಾಮಯ್ಯ ಮಾಸ್‌ ಲೀಡರ್‌: ಪ್ರಹ್ಲಾದ್‌ ಜೋಶಿ

ರಾಹುಲ್ ಗಾಂಧಿ ಜತೆ ಹೋದರೆ ನಾವು ವಿಫಲರಾಗುತ್ತೇವೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೂ ಗೊತ್ತಿದೆ. ಆದರೆ, ರಾಹುಲ್‌ ಪಕ್ಷದ ನಾಯಕ ಎನ್ನುವ ಕಾರಣಕ್ಕೆ ಅನಿವಾರ್ಯವಾಗಿ ಅವರ ಆಶೀರ್ವಾದದಿಂದ ಮುಖ್ಯಮಂತ್ರಿಯಾದೆ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರ ಸಿದ್ಧಾಂತ, ಭಾಷೆ, ನೀತಿಗಳ ವಿಚಾರದಲ್ಲಿ ಭಿನ್ನತೆ ಇದೆ. ಆದರೆ, ರಾಹುಲ್ ಗಾಂಧಿ ತಾವು ಮುಳುಗುವುದರೊಂದಿಗೆ ತಮ್ಮೊಂದಿಗಿರುವ ಇತರರನ್ನು ಮುಳುಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದಿದ್ದಾರೆ ಜೋಶಿ.

CM Siddaramaiah: ಈ ವರ್ಷವೇ 900 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆರಂಭ: ಸಿಎಂ ಸಿದ್ದರಾಮಯ್ಯ‌

ಈ ವರ್ಷವೇ 900 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆರಂಭ: ಸಿಎಂ ಸಿದ್ದರಾಮಯ್ಯ‌

ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (Karnataka Public School) ತೆರೆಯುತ್ತಿದ್ದೇವೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು, ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Sugarcane Farmers Protest: ತಣ್ಣಗಾದ ಕಬ್ಬು ರೈತರ ಕಿಚ್ಚು, ಸಂಧಾನದೊಂದಿಗೆ ಪ್ರತಿಭಟನೆ ಅಂತ್ಯ

ತಣ್ಣಗಾದ ಕಬ್ಬು ರೈತರ ಕಿಚ್ಚು, ಸಂಧಾನದೊಂದಿಗೆ ಪ್ರತಿಭಟನೆ ಅಂತ್ಯ

Sugarcane Farmers Protest: ತೀವ್ರ ಸ್ವರೂಪ ಪಡೆದಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪವನ್ನೂ ತಾಳಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿತ್ತು. ಐದಕ್ಕೂ ಹೆಚ್ಚು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ನೂರಾರು ಟ್ರ್ಯಾಕ್ಟರ್‌ಗಳ ಪೈಕಿ 40-50 ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ಸದ್ಯ ಸಂಧಾನ ಯಶಸ್ವಿಯಾಗಿದ್ದು, ಎಲ್ಲವೂ ತಣ್ಣಗಾದಂತಾಗಿದೆ.

Street Dog Attack: ಬೀದಿ ನಾಯಿಗೆ ಮತ್ತೊಬ್ಬ ಬಲಿ, ಕಚ್ಚಿ ಕೊಂದು ಶವದ ರಕ್ತ ನೆಕ್ಕುತ್ತಾ ಕುಳಿತಿದ್ದ ನಾಯಿ!

ಬೀದಿ ನಾಯಿಗೆ ಮತ್ತೊಬ್ಬ ಬಲಿ, ಶವದ ರಕ್ತ ನೆಕ್ಕುತ್ತಾ ಕುಳಿತಿದ್ದ ನಾಯಿ!

Dakshina Kannada: ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ಬರ್ಬರ ಘಟನೆಯೊಂದು ನಡೆದಿದೆ. ರಾತ್ರಿ ಅಂಗಡಿಯೊಂದರ ಎದುರು ಮಲಗಿದ್ದ ವ್ಯಕ್ತಿಯ ಮೇಲೆ ಬೆಳಗ್ಗೆ 3ರಿಂದ 4 ಗಂಟೆ ಹೊತ್ತಿಗೆ ಬೀದಿ ನಾಯಿಗಳು ದಾಳಿ ನಡೆಸಿವೆ. ತಪ್ಪಿಸಿಕೊಂಡು ಓಡಿದರೂ ಬಿಡದೇ ಬಂದು ದಾಳಿ ನಡೆಸಿ ಕೊಂದು ಹಾಕಿವೆ.

Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಇಂದು ಬೆಂಗಳೂರಿನಲ್ಲಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಇಂದು ಬೆಂಗಳೂರಿನಲ್ಲಿ

ಇಂದು (ನ.15) ಮಧ್ಯಾಹ್ನ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಆ ಮೂಲಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂಬ ವದಂತಿಗೆ ತೆರೆ ಎಳೆಯಲಾಗಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆಯೇ ಹೊರತು ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂಬುದು ಸುಳ್ಳು ಎಂದು ಸರ್ಕಾರ ತಿಳಿಸಿದೆ.

Kashmir Blast: ಜಮ್ಮು ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ, 7 ಜನ ಸಾವು

ಜಮ್ಮು ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ, 7 ಜನ ಸಾವು

ಪ್ರತ್ಯಕ್ಷದರ್ಶಿಗಳು ಮತ್ತು ಪ್ರದೇಶದಿಂದ ಬಂದ ಸಿಸಿಟಿವಿ ತುಣುಕುಗಳು ಕಾಣಿಸುವ ಪ್ರಕಾರ, ಸ್ಫೋಟದಿಂದ ಕಟ್ಟಡ ಚಿಂದಿಯಾಗಿದೆ. ಬೆಂಕಿ ಮತ್ತು ದಟ್ಟ ಹೊಗೆ ಕಂಡುಬಂದಿವೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಫರಿದಾಬಾದ್‌ನಿಂದ ತಂದ ಸ್ಫೋಟಕ ವಸ್ತುಗಳನ್ನು ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಿಂದ ವಶಪಡಿಸಿಕೊಂಡ 360 ಕೆಜಿ ದಾಸ್ತಾನಿನಲ್ಲಿ ಹೆಚ್ಚಿನದನ್ನು ಪೊಲೀಸ್ ಠಾಣೆಯೊಳಗೆ ಸಂಗ್ರಹಿಸಲಾಗಿತ್ತು, ಅಲ್ಲಿ ಪ್ರಾಥಮಿಕ ಎಫ್ಐಆರ್ ದಾಖಲಾಗಿದೆ.

Bihar Election 2025 Results: ಚಿರಾಗ್‌ ಪಾಸ್ವಾನ್:‌ ಎನ್‌ಡಿಎ ಗೆಲುವಿನ ಆಕಾಶದಲ್ಲಿ ಮೂಡಿಬಂದ ಯುವ ತಾರೆ!

ಚಿರಾಗ್‌ ಪಾಸ್ವಾನ್:‌ ಎನ್‌ಡಿಎ ಗೆಲುವಿನ ಆಕಾಶದಲ್ಲಿ ಮೂಡಿಬಂದ ಯುವ ತಾರೆ!

Chirag Paswan: 2020ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ 130 ಸೀಟ್‌ಗಳಲ್ಲಿ ಕೇವಲ ಒಂದನ್ನು ಗೆದ್ದಿದ್ದರು ಚಿರಾಗ್.‌ ಜೆಡಿಯುವಿನ ಸಾಕಷ್ಟು ಮತಗಳನ್ನು ಕಸಿದು ಹಾನಿ ಎಸಗಿದ್ದರೂ, ಅವು ಸೀಟುಗಳಾಗಿ ಬಂದಿರಲಿಲ್ಲ. ಪರಿಸ್ಥಿತಿಯನ್ನು ಇನ್ನಷ್ಟು ಕೆಡಿಸುವಂತೆ, 2021ರಲ್ಲಿ ಚಿರಾಗ್‌ ಚಿಕ್ಕಪ್ಪ ಪಶುಪತಿ ಕುಮಾರ್‌ ಪರಸ್‌ ಎಲ್‌ಜೆಪಿಯ ಇನ್ನೊಂದು ಬಣವನ್ನು ತನ್ನ ಜೊತೆಗೆ ಕೊಂಡೊಯ್ದಿದ್ದರು. ಈ ಮನುಷ್ಯನಿಗೆ ತಂದೆಯ ಲೆಗಸಿಯನ್ನು ಮುಂದುವರಿಸುವ ಸಾಮರ್ಥ್ಯ ಇಲ್ಲವೆಂದೇ ತಜ್ಞರು ಭಾವಿಸಿದ್ದರು. ತಜ್ಞರ ಅನಿಸಿಕೆಗಳನ್ನು ಚಿರಾಗ್‌ ಇದೀಗ ಸುಳ್ಳು ಮಾಡಿದ್ದಾರೆ.

CM Siddaramaiah: ಬಿಹಾರ ಚುನಾವಣೆ ಫಲಿತಾಂಶ ಎಫೆಕ್ಟ್, ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಇನ್ನಷ್ಟು ಗಟ್ಟಿ!

ಬಿಹಾರ ಫಲಿತಾಂಶ ಎಫೆಕ್ಟ್, ಸಿದ್ದರಾಮಯ್ಯ ಸಿಎಂ ಸ್ಥಾನ ಇನ್ನಷ್ಟು ಗಟ್ಟಿ!

Bihar Election Result 2025: ಬಿಹಾರ ಫಲಿತಾಂಶದ ಬಗ್ಗೆ ಯಾವುದೇ ಕ್ಲೂ ಇಲ್ಲದ ಹೊತ್ತಿನಲ್ಲಿ, ಸಿದ್ದರಾಮಯ್ಯ ಅವರನ್ನು ಬದಲಿಸಿ ಇರುವೆ ಬಿಟ್ಟುಕೊಳ್ಳಲು ಕಾಂಗ್ರೆಸ್‌ ಹೈಕಮಾಂಡ್‌ ಸಿದ್ಧವಿರಲಿಲ್ಲ. ಒಂದು ವೇಳೆ ಬಿಹಾರದಲ್ಲಿ ಮಹಾಘಟಬಂಧನ್‌ ಅಧಿಕಾರಕ್ಕೆ ಬಂದಿದ್ದರೆ, ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ದಕ್ಕಿದ್ದರೆ, ಆಗ ಕಾಂಗ್ರೆಸ್‌ ಹೈಕಮಾಂಡ್‌ ಇನ್ನಷ್ಟು ಬಲಿಷ್ಠವಾಗುತ್ತಿತ್ತು. ತನ್ನ ಕಾರ್ಯತಂತ್ರಗಳು ನಡೆಯುತ್ತವೆ ಎಂಬ ಆತ್ಮವಿಶ್ವಾಸದಿಂದ ಇತರ ರಾಜ್ಯಗಳಲ್ಲೂ ಆಂತರಿಕ ಬದಲಾವಣೆಗಳನ್ನು ಮಾಡಿಕೊಳ್ಳಲು ಕೈ ವರಿಷ್ಠರು ಮುಂದಾಗುತ್ತಿದ್ದರು.

Bihar Election 2025 Results: ಬಿಹಾರದ ʼಮಹಾಮಾಂತ್ರಿಕʼ ನಿತೀಶ್‌ ಕುಮಾರ್‌ ಸಾಗಿ ಬಂದ ಹಾದಿಯಿದು!

ಬಿಹಾರದ ʼಮಹಾಮಾಂತ್ರಿಕʼ ನಿತೀಶ್‌ ಕುಮಾರ್‌ ಸಾಗಿ ಬಂದ ಹಾದಿಯಿದು!

Nitish Kumar: ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಬಿಹಾರವನ್ನು ಅತಿ ಹೆಚ್ಚು ಕಾಲ ಆಳಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಪಕ್ಷ ಎಂದಿಗೂ ಸ್ವಂತವಾಗಿ ಸರಕಾರ ರಚಿಸುವಷ್ಟು ಬಹುಮತವನ್ನು ಅಲ್ಲಿ ಗಳಿಸಿಲ್ಲ. ಆದರೆ ತಮ್ಮ ರಾಜಕೀಯ ಕುಶಾಗ್ರಮತಿ, ಚಾಣಾಕ್ಷತನದಿಂದಾಗಿ ಅಧಿಕಾರದಲ್ಲಿರುವ ನಿತೀಶ್‌ಗೆ ಈಗ 74 ವರ್ಷ. ಆಗಾಗ ಮಿತ್ರಪಕ್ಷಗಳನ್ನು ಬದಲಾಯಿಸಿದ್ದಾರೆ. ಆದರೆ ಹೆಚ್ಚು ಕಾಲ ಬಿಜೆಪಿ ಜೊತೆಗೆ ಇದ್ದಾರೆ. ಇದೀಗ ಮತ್ತೆ ಒಂಬತ್ತನೇ ಸಲ ಅಧಿಕಾರಕ್ಕೇರಲು ಸಿದ್ಧರಾಗಿರುವ ನಿತೀಶ್‌, ರಾಷ್ಟ್ರ ರಾಜಕಾರಣದ ಮುತ್ಸದ್ಧಿಗಳಲ್ಲೊಬ್ಬರು.

Bihar Election Result 2025: ಬಿಹಾರದಲ್ಲಿ ಎನ್‌ಡಿಎ ‌ಗೆಲುವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್‌‌ ಏನು?

ಬಿಹಾರ ಎನ್‌ಡಿಎ ‌ಗೆಲುವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್‌‌ ಏನು?

CM Siddaramaiah: ಬಿಹಾರದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಟ್ರೆಂಡ್‌ ಎನ್‌ಡಿಎ ಪರವಾಗಿದೆ. ಬಹುಮತ ನಿಚ್ಚಳವಾಗಿದೆ. ಕಾಂಗ್ರೆಸ್‌ ಸೇರಿದಂತೆ ಮಹಾಘಟಬಂಧನ್‌ ಹಿನ್ನಡೆ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಫಲಿತಾಂಶದ ಕುರಿತು ತಮ್ಮ ಮೊದಲ ರಿಯಾಕ್ಷನ್‌ ನೀಡಿದ್ದಾರೆ.

Delhi blast: ದೆಹಲಿಯಲ್ಲಿ ಕಾರು ಸ್ಫೋಟಿಸಿದ ಕಿರಾತಕನ ಕಾಶ್ಮೀರದ ಮನೆ ಧ್ವಂಸ

ದೆಹಲಿಯಲ್ಲಿ ಕಾರು ಸ್ಫೋಟಿಸಿದ ಕಿರಾತಕನ ಕಾಶ್ಮೀರದ ಮನೆ ಧ್ವಂಸ

ದಿಲ್ಲಿಯ ಸ್ಫೋಟದ (Delhi Car Blast) ಸ್ಥಳದಲ್ಲಿ ಕಂಡುಬಂದ ಮತ್ತು ಅವನ ತಾಯಿಯಿಂದ ಸಂಗ್ರಹಿಸಲಾದ ಡಿಎನ್‌ಎ ಮಾದರಿಗಳು ಹೊಂದಾಣಿಕೆಯಾಗಿದ್ದು, ಕಾರಿನಲ್ಲಿ ಡಾ. ಉಮರ್‌ ಇದ್ದುದು ದೃಢಪಟ್ಟಿದೆ.ಕಾಶ್ಮೀರದಲ್ಲಿರುವ ಉಮರ್‌ನ ಮನೆಯನ್ನು ಧ್ವಂಸಗೊಳಿಸಿರುವುದು ಭಾರತದ ನೆಲದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವವರಿಗೆ ಕಠಿಣ ಸಂದೇಶ ಕಳುಹಿಸುವ ಗುರಿಯನ್ನು ಹೊಂದಿದೆ. ಇದಕ್ಕೂ ಮೊದಲು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂಚಿನಲ್ಲಿ ಭಾಗಿಯಾಗಿರುವವರ ವಿರುದ್ಧವೂ ಈ ಧ್ವಂಸ ಕ್ರಮ ಕೈಗೊಳ್ಳಲಾಗಿತ್ತು.

Prajwal Revanna case: ಪ್ರಜ್ವಲ್‌ ರೇವಣ್ಣ ಜೈಲುವಾಸ ಮುಂದುವರಿಕೆ, ಜಾಮೀನಿಗೆ ಕೋರ್ಟ್‌ ನಕಾರ

ಪ್ರಜ್ವಲ್‌ ರೇವಣ್ಣ ಜೈಲುವಾಸ ಮುಂದುವರಿಕೆ, ಜಾಮೀನಿಗೆ ಕೋರ್ಟ್‌ ನಕಾರ

ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್‌ ರೇವಣ್ಣ (Prajwal Revanna case) ಅವರ ಅರ್ಜಿಯ ವಿಚಾರಣೆ ಹಾಗೂ ಪ್ರಾಸಿಕ್ಯೂಷನ್ ವಾದಮಂಡನೆಯನ್ನು ನವೆಂಬರ್ 24ಕ್ಕೆ ಮುಂದೂಡಲಾಗಿದೆ. ಹೈಕೋರ್ಟ್​ ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯಕ್‌ ಅವರ ಪೀಠ ಅರ್ಜಿ ವಿಚಾರಣೆ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ನವೆಂಬರ್‌ 24ರಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.

sugarcane protest: ಕಬ್ಬಿನ ಟ್ರಾಕ್ಟರ್‌ಗಳಿಗೆ ಬೆಂಕಿ, ಕಲ್ಲು ತೂರಾಟ, ಮೂರು ದಿನ ನಿಷೇಧಾಜ್ಞೆ ಜಾರಿ

ಕಬ್ಬಿನ ಟ್ರಾಕ್ಟರ್‌ಗಳಿಗೆ ಬೆಂಕಿ, ಕಲ್ಲು ತೂರಾಟ, ಮೂರು ದಿನ ನಿಷೇಧಾಜ್ಞೆ

Bagalakote news: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಮೀರ್​ವಾಡಿಯ ಗೋದಾವರಿ ಕಾರ್ಖಾನೆ ಆವರಣ ಅಕ್ಷರಶಃ ರಣರಂಗವಾಗಿತ್ತು. 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜಮಖಂಡಿ, ರಬಕವಿ-ಬನಹಟ್ಟಿ ಮತ್ತು ಮುಧೋಳ ತಾಲೂಕುಗಳಾದ್ಯಂತ ಮೂರು ದಿನಗಳ‌ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Bihar Election Results 2025 LIVE: ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಜಯ....ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಆಗಮನ

ಬಿಹಾರ ಚುನಾವಣೆ ಮತ ಎಣಿಕೆ ಫಲಿತಾಂಶ: ಕ್ಷಣಕ್ಷಣದ ಲೈವ್ ಸುದ್ದಿ

Bihar Assembly Election Results 2025 LIVE Counting and Updates in Kannada: ಬಿಹಾರದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ಎನ್‌ಡಿಎ ಹಾಗೂ ಮಹಾಘಟಬಂಧನ್‌ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾದ ಈ ರಾಜ್ಯದ ಫಲಿತಾಂಶಕ್ಕಾಗಿ ಇಡೀ ದೇಶವೇ ತುದಿಗಾಲಿನಲ್ಲಿದೆ. ಮತ ಎಣಿಕೆಯ ಕ್ಷಣಕ್ಷಣದ ಬೆಳವಣಿಗೆಗಳು ಇಲ್ಲಿ ಸಿಗಲಿವೆ.

Bihar Election 2025 Results: ಇಂದು ಬಿಹಾರ ಕದನ ಫಲಿತಾಂಶ, ಅಚ್ಚರಿ ನೀಡುತ್ತಾನಾ ಮತದಾರ?

ಇಂದು ಬಿಹಾರ ಕದನ ಫಲಿತಾಂಶ, ಅಚ್ಚರಿ ನೀಡುತ್ತಾನಾ ಮತದಾರ?

Bihar Election 2025 Results: ಈಗಾಗಲೇ ಹೆಚ್ಚಿನ ಎಕ್ಸಿಟ್ ಪೋಲ್ ಫಲಿತಾಂಶಗಳು ಎನ್ ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತ ಎಂದು ಹೇಳಿವೆ. ಆದರೂ ಕೆಲವೊಮ್ಮೆ ಎಕ್ಸಿಟ್ ಪೋಲ್‌ಗಳೂ ಉಲ್ಟಾ ಹೊಡೆಯುವ ಸಾಧ್ಯತೆಗಳಿರುವುದರಿಂದ, ಅನಿರೀಕ್ಷಿತ ಫಲಿತಾಂಶಗಳಿಗೆ ಸಿದ್ಧರಾಗಿರಬೇಕಿದೆ. ಈ ಬಾರಿಯೂ ನಿತೀಶ್ ಕುಮಾರ್ ಅವರೇ ಅಧಿಕಾರಕ್ಕೆ ಬರುತ್ತಾರಾ ಅಥವಾ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Mekedatu Project: ಮೇಕೆದಾಟು ಯೋಜನೆ: ಕರ್ನಾಟಕದ ಪರ ಸುಪ್ರೀಂ ಕೋರ್ಟ್‌ ತೀರ್ಪು, ತಮಿಳುನಾಡು ಅರ್ಜಿ ವಜಾ

ಕರ್ನಾಟಕದ ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

ಮೇಕೆದಾಟು ಯೋಜನೆ (Mekedatu project) ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.

Self Harming: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

BJP worker Death: ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಚೀಟಿ ನಡೆಸುತ್ತಿದ್ದರು. ಆದರೆ 7 ಜನ ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರು. ಇದೇ ಸಮಯದಲ್ಲಿ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ವೆಂಕಟೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಯುವ ಮುನ್ನ ವಿಡಿಯೋ ಮಾಡಿಟ್ಟು, ಹಣಕಾಸು ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ.

Menstrual Leave Eligibility: ಮಹಿಳೆಯರಿಗೆ ಮಾಸಿಕ 1 ದಿನ ಋತುಚಕ್ರ ರಜೆ, ಷರತ್ತುಗಳು ಅನ್ವಯ

ಮಹಿಳೆಯರಿಗೆ ಮಾಸಿಕ 1 ದಿನ ಋತುಚಕ್ರ ರಜೆ, ಷರತ್ತುಗಳು ಅನ್ವಯ

Karnatka Menstrual Leave Policy 2025: ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ. ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. ಖಾಯಂ, ಗುತ್ತಿಗೆ, ಹೊರಗುತ್ತಿಗೆ ಎಲ್ಲಾ ಮಾದರಿಯ ಆಧಾರದಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ.

Delhi Blast: ದೆಹಲಿ ಕಾರು ಸ್ಫೋಟಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಮಾಜಿ ಉಗ್ರನ ವಿಚಾರಣೆ

ದೆಹಲಿ ಕಾರು ಸ್ಫೋಟಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಮಾಜಿ ಉಗ್ರನ ವಿಚಾರಣೆ

Tumakuru news: ಮಾಜಿ ಉಗ್ರನನ್ನು 2016ರಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಬಳಿಕ 6 ವರ್ಷಗಳ ಕಾಲ ತಿಹಾರ್ ಜೈಲಿನಲಿದ್ದ. ಖಲಿಫತ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಈತ, ಸಂಘಟನೆ ಮುಖಂಡರಿಗೆ ತುಮಕೂರಿನಲ್ಲಿ ಸಭೆಗೆ ಅವಕಾಶ ಮಾಡಿ, ಅದರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸದ್ಯ ದೆಹಲಿ ಪ್ರಕರಣ ಸಂಬಂಧ ಉಗ್ರನ ವಿಚಾರಣೆ ಮಾಡಲಾಗಿದೆ. ಪ್ರಕರಣದಲ್ಲಿ ಈತನ ಪಾತ್ರವಿಲ್ಲ ಎಂದು ತಿಳಿದುಬಂದಿದ್ದು, ಬಿಟ್ಟುಕಳುಹಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಯನತಾರಾ ದಂಪತಿ, ಸರ್ಪಸಂಸ್ಕಾರದಲ್ಲಿ ಭಾಗಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ವಿಧಿ ನೆರವೇರಿಸಿದ ನಯನತಾರಾ ದಂಪತಿ

Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿನಿಮಾ ಹಾಗೂ ಕ್ರಿಕೆಟ್‌ನ ಸೆಲೆಬ್ರಿಟಿಗಳು ಆಗಾಗ ಆಗಮಿಸುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಬಾಲಿವುಡ್ ನಟಿ ಕತ್ರಿನಾ ಕೈಫ್‌ ತಮ್ಮ ಗಂಡ ವಿಕ್ಕಿ ಕೌಶಲ್‌ ಜೊತೆಗೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದರು. ಆ ಬಳಿಕ ಅವರು ಗರ್ಭಿಣಿಯಾಗಿದ್ದರು. ಸಂತಾನಫಲದ ಸಮಸ್ಯೆಯನ್ನು ಹೊಂದಿದವರಿಗೆ ಕುಕ್ಕೆ ಸುಬ್ರಹ್ಮಣ್ಯದ ಭೇಟಿಗೆ ಜ್ಯೋತಿಷಿಗಳು ಸೂಚಿಸುವುದು ಸಾಮಾನ್ಯವಾಗಿದೆ. ಸಚಿನ್‌ ತೆಂಡುಲ್ಕರ್‌, ಶಿಲ್ಪಾ ಶೆಟ್ಟಿ ಮೊದಲಾದವರೆಲ್ಲ ಇಲ್ಲಿಗೆ ಭೇಟಿ ನೀಡಿದ್ದಾರೆ.

Viral News: ಬೆಂಗಳೂರಿನ ಫ್ಲೈಓವರ್‌ ಕಂಬದಲ್ಲಿ ವ್ಯಕ್ತಿಯ ವಾಸ್ತವ್ಯ, ಸಿಟಿ ಜನ ಶಾಕ್!

ಬೆಂಗಳೂರಿನ ಫ್ಲೈಓವರ್‌ ಕಂಬದಲ್ಲಿ ವ್ಯಕ್ತಿಯ ವಾಸ್ತವ್ಯ, ಸಿಟಿ ಜನ ಶಾಕ್!

Bengaluru news: ಈ ವಿಲಕ್ಷಣ ದೃಶ್ಯ ತಕ್ಷಣವೇ ದೊಡ್ಡ ಜನಸಮೂಹವನ್ನು ಸೆಳೆದಿದೆ. ಜನ ಇದನ್ನು ನಂಬಲಾಗದವರಂತೆ ಸುತ್ತಲೂ ಜಮಾಯಿಸಿ ವೀಕ್ಷಿಸಿದ್ದಾರೆ. ಆ ವ್ಯಕ್ತಿ ಅಷ್ಟೊಂದು ಎತ್ತರದ ಜಾಗಕ್ಕೆ ಯಾವುದೇ ಏಣಿಯಂಥ ಆಧಾರವಿಲ್ಲದೆ ಹೇಗೆ ಹತ್ತಿದ, ಅಲ್ಲಿ ಹೇಗೆ ಇದ್ದಾನೆ ಎಂಬುದು ಆಶ್ಚರ್ಯಕರವಾಗಿದೆ. ತನ್ನ ಸುತ್ತಮುತ್ತ ನಡೆಯುತ್ತಿರುವ ಯಾವುದೇ ಗದ್ದಲ ಆತನನ್ನು ಚಿಂತೆಗೀಡು ಮಾಡಿಲ್ಲ. ಪಾರಿವಾಳಗಳು ಮಾತ್ರ ಇರಬಹುದಾದ ಜಾಗದಲ್ಲಿ ಈತ ಹೇಗೆ ಬಂದ ಎಂಬುದು ಕುತೂಹಲ ಮೂಡಿಸಿದೆ.

Harish Kera Column: ವಿದ್ಯಾವಂತರೇಕೆ ಕೇಡಿನ ಹಾದಿ ತುಳಿದಿದ್ದಾರೆ ?

Harish Kera Column: ವಿದ್ಯಾವಂತರೇಕೆ ಕೇಡಿನ ಹಾದಿ ತುಳಿದಿದ್ದಾರೆ ?

ಬಹಳ ಹಿಂದೆಯೇ ಗಮನಿಸಿದ ಸಂಗತಿ ಇದು. ಭಯೋತ್ಪಾದಕ ಸಂಘಟನೆ ಐಸಿಸ್ ಚುರುಕಾಗಿದ್ದ ಕಾಲದಲ್ಲಿ ಬಹಳಷ್ಟು ಯುವಕ/ತಿಯರು ಅದನ್ನು ಸೇರಿಕೊಂಡಿದ್ದರು. ಈಗಲೂ ಆ ರೂಢಿ ಮುಂದುವರಿದಿದೆ ಎಂಬುದರಲ್ಲಿ ಸಂಶಯವಿಲ್ಲ. ಮತ್ತು ಅವರೆಲ್ಲ ವೈದ್ಯರೋ ಇಂಜಿನಿಯರ್‌ ಗಳೋ ಐಟಿ ಉದ್ಯೋಗಿಗಳೋ ಆಗಿದ್ದರು. ಅಂದರೆ ವಿದ್ಯಾ ವಂತರು.

Delhi Blast: ಸ್ಫೋಟಗೊಂಡ ಕಾರ್‌ ಚಲಾಯಿಸುತ್ತಿದ್ದವನೇ ಡಾ. ಉಮರ್‌, ಡಿಎನ್‌ಎ ವರದಿಯಲ್ಲಿ ಬಯಲು

ಸ್ಫೋಟಗೊಂಡ ಕಾರ್‌ ಚಲಾಯಿಸುತ್ತಿದ್ದವನೇ ಉಮರ್‌, ಡಿಎನ್‌ಎ ವರದಿಯಲ್ಲಿ ಬಯಲು

ಭಯೋತ್ಪಾದಕ ಉಮರ್ ಪೊಲೀಸರ ಕೈಗೆ ಸಿಕ್ಕಿಬೀಳುವ ಭಯದಲ್ಲಿದ್ದ. ಫರಿದಾಬಾದ್‌ನಲ್ಲಿ ಸ್ಫೋಟಕಗಳು (Delhi red fort car blast) ಪತ್ತೆಯಾಗಿದ್ದು, ಸೋಮವಾರ ಬೆಳಿಗ್ಗೆ ಆತನ ಸಹಚರರನ್ನು ಬಂಧಿಸಲಾಗಿತ್ತು. ವೈದ್ಯ ಉಮರ್ ಹೇಗೋ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. ಬಳಿಕ ಕಾರಿನಲ್ಲಿ ತುಂಬಿದ್ದ ಸ್ಫೋಟಕಗಳ ಜೊತೆಗೆ ದೆಹಲಿಗೆ ಪರಾರಿಯಾಗಿದ್ದ. ಮಯೂರ್ ವಿಹಾರ್, ಫರಿದಾಬಾದ್ ಮತ್ತು ಕನ್ನಾಟ್ ಪ್ಲೇಸ್‌ನಲ್ಲಿ ಕಾಣಿಸಿಕೊಂಡಿದ್ದ. ಕೆಂಪು ಕೋಟೆಯ ಸಮೀಪದ ಮಸೀದಿಯ ಪಾರ್ಕಿಂಗ್ ಸ್ಥಳದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುಮ್ಮನೆ ಕುಳಿತು ಕಳೆದಿದ್ದ. ನಂತರ ಅಲ್ಲಿಂದ ಹೊರಟಿದ್ದ.

G Parameshwara: ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಬಂಧನದ ವೇಳೆ ಚಿಕ್ಕಮಗಳೂರು (Chikkamagaluru News) ನಗರದಲ್ಲಿರುವ ಮಾರ್ಕೆಟ್ ರಸ್ತೆಯಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಕಂಡಿತು. ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸ್ ಜೀಪ್‌ಗೆ ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಬಂದಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು. ಸಂತೋಷ್ ಬಂಧನ ಖಂಡಿಸಿ ನಗರ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಠಾಣೆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Loading...