ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
ballari Firing: ಸಸ್ಪೆಂಡ್‌ ಆಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಜ್ಜೂರು ಆತ್ಮಹತ್ಯೆ ಯತ್ನ?

ಸಸ್ಪೆಂಡ್‌ ಆಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಜ್ಜೂರು ಆತ್ಮಹತ್ಯೆ ಯತ್ನ?

ಬಳ್ಳಾರಿ ಘಟನೆಗೆ ಸಂಬಂಧಿಸಿ ಸೇವೆಯಿಂದ ಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್ ನಜ್ಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ತುಮಕೂರು ಜಿಲ್ಲೆಯ ಶಿರಾದ ಬರಗೂರಿನ ಫಾರಂಹೌಸ್‌ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Harassment: ಯುವ ವೈದ್ಯೆಗೆ ಬೀದಿ ಕಾಮಣ್ಣನ ಕಿರುಕುಳ, ಹೆಡೆಮುರಿ ಕಟ್ಟಿದ ಪೊಲೀಸರು

ಯುವ ವೈದ್ಯೆಗೆ ಬೀದಿ ಕಾಮಣ್ಣನ ಕಿರುಕುಳ, ಹೆಡೆಮುರಿ ಕಟ್ಟಿದ ಪೊಲೀಸರು

ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯ ವೇಳೆ ಆರೋಪಿ ವಿನೋದ್ ಎಂಬುದು ದೃಢಪಟ್ಟಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ವಿನೋದ್ ಬೈಕ್‌ನಲ್ಲಿ ಸಂಚರಿಸುತ್ತ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಈ ರೀತಿಯ ಕೃತ್ಯ ಎಸಗುತ್ತಿದ್ದಾನೆ ಎಂಬುದು ಗೊತ್ತಾಗಿದೆ.

Kalaburagi News: ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ, ತಪಾಸಣೆ

ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ, ತಪಾಸಣೆ

ಇತ್ತೀಚೆಗಷ್ಟೇ ಕಲಬುರಗಿ ಜೈಲಿನ ಒಳಗಡೆ ಕೈದಿಗಳು ಇಸ್ಪೀಟ್ ಆಡುವುದು, ಮದ್ಯಪಾನ ಹಾಗೂ ಸಿಗರೇಟ್ ಸೇವಿಸುತ್ತಾ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯು ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದಲ್ಲದೆ, ಜೈಲಿನ ಭದ್ರತೆಯ ಬಗ್ಗೆ ಸರಕಾರ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

Ballari Firing: ಶಾಸಕ ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

Mahantesh Bilagi: ಆಕ್ಸಿಡೆಂಟ್‌ನಲ್ಲಿ ಮೃತರಾದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ, ಯಾವ ಹುದ್ದೆ?

ಮೃತ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ, ಯಾವ ಹುದ್ದೆ?

ನಿನ್ನೆ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 2025ರ ನವೆಂಬರ್ 25ರಂದು ಜೇವರ್ಗಿ ಸಮೀಪ ಬೀಳಗಿ ಅಪಘಾತದಲ್ಲಿ ಮೃತರಾಗಿದ್ದರು.

Karnataka Weather: ರಾಜ್ಯದಲ್ಲಿ ಮುಂದುವರಿದ ಚಳಿ, ಬೆಂಗಳೂರು ಮತ್ತಿತರೆಡೆ ತುಂತುರು ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದುವರಿದ ಚಳಿ, ಬೆಂಗಳೂರು ಮತ್ತಿತರೆಡೆ ತುಂತುರು ಮಳೆ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು, ಚಳಿ ಜೊತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ದಿನಗಳ ಹಿಂದೆ ಅಂದರೆ ಹೊಸ ವರ್ಷದ ಆರಂಭದಲ್ಲಿ ನಗರದ ಹಲವೆಡೆ ತಂತುರು ಮಳೆಯಾದ ಬಗ್ಗೆ ವರದಿಯಾಗಿದೆ.

Ballari firing: ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ನನ್ನ ಹತ್ಯೆಗೆ ಸಂಚು ನಡೆಸಿದ್ದಾರೆ. 7-8 ಬಾರಿ ಫೈರಿಂಗ್‌ ಆಗಿದೆ. ನಿನ್ನೆ ಒಂದು ಗುಂಡು ಪತ್ತೆಯಾಗಿತ್ತು, ಇಂದು ಮತ್ತೊಂದು ಬುಲೆಟ್‌ ಕ್ಯಾಪ್‌ ಪತ್ತೆಯಾಗಿದೆ. ಜಾತಿ ನಿಂದನೆ, ಕೊಲೆ ಯತ್ನ ಆರೋಪದ ಅಡಿಯಲ್ಲಿ 15 ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ರೆಡ್ಡಿ ಕಡೆಯವರೂ ಭರತ್‌ ರಡ್ಡಿ ಹಾಗೂ ಬೆಂಬಲಿಗರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ.

Cabinet meeting: ನರೇಗಾ ಬದಲು ಜಿ ರಾಮ್‌ ಜಿ ಜಾರಿಗೆ ಖಂಡನೆ, ಬೆಂಗಳೂರಿನಲ್ಲಿ ಬಸವಣ್ಣ ಪಾರ್ಕ್:‌ ಕ್ಯಾಬಿನೆಟ್‌ ನಿರ್ಣಯಗಳು ಇಲ್ಲಿವೆ

ನರೇಗಾ ಬದಲು ಜಿ ರಾಮ್‌ ಜಿ ಜಾರಿಗೆ ಖಂಡನೆ, ಬೆಂಗಳೂರಿನಲ್ಲಿ ಬಸವಣ್ಣ ಪಾರ್ಕ್

ಮನರೇಗಾ ಯೋಜನೆ ರದ್ದತಿ ಹಾಗೂ ಜಿ ರಾಮ್ ಜಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ತೀವ್ರವಾದ ಖಂಡನೆ ನಿರ್ಣಯ ಮಂಡಿಸಿದೆ. ಈ ಕುರಿತು ವಿವರವಾದ ಪತ್ರಿಕಾಗೋಷ್ಠಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೈಗೊಳ್ಳಲಿದ್ದಾರೆ. ಇದರ ಜೊತೆಗೆ ಇನ್ನೂ ಹಲವಾರು ಮಹತ್ವದ ನಿರ್ಣಯಗಳನ್ನು ಕ್ಯಾಬಿನೆಟ್‌ ತೆಗೆದುಕೊಂಡಿದೆ.

KSRTC news: ದುರಂತಗಳ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ರಾತ್ರಿ ಬಸ್ಸುಗಳಿಗೆ ಫುಲ್‌ ಸೇಫ್ಟಿ ವ್ಯವಸ್ಥೆ!

ಕೆಎಸ್‌ಆರ್‌ಟಿಸಿ ರಾತ್ರಿ ಬಸ್ಸುಗಳಿಗೆ ಸಂಪೂರ್ಣ ಸುರಕ್ಷತೆ ವ್ಯವಸ್ಥೆ ಜಾರಿ!

ಅಡಾಸ್ ಸಿಸ್ಟಮ್ ಡ್ರೈವಿಂಗ್ ವೇಳೆ, ಫೋನ್ ಬಳಕೆ ಮಾಡಿದರೆ, ನಿದ್ರೆಗೆ ಜಾರಿದರೆ, ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡರೆ ಕೋಲಿಜಿಯನ್ ವಾರ್ನಿಂಗ್ ನೀಡುತ್ತದೆ. ಈ ವೇಳೆ ಮೊದಲಿಗೆ ಬೀಪ್ ಸೌಂಡ್ ನೀಡುತ್ತದೆ. ನಂತರ ಕ್ರಿಟಿಕಲ್ ವಾರ್ನಿಂಗ್ ನೀಡಿ, ವಾಹನದ ವೇಗ ಮಿತಿ ಕಡಿಮೆ ಮಾಡಿ ಆಕ್ಸಿಡೆಂಟ್ ತಡೆಗಟ್ಟಲು ಸಹಾಯ ಮಾಡುತ್ತದೆ. ಡ್ರೈವರ್ ಡ್ರೈವಿಂಗ್ ಮಾಡುವ ವೇಳೆ ಕುಡಿದು ಬಂದಿದ್ದರೆ ವಾಹನ ಸ್ಟಾರ್ಟ್ ಆಗುವುದಿಲ್ಲ.

Bellari Firing: ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ ದಾಖಲು, ಬುಲೆಟ್‌ ಖಾಸಗಿ ರಿವಾಲ್ವರ್‌ನದ್ದು

ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ, ಬುಲೆಟ್‌ ಖಾಸಗಿ ರಿವಾಲ್ವರ್‌ನದು

ರಾಜಶೇಖರ್‌ಗೆ ತಾಗಿದ ಬುಲೆಟ್ ಸರ್ಕಾರಿ ಗನ್ ಮ್ಯಾನ್‌ನದ್ದಲ್ಲ. ಬುಲೆಟ್ ಹಾರಿದ್ದು ಖಾಸಗಿ ಗನ್ ಮ್ಯಾನ್‌ನ ರಿವಾಲ್ವರ್‌ನಿಂದ ಎಂದು ಘಟನಾ ಸ್ಥಳದ ಉಸ್ತುವಾರಿ ಎಸ್ಪಿ ರಂಜಿತ್ ಕುಮಾರ್ ಖಚಿತ ಪಡಿಸಿದ್ದಾರೆ. ನಿನ್ನೆ ಗಲಾಟೆ ವೇಳೆ ರಾಜಶೇಖರ್‌ ಸಾವಾಗಿದೆ. ಅದು ಪೊಲೀಸರು ಫೈರ್ ಮಾಡಿದಾಗ ತಗುಲಿರುವ ಬುಲೆಟ್ ಅಲ್ಲ. ಅದು ಖಾಸಗಿ ರಿವಾಲ್ವರ್ ಬುಲೆಟ್. ಇದರ ಬಗ್ಗೆ ತನಿಖೆ ಮಾಡ್ತೇವೆ ಎಂದಿದ್ದಾರೆ.

Bellari Firing: ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್, ಪೆಟ್ರೋಲ್‌ ಬಾಂಬ್‌ ತಂದಿದ್ರು:‌ ಶ್ರೀರಾಮುಲು ಆರೋಪ

ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್:‌ ಶ್ರೀರಾಮುಲು ಆರೋಪ

ನಾನು ಮನಸ್ಸು ಮಾಡಿದ್ರೆ ಬಳ್ಳಾರಿ ಭಸ್ಮ ಮಾಡ್ತೇನೆ ಅಂತ ಭರತ್ ರೆಡ್ಡಿ ಹೇಳಿದ್ದಾರೆ. ಯಾವನೋ ಒಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಅವರ ಮನೆ ಸುಡ್ತಿದ್ದೆ ಅಂತ ಭರತ್ ರೆಡ್ಡಿ ಅಂದಿದ್ದಾರೆ. ಅದಕ್ಕಾಗಿ ಅವರು ಎಲ್ಲವನ್ನೂ ತಂದಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಸುಡ್ತಿದ್ದೆ, ಬಳ್ಳಾರಿಯನ್ನ ಭಸ್ಮ ಮಾಡ್ತೇನೆ ಅನ್ನೋದನ್ನ ಕೇಳಿದ್ರೆ ಪೆಟ್ರೋಲ್ ಬಾಂಬ್ ಅವರೇ ತಂದಿದ್ದು ಎಂದು ಭರತ್ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ ಮಾಡಿದರು.

Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌, ಇಬ್ಬರ ಬಂಧನ

ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌, ಇಬ್ಬರ ಬಂಧನ

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

Dharmasthala Case: ಬುರುಡೆ ಕೇಸ್‌ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ; ಎಸ್‌ಐಟಿ ವರದಿ ವಿಚಾರಣೆಗೆ ಪ್ರತಿವಾದಿಯಾಗಿಸಲು ಅರ್ಜಿ

ಬುರುಡೆ ಕೇಸ್‌ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ; ಪ್ರತಿವಾದಿಯಾಗಿ ಅರ್ಜಿ

ದೇವಸ್ಥಾನದ ವಿರುದ್ಧ ಷಡ್ಯಂತ್ರ ನಡೆಸಿದವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದುವರೆಗೂ ಪ್ರಕರಣ ಸಂಬಂಧ ಸುಮ್ಮನಿದ್ದ ಶ್ರೀಕ್ಷೇತ್ರ ಧರ್ಮಸ್ಥಳ, ಇದೀಗ ಕಾನೂನಾತ್ಮಕ ಹೋರಾಟಕ್ಕೆ ಇಳಿದಿದೆ. ಎಸ್‌ಐಟಿ ವರದಿಯ ವಿಚಾರಣೆಯಲ್ಲಿ ತನ್ನನ್ನು ಪ್ರತಿವಾದಿಯನ್ನಾಗಿಸುವಂತೆ ಅರ್ಜಿ ಸಲ್ಲಿಸಿದೆ. ಶನಿವಾರ (ಜ.3) ಕೋರ್ಟ್‌ನಲ್ಲಿ ಅರ್ಜಿಯ ಕುರಿತು ನಿರ್ಧಾರ ಬರಲಿದೆ.

Iran protests: ಇರಾನ್‌ನಲ್ಲಿ ಬೀದಿಗಿಳಿದ ಜನ, ಭಾರಿ ಪ್ರತಿಭಟನೆ, 7 ಮಂದಿ ಸಾವು

ಇರಾನ್‌ನಲ್ಲಿ ಬೀದಿಗಿಳಿದ ಜನ, ಭಾರಿ ಪ್ರತಿಭಟನೆ, 7 ಮಂದಿ ಸಾವು

ದೇಶದ ಆರ್ಥಿಕ ಕುಸಿತ, ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆಗಳು ಯುವಜನರನ್ನು ಬೀದಿಗಿಳಿಯುವಂತೆ ಮಾಡಿವೆ. ಡಿಸೆಂಬರ್‌ನಲ್ಲಿ ಬೆಲೆಯೇರಿಕೆ ಪ್ರಮಾಣ ಅಧಿಕೃತವಾಗಿ 42.5 ಶೇಕಡಕ್ಕೆ ಏರಿಕೆಯಾಗಿದೆ. ಭಾನುವಾರ ಸರ್ಕಾರ ದೇಶಿ ಕರೆನ್ಸಿಯ ತೀವ್ರ ಕುಸಿತವನ್ನು ನಿಭಾಯಿಸಿದ ರೀತಿ ಹಾಗೂ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವ್ಯಾಪಾರಿಗಳು ಬೀದಿಗೆ ಇಳಿಯುವುದರೊಂದಿಗೆ ಈ ಪ್ರತಿಭಟನೆಗಳು ಆರಂಭವಾದವು.

PM Narendra Modi: ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸುರೇಶ್‌ ಕುಮಾರ್‌ 702 ಕಿಮೀ ಸೈಕಲ್‌ಯಾತ್ರೆ, ಪ್ರಧಾನಿ ಮೋದಿ ಮೆಚ್ಚುಗೆ

ಶಾಸಕ ಸುರೇಶ್‌ ಕುಮಾರ್‌ರಿಂದ 702 ಕಿಮೀ ಸೈಕಲ್‌ಯಾತ್ರೆ, ಮೋದಿ ಮೆಚ್ಚುಗೆ

70 ವರ್ಷದ ರಾಜಾಜಿನಗರದ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಇತ್ತೀಚೆಗೆ ತಿಂಗಳುಗಟ್ಟಲೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಪರೂಪದ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಆದರೂ 5 ದಿನಗಳ ಕಾಲ ಈ ಸವಾಲಿನ 702 ಕಿ.ಮೀ ಪ್ರಯಾಣವನ್ನು ಸೈಕಲ್​ನಲ್ಲೇ ಪೂರ್ಣಗೊಳಿಸಿದ್ದಾರೆ. ಈ ಸಾಹಸವನ್ನು ಪ್ರಧಾನಿ ಮೋದಿ ಮೆಚ್ಚಿಕೊಂಡಿದ್ದಾರೆ.

Bellari Firing: ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Road Accident: ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ಹಸಿ ಅಡಿಕೆ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ, ರಸ್ತೆಗೆ ವಾಹನ ಪಲ್ಟಿಯಾಗಿದೆ. ‌ಪರಿಣಾಮ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಹಾಸನ ಮೂಲದ ನೌಶದ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Vaikunta Ekadasi : ವೈಕುಂಠ ಏಕಾದಶಿಗೆ ಮನೆಯಲ್ಲೇ ಬಾಲಾಜಿಯ ದರ್ಶನ, ಯುವ ಉದ್ಯಮಿಯ ವಿಶಿಷ್ಟ ಸೇವೆ!

ವೈಕುಂಠ ಏಕಾದಶಿಗೆ ಮನೆಯಲ್ಲೇ ಬಾಲಾಜಿಯ ದರ್ಶನ, ಯುವ ಉದ್ಯಮಿಯ ವಿಶಿಷ್ಟ ಸೇವೆ!

ಬೆಂಗಳೂರಿನ ಯುವ ಉದ್ಯಮಿ ದೀಪಕ್‌ ಅವರು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರು. ಕಳೆದ 9 ವರ್ಷಗಳಿಂದ ಪ್ರತಿ ತಿಂಗಳೂ ತಿರುಮಲ ಬೆಟ್ಟವನ್ನು ಹತ್ತಿ ಬಾಲಾಜಿಯ ದರ್ಶನ ಪಡೆಯುತ್ತಾರೆ. ಬೆಂಗಳೂರಿನ ಜಯನಗರದಲ್ಲಿರುವ ಫ್ಲ್ಯಾಟ್‌ನಲ್ಲಿ ವೆಂಕಟೇಶ್ವರ ಸ್ವಾಮಿಯ ಪ್ರತಿಕೃತಿಯ ವಿಶೇಷ ಅಲಂಕಾರವನ್ನು ಮಾಡಿ, ಮಕ್ಕಳಿಗೆ , ಭಕ್ತರಿಗೆ ಆಧ್ಯಾತ್ಮಿಕ, ಸಂಸ್ಕೃತಿಯನ್ನು ಪರಿಚಯಿಸುತ್ತಾರೆ.

Murder Case: ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ.

New Year 2026: ಹೊಸ ವರ್ಷದ ಹಿಂದಿನ ದಿನ ನಮ್ಮ ಮೆಟ್ರೋದಲ್ಲಿ 8.93 ಲಕ್ಷ ಪ್ರಯಾಣಿಕರ ಸಂಚಾರ, ₹3.08 ಕೋಟಿ ಆದಾಯ

ಒಂದೇ ದಿನ ನಮ್ಮ ಮೆಟ್ರೋದಲ್ಲಿ 8.93 ಲಕ್ಷ ಜನ ಸಂಚಾರ, ₹3.08 ಕೋಟಿ ಆದಾಯ

2025ರ ಡಿ.31ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 3:10ರವರೆಗೆ ಮೆಟ್ರೋ ರೈಲುಗಳು (Namma Metro) ಸಂಚರಿಸಿದ್ದು, ಈ ಅವಧಿಯಲ್ಲಿ ಬರೋಬ್ಬರಿ 8,93,903 ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಒಂದೇ ದಿನದಲ್ಲಿ ನೇರಳೆ, ಹಸಿರು ಹಾಗೂ ಹಳದಿ ಮೂರು ಮಾರ್ಗ ಒಟ್ಟಾಗಿ ಬರೋಬ್ಬರಿ 3,08 ಕೋಟಿ ರೂ. ಆದಾಯ ಬಿಎಂಆರ್‌ಸಿಎಲ್‌ಗೆ ಹರಿದುಬಂದಿದೆ.

IPS Transfer: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 68 ಐಪಿಎಸ್‌ ಅಧಿಕಾರಿಗಳಿಗೆ ವರ್ಗ, ಬಡ್ತಿ

ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 68 ಐಪಿಎಸ್‌ ಅಧಿಕಾರಿಗಳಿಗೆ ವರ್ಗ, ಬಡ್ತಿ

ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಾಟೇರಿಯಾ, ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ದೀಪಕ್ ಜೈನ್, ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ. ಏಕ್‍ರೂಪ್ ಕೌರ್, ಬಿಎಂಆರ್‍ಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಜೆ. ಸೇರಿದಂತೆ 68 ಮಂದಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

Assault Case: ಕುಡಿದ ಮತ್ತಿನಲ್ಲಿ ಗಲಾಟೆ, ನಗರದಲ್ಲಿ ಕ್ಯಾಬ್‌ ಚಾಲಕನ ಮೇಲೆ ಅಮಾನುಷ ಹಲ್ಲೆ

ಕುಡಿದ ಮತ್ತಿನಲ್ಲಿ ಗಲಾಟೆ, ನಗರದಲ್ಲಿ ಕ್ಯಾಬ್‌ ಚಾಲಕನ ಮೇಲೆ ಅಮಾನುಷ ಹಲ್ಲೆ

ಹೊಸ ವರ್ಷ ಆಚರಣೆ ವೇಳೆ ಕುಡಿದ ಮತ್ತಿನಲ್ಲಿ ಓಡಾಡುತ್ತಿದ್ದ ಯುವಕರ ಗುಂಪೊಂದು, ಕಾರ್ಪೋರೇಷನ್ ಸರ್ಕಲ್ ಬಳಿ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದು ಟಚ್ ಮಾಡಿದೆ. ಈ ವೇಳೆ ಕಾರಿನ ಚಾಲಕ ಕೆಳಗೆ ಇಳಿದು, ಏಕೆ ಕಾರಿಗೆ ಡಿಕ್ಕಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಪ್ರಶ್ನೆಗೆ ಉತ್ತರ ನೀಡುವ ಬದಲು ಯುವಕರ ಗುಂಪು ಚಾಲಕನ ಮೇಲೆ ಹಿಂದಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿ ಹಲ್ಲೆ ನಡೆಸಿದೆ.

Nitte Vinaya Hegde: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ಇಂದು ಮುಂಜಾನೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರು ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು. ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

Loading...